ಕೊನ್ಮಾಪುರ ದೊಡ್ಡಿ ಗೇಟ್ ಬಳಿ ಸೋಲಾರ್ ಬ್ಯಾಟರಿ ಕಳವು

KannadaprabhaNewsNetwork |  
Published : Feb 25, 2026, 02:00 AM IST
24ಕೆಎಂಎನ್ ಡಿ26 | Kannada Prabha

ಸಾರಾಂಶ

ಹಲಗೂರು ಸಮೀಪದ ಕೊನ್ಮಾಪುರ ದೊಡ್ಡಿ ಗೇಟ್ ಬಳಿ ಕಾಡಾನೆಗಳನ್ನು ತಡೆಯಲು ಅಳವಡಿಸಿದ್ದ 2 ಸೋಲಾರ್ ಬ್ಯಾಟರಿಗಳನ್ನು ಫೆ.22ರ ಭಾನುವಾರ ರಾತ್ರಿ ಕಳ್ಳರು ಕದ್ದೊಯ್ದಿರುವ ಘಟನೆ ನಡೆದಿದೆ.

ಹಲಗೂರು:

ಸಮೀಪದ ಕೊನ್ಮಾಪುರ ದೊಡ್ಡಿ ಗೇಟ್ ಬಳಿ ಕಾಡಾನೆಗಳನ್ನು ತಡೆಯಲು ಅಳವಡಿಸಿದ್ದ 2 ಸೋಲಾರ್ ಬ್ಯಾಟರಿಗಳನ್ನು ಫೆ.22ರ ಭಾನುವಾರ ರಾತ್ರಿ ಕಳ್ಳರು ಕದ್ದೊಯ್ದಿರುವ ಘಟನೆ ನಡೆದಿದೆ.

ಕಾಡಾನೆಗಳು ಮತ್ತು ಕಾಡು ಪ್ರಾಣಿಗಳು ಅರಣ್ಯ ಪ್ರದೇಶದಿಂದ ಜನವಸತಿ ಪ್ರದೇಶಗಳತ್ತ ಬರುವುದನ್ನು ತಡೆಗಟ್ಟಲು ಕಾವೇರಿ ವನ್ಯಜೀವಿ ವಲಯದ ಶಿಂಷಾ ಶಾಖೆಯ ತಾಳವಾಡಿ ಗಸ್ತಿನಲ್ಲಿ ಸೋಲಾರ್ ಟೆಂಟ್ ಕಲ್ ಬೇಲಿ ಅಳವಡಿಸಲಾಗಿತ್ತು. ಸದರಿ ಕನೆಕ್ಷನ್‌ಗೆ 2 ಸೋಲಾರ್ ಬ್ಯಾಟರಿ ಅಳವಡಿಸಲಾಗಿತ್ತು. ಭಾನುವಾರ ತಡರಾತ್ರಿ ಕಳ್ಳರು ಸೋಲಾರ್ ಬ್ಯಾಟರಿಗಳಿದ್ದ ಪೆಟ್ಟಿಗೆಗಳನ್ನು ಒಡೆದು ಕಳವು ಮಾಡಿದ್ದಾರೆ. ಈ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಬೈಕ್‌ಗಳ ನಡುವೆ ಅಪಘಾತ: ಓರ್ವ ಸವಾರ ಸಾವು

ಮದ್ದೂರು: ಎರಡು ಬೈಕ್ ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಪಟ್ಟಣದ ತಾಲೂಕ ಕಚೇರಿ ಬಳಿ ಸೋಮವಾರ ಮಧ್ಯರಾತ್ರಿ ಜರುಗಿದೆ.

ವಿಳ್ಳೇದೆಲೆ ವ್ಯಾಪಾರಿ ಲೇ.ಶಿವ ಅವರ ಪುತ್ರ ನಾಗೇಂದ್ರ (37) ಮೃತಪಟ್ಟವರು. ಪಟ್ಟಣದ ಕೊಲ್ಲಿ ಸರ್ಕಲ್ ಬಳಿ ಕೋಳಿ ಮೊಟ್ಟೆ ಮಾರಿಕೊಂಡು ಜೀವನ ನಡೆಸುತ್ತಿದ್ದ ನಾಗೇಂದ್ರ ರಾತ್ರಿ 12.30 ಸುಮಾರಿಗೆ ವ್ಯಾಪಾರ ಮುಗಿಸಿ ತನ್ನ ಬೈಕ್‌ನಲ್ಲಿ ಟಿ.ಬಿ. ಸರ್ಕಲ್ ಕಡೆಗೆ ಹೋಗುತ್ತಿದ್ದಾಗ ತಾಲೂಕ ಕಚೇರಿ ಸಮೀಪದ ಬೆಂಗಳೂರು ಮೈಸೂರು ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ಹಿಂದಿನಿಂದ ವೇಗವಾಗಿ ಬಂದ ಮತ್ತೊಂದು ಬೈಕ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಈ ಸಂಬಂಧ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲ ಮಾಡಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಭೂ ದಾಖಲೆಗಳ ಅಕ್ರಮ ಖಾತೆ: ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ, ದಾಖಲೆ ಪರಿಶೀಲನೆ

ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ

ತಾಲೂಕಿನ ಬೆಳಗೊಳ ಗ್ರಾಮದ ಸರ್ವೇ ನಂ 101ರ ಭೂ ದಾಖಲೆಗಳ ಅಕ್ರಮ ಖಾತೆ ಸಂಬಂಧದ ದೂರಿನ ಮೇರೆಗೆ ಲೋಕಾಯುಕ್ತ ಸಿಪಿಐ ಶಶಿಕುಮಾರ್‌ ನೇತೃತ್ವದಲ್ಲಿ ಅಧಿಕಾರಿಗಳು ಪ್ರತ್ಯೇಕ ಸ್ಥಳಗಳಲ್ಲಿ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದರು.

ಮಂಗಳವಾರ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ತಾಲೂಕು ಕಚೇರಿ, ಬೆಳಗೊಳ ನಾಡ ಕಚೇರಿ ಹಾಗೂ ಗ್ರಾಮ ಸಹಾಯಕ ಮನೆ ಮೇಲೆ ದಾಳಿ ನಡೆಸಿ ಅಗತ್ಯ ದಾಖಲೆ ಪರಿಶೀಲಿಸಿ ಮಾಹಿತಿ ಸಂಗ್ರಹಿಸಿದರು.

ಬೆಳಗ್ಗೆ 10 ಗಂಟೆಗೆ ಗ್ರಾಮ ಸಹಾಯಕ ಬಸವಯ್ಯ ಅವರ ಹೊಲದ ಬಳಿಯ ಮನೆಗೆ ಧಾವಿಸಿದ ಲೋಕಾಯುಕ್ತ ಅಧಿಕಾರಿಗಳು ಸುಮಾರು 3 ಗಂಟೆಗಳ ಕಾಲ ತಪಾಸಣೆ ನಡೆಸಿ ಕೆಲವು ದಾಖಲೆ ವಶಕ್ಕೆ ಪಡೆದರು.

ನಂತರ ಬೆಳಗೊಳ ಗ್ರಾಮದ ಮಜ್ಜಿಗೆಪುರ ರಸ್ತೆಯ ನಾಡ ಕಚೇರಿಗೂ ಭೇಟಿ ನೀಡಿದ ತಂಡ ಕಚೇರಿಯಲ್ಲಿ ಕೆಲವು ದಾಖಲೆಗಳನ್ನು ಪರಿಶೀಲಿಸಿ ದೃಢೀಕೃತಿ ಪ್ರತಿ ಪಡೆದು ಉಪತಹಸೀಲ್ದಾರ್ ವರುಣ ಅವರಿಂದ ಮಾಹಿತಿ ಸಂಗ್ರಹಿಸಿದರು.

ತಾಲೂಕು ಕಚೇರಿಯಲ್ಲಿ ಬೆಳಗ್ಗಿನಿಂದಲೇ ಕಡತಗಳ ಶೋಧ ಕಾರ್ಯ ನಡೆಸಿದ ಅಧಿಕಾರಿಗಳು, ಸಂಜೆ ವರೆವಿಗೂ ಮುಂದುವರಿಸಿ ಸ್ಥಳೀಯ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

PREV
Stay informed with the latest crime news in Kannada from Karnataka and India, criminal incidents, police actions, investigations, court verdicts, public safety alerts and breaking updates on Kannada Prabha.

Recommended Stories

ಲಿವ್‌-ಇನ್‌ ಗೆಳತಿ ಗುಪ್ತಾಂಗಕ್ಕೆ ಸ್ಯಾನಿಟೈಸರ್‌ ಸುರಿದು ಬೆಂಕಿ
₹5 ಅಕ್ರಮದಲ್ಲಿ ಪಾರಾಗಿದ್ದ ಲಮಾಣಿ ₹5 ಲಕ್ಷ ಕೇಸ್‌ನಲ್ಲಿ ಲೋಕಾ ಖೆಡ್ಡಾಕ್ಕೆ!