- ಜಮೀನಿನ ಸಮಸ್ಯೆ ಬಗೆಹರಿಸುವುದಾಗಿ ನಂಬಿಸಿ ಮಹಿಳೆ ಮನವೊಲಿಕೆ
- ಆಗಾಗ್ಗೆ ಲೈಂಗಿಕ ಕ್ರಿಯೆಗೆ ಸಹಕರಿಸುವಂತೆ ಒತ್ತಡ: ಸಂತ್ರಸ್ತೆ ಆರೋಪ ಕನ್ನಡಪ್ರಭ ವಾರ್ತೆ ನಾಗಮಂಗಲ
ಜ್ಯೂಸ್ನಲ್ಲಿ ಅಮಲು ಬರುವ ಔಷಧ ನೀಡಿ ಅತ್ಯಾಚಾರವೆಸಗಿ ವಿಡಿಯೋ ಮಾಡಿಟ್ಟುಕೊಂಡು ಬ್ಲಾಕ್ಮೇಲ್ ಮಾಡುತ್ತಿದ್ದಾನೆ ಎಂದು ಸಂತ್ರಸ್ಥ ಮಹಿಳೆ ನೀಡಿದ ದೂರಿನ ಮೇರೆಗೆ ಗ್ರಾಮ ಲೆಕ್ಕಿಗನನ್ನು ಬೆಳ್ಳೂರು ಪೊಲೀಸರು ಬಂಧಿಸಿದ್ದಾರೆ.ಕದಬಹಳ್ಳಿ ವೃತ್ತದ ಗ್ರಾಮ ಲೆಕ್ಕಿಗ ಮರಿಸ್ವಾಮಿ ಬಂಧಿತ ಆರೋಪಿ. ಜಮೀನಿನ ವಿಚಾರಕ್ಕೆ ಸಂಬಂಧಿಸಿದಂತೆ ಸಹಾಯ ಕೇಳಿ ಬಂದಾಗ ಜ್ಯೂಸ್ನಲ್ಲಿ ಅಮಲು ಬರುವ ಔಷಧ ಮಿಶ್ರಣ ಮಾಡಿ ಕುಡಿಸಿ ಅತ್ಯಾಚಾರವೆಸಗಿದ್ದಾನೆ. ತಾನು ಎಸಗಿದ ಕೃತ್ಯದ ದೃಶ್ಯಾವಳಿಗಳನ್ನು ಮೊಬೈಲ್ನಲ್ಲಿ ವಿಡಿಯೋ ಮಾಡಿಟ್ಟುಕೊಂಡು ಬ್ಲಾಕ್ ಮೇಲ್ ಮಾಡುತ್ತಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಇದೇ ವಿಚಾರವನ್ನು ಮುಂದಿಟ್ಟುಕೊಂಡು ಸೆ.೧೬ ರಂದು ಅರಣಿ ಪಂಚಾಯ್ತಿಯಲ್ಲಿ ಎಸ್ಐಆರ್ನಲ್ಲಿ ನಿರತರಾಗಿದ್ದ ಸಮಯದಲ್ಲಿ ನನ್ನ ಕುತ್ತಿಗೆಯಲ್ಲಿದ್ದ ೪೦ ಗ್ರಾಂ ಚಿನ್ನದ ಸರ ಮತ್ತು ಹೊಂಡಾ ಡಿಯೋ ಬೈಕನ್ನು ಕಿತ್ತುಕೊಂಡು ಹೋಗಿದ್ದಾನೆ. ಸೆ.೧೭ ಮರಿಸ್ವಾಮಿ ಮತ್ತು ಮಂಜುಳ ಸೇರಿ ನನ್ನ ಗಂಡನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದೂರಿದ್ದಾರೆ.
ಮೂಲತಃ ಮೈಸೂರಿನವನಾದ ಮರಿಸ್ವಾಮಿ ನಿವೃತ್ತ ಸೇನಾನಿ. ಆ ನಂತರದಲ್ಲ ಗ್ರಾಮಲೆಕ್ಕಿಗನಾಗಿ ಕೆಲಸಕ್ಕೆ ಸೇರಿದ್ದನು. ಈತ ಗೊಂಡೇನಹಳ್ಳಿ ವೃತ್ತದ ಗ್ರಾಮಲೆಕ್ಕಿಗನಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಹೆಚ್ಚುವರಿಯಾಗಿ ಕದಬಹಳ್ಳಿ ವೃತ್ತದ ಗ್ರಾಮಲೆಕ್ಕಿಗನ ಕಾರ್ಯಭಾರವನ್ನು ನಿರ್ವಹಿಸುತ್ತಿದ್ದನು ಎನ್ನಲಾಗಿದೆ.