ಜೈಲಿನಲ್ಲಿ ರಾಜಾತಿಥ್ಯ ಪಡೆದ ಪ್ರಕರಣ ಸಂಬಂಧ ನಟ ದರ್ಶನ್ ಸೇರಿದಂತೆ ನಾಲ್ವರಿಗೆ ಪೊಲೀಸ್‌ ಗ್ರಿಲ್‌

Published : Aug 29, 2024, 09:54 AM IST
Actor Darshan  food

ಸಾರಾಂಶ

ಜೈಲಿನಲ್ಲಿ ರಾಜಾತಿಥ್ಯ ಪಡೆದ ಪ್ರಕರಣ ಸಂಬಂಧ ನಟ ದರ್ಶನ್ ಸೇರಿದಂತೆ ನಾಲ್ವರು ಆರೋಪಿಗಳನ್ನು ಆಗ್ನೇಯ ವಿಭಾಗದ ಪೊಲೀಸರು ಬುಧವಾರ ವಿಚಾರಣೆ ನಡೆಸಿದ್ದಾರೆ.

ಬೆಂಗಳೂರು  : ಜೈಲಿನಲ್ಲಿ ರಾಜಾತಿಥ್ಯ ಪಡೆದ ಪ್ರಕರಣ ಸಂಬಂಧ ನಟ ದರ್ಶನ್ ಸೇರಿದಂತೆ ನಾಲ್ವರು ಆರೋಪಿಗಳನ್ನು ಆಗ್ನೇಯ ವಿಭಾಗದ ಪೊಲೀಸರು ಬುಧವಾರ ವಿಚಾರಣೆ ನಡೆಸಿದ್ದಾರೆ.

ನಟ ದರ್ಶನ್‌, ಅವರ ಆಪ್ತ ನಾಗರಾಜ, ರೌಡಿಗಳಾದ ನಾಗರಾಜ ಅಲಿಯಾಸ್ ವಿಲ್ಸನ್ ಗಾರ್ಡನ್‌ ನಾಗರಾಜ, ಶ್ರೀನಿವಾಸ ಅಲಿಯಾಸ್ ಕುಳ್ಳ ಸೀನ ಹಾಗೂ ಧರ್ಮನನ್ನು ಪೊಲೀಸರು ತೀವ್ರ ವಿಚಾರಣೆ ನಡೆಸಿ ಹೇಳಿಕೆ ಪಡೆದಿದ್ದಾರೆ ಎನ್ನಲಾಗಿದೆ. ಆದರೆ ದರ್ಶನ್ ಅವರ ಸೆಲ್‌ನಲ್ಲಿ ಮೊಬೈಲ್ ಹಾಗೂ ಸಿಗರೇಟ್ ಪತ್ತೆಯಾಗಿಲ್ಲ. ಹೀಗಾಗಿ ಮೊಬೈಲ್ ಸಂಬಂಧ ಗುರುವಾರ ಕೂಡ ಅವರನ್ನು ಮತ್ತೆ ಪೊಲೀಸರು ವಿಚಾರಣೆ ಮುಂದುವರೆಸಲಿದ್ದಾರೆ ಎಂದು ತಿಳಿದು ಬಂದಿದೆ.

ಜೈಲಿನಲ್ಲಿ ರೌಡಿಗಳ ಜತೆ ಸಿಗರೇಟ್ ಸೇದುತ್ತ ಕುರ್ಚಿಯಲ್ಲಿ ದರ್ಶನ್‌ ಕುಳಿತಿದ್ದ ಪೋಟೋ ವೈರಲ್ ಆಗಿತ್ತು. ಆ ಪೋಟೋ ತೆಗೆದ ಸ್ಥಳವನ್ನು ಪೊಲೀಸರು ಪರಿಶೀಲಿಸಿದ್ದು, ದರ್ಶನ್ ಹಾಗೂ ಅವರೊಂದಿಗೆ ಇದ್ದ ರೌಡಿಗಳನ್ನು ಕರೆದೊಯ್ದು ಮಹಜರ್ ಕೂಡ ನಡೆಸಿದ್ದಾರೆ ಎನ್ನಲಾಗಿದೆ.

PREV
Stay informed with the latest crime news in Kannada from Karnataka and India, criminal incidents, police actions, investigations, court verdicts, public safety alerts and breaking updates on Kannada Prabha.

Recommended Stories

ಬೆಂಗಳೂರಲ್ಲಿ ಮೊಬೈಲ್ ಕದಿಯಲು ದೆಹಲಿಯಿಂದ ವಿಮಾನದಲ್ಲಿ ಬರುತ್ತಿದ್ದ ಚಾಲಾಕಿಗಳ ಬಂಧನ
ಬೀಗ ಹಾಕಿದ ಮನೆಗಳಲ್ಲಿ ಕಳ್ಳತನ ಮಾಡುತ್ತಿದ್ದ ಇಬ್ಬರ ಬಂಧನ