ಚಿನ್ನದ ವ್ಯಾಪಾರಿಗಳಿಗೆ ವಂಚಿಸಿದ ಐಶ್ವರ್ಯಗೌಡ ಸಿಡಿಆರ್‌ ಪ್ರಕರಣದಲ್ಲಿ ಪಿಎಸ್‌ಐ ಸಹಕಾರ

KannadaprabhaNewsNetwork |  
Published : Feb 10, 2025, 01:46 AM ISTUpdated : Feb 10, 2025, 04:27 AM IST
ಸಿಡಿಆರ್‌ | Kannada Prabha

ಸಾರಾಂಶ

ಚಿನ್ನದ ವ್ಯಾಪಾರಿಗಳಿಗೆ ವಂಚಿಸಿದ ಆರೋಪ ಎದುರಿಸುತ್ತಿರುವ ಐಶ್ವರ್ಯ ಗೌಡಗೆ ಅಕ್ರಮವಾಗಿ ಖಾಸಗಿ ವ್ಯಕ್ತಿಗಳ ಮೊಬೈಲ್ ದತ್ತಾಂಶ ಸಂಗ್ರಹ (ಸಿಡಿಆರ್‌) ಪಡೆಯಲು ಓರ್ವ ಇನ್ಸ್‌ಪೆಕ್ಟರ್ ಹಾಗೂ ಸಬ್ ಇನ್ಸ್‌ಪೆಕ್ಟರ್‌ ಸಹಕಾರ ನೀಡಿದ್ದಾರೆಂಬ ಮಾತುಗಳು ಕೇಳಿ ಬಂದಿವೆ.

 ಬೆಂಗಳೂರು : ಚಿನ್ನದ ವ್ಯಾಪಾರಿಗಳಿಗೆ ವಂಚಿಸಿದ ಆರೋಪ ಎದುರಿಸುತ್ತಿರುವ ಐಶ್ವರ್ಯ ಗೌಡಗೆ ಅಕ್ರಮವಾಗಿ ಖಾಸಗಿ ವ್ಯಕ್ತಿಗಳ ಮೊಬೈಲ್ ದತ್ತಾಂಶ ಸಂಗ್ರಹ (ಸಿಡಿಆರ್‌) ಪಡೆಯಲು ಓರ್ವ ಇನ್ಸ್‌ಪೆಕ್ಟರ್ ಹಾಗೂ ಸಬ್ ಇನ್ಸ್‌ಪೆಕ್ಟರ್‌ ಸಹಕಾರ ನೀಡಿದ್ದಾರೆಂಬ ಮಾತುಗಳು ಕೇಳಿ ಬಂದಿವೆ.

ಈ ಕೃತ್ಯ ಬಯಲಾದ ಬೆನ್ನಲ್ಲೇ ಕೆಲ ಪೊಲೀಸರಿಗೆ ಬಂಧನ ಭೀತಿ ಶುರುವಾಗಿದ್ದು, ಇನ್ನೆರಡು ದಿನಗಳಲ್ಲಿ ಅಕ್ರಮ ಸಿಡಿಆರ್‌ ಪಡೆದ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆಯುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.

ಬೆಂಗಳೂರು ನಗರ ಹಾಗೂ ಹೊರ ಜಿಲ್ಲೆಗಳಲ್ಲಿ ಆ ಇನ್ಸ್‌ಪೆಕ್ಟರ್ ಕಾರ್ಯನಿರ್ವಹಿಸಿದ್ದು, ಹಲವು ವರ್ಷಗಳಿಂದ ಐಶ್ವರ್ಯಗೌಡಳಿಗೆ ಅವರು ಚಿರಪಚಿತರು. ಅದೇ ರೀತಿ ಕೆಲ ಆಮಿಷಗಳಿಗೆ ಬಲಿಯಾಗಿ ಆರೋಪಿಗೆ ಪಿಎಸ್‌ಐಗಳು ಹಾಗೂ ಕಾನ್‌ಸ್ಟೇಬಲ್‌ಗಳು ಸಹಕಾರ ಕೊಟ್ಟಿದ್ದಾರೆ. ಈಗಾಗಲೇ ಈ ಪೊಲೀಸರ ಕುರಿತು ಪ್ರಾಥಮಿಕ ಹಂತದ ತನಿಖೆಯಲ್ಲಿ ತನಿಖಾ ತಂಡ ಮಾಹಿತಿ ಕಲೆ ಹಾಕಿದೆ ಎಂದು ಮೂಲಗಳು ‘ಕನ್ನಡಪ್ರಭ’ಕ್ಕೆ ಮಾಹಿತಿ ನೀಡಿವೆ.

ಮಾಜಿ ಸಂಸದ ಡಿ.ಕೆ.ಸುರೇಶ್ ಹೆಸರಿನಲ್ಲಿ ಚಿನ್ನದ ವ್ಯಾಪಾರಿಗಳಿಗೆ ವಂಚಿಸಿದ ಆರೋಪದ ಮೇರೆಗೆ ಐಶ್ವರ್ಯಗೌಡಳ ಬಂಧನ ಬಳಿಕ ಬಿಡುಗಡೆಯಾಗಿತ್ತು. ಈ ಪ್ರಕರಣದ ತನಿಖೆ ವೇಳೆ ಕಾನೂನುಬಾಹಿರವಾಗಿ ಆಕೆ ಸಿಡಿಆರ್‌ ಪಡೆದಿದ್ದ ಕೃತ್ಯ ಬಯಲಾಗಿದೆ.

ಅಧಿಕಾರಿಗಳ ಜತೆ ಎಸಿಪಿ ಚರ್ಚೆ:

ಸಿಡಿಆರ್ ಪ್ರಕರಣದಲ್ಲಿ ಪೊಲೀಸರ ಹೆಸರು ಪ್ರಸ್ತಾಪವಾದ ಬೆನ್ನಲ್ಲೇ ತನಿಖೆ ಕುರಿತು ಹಿರಿಯ ಅಧಿಕಾರಿಗಳ ಜತೆ ವಿಜಯನಗರ ಉಪ ವಿಭಾಗದ ಎಸಿಪಿ ಚಂದನ್ ಕುಮಾರ್ ಸಮಾಲೋಚಿಸಿದ್ದಾರೆ. ಈ ಕೃತ್ಯದ ದೂರುದಾರರಾಗಿರುವ ಬ್ಯಾಟರಾಯನಪುರ ಎಸಿಪಿ ಭರತ್ ರೆಡ್ಡಿ ಅವರಿಂದ ಸಹ ಪ್ರಾಥಮಿಕ ಹಂತದ ಮಾಹಿತಿಯನ್ನು ಎಸಿಸಿ ಚಂದನ್ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

PREV
Stay informed with the latest crime news in Kannada from Karnataka and India, criminal incidents, police actions, investigations, court verdicts, public safety alerts and breaking updates on Kannada Prabha.

Recommended Stories

ಸಹವಾಸ, ಒತ್ತಾಯಕ್ಕೆ ಗಾಂಜಾ ಜಾಲಕ್ಕೆ ವಿದ್ಯಾರ್ಥಿಗಳು!
15 ವರ್ಷಗಳಿ ಸುವರ್ಣನ್ಯೂಸ್, ಕನ್ನಡಪ್ರಭದಲ್ಲಿ ಕೆಲಸ ಮಾಡುತ್ತಿದ್ದ ಮಹಿ‍ಳೆ ಅಪಘಾತದಲ್ಲಿ ದಾರುಣ ಸಾವು