ಶ್ರೀರಂಗನಾಥಸ್ವಾಮಿ ರಂಗಮುಡಿ ಮಹೋತ್ಸವ

KannadaprabhaNewsNetwork |  
Published : Apr 25, 2026, 01:30 AM IST
24ಕೆಎಂಎನ್ ಡಿ14 | Kannada Prabha

ಸಾರಾಂಶ

ಐತಿಹಾಸಿಕ ಶ್ರೀರಂಗನಾಥಸ್ವಾಮಿ ದೇವಾಲಯದಲ್ಲಿ ಶ್ರೀ ರಂಗಮುಡಿ ಮಹೋತ್ಸವ ಗುರುವಾರ ಸಂಜೆ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಸಡಗರ ಸಂಭ್ರಮದಿಂದ ನಡೆಯಿತು.

ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣಐತಿಹಾಸಿಕ ಶ್ರೀರಂಗನಾಥಸ್ವಾಮಿ ದೇವಾಲಯದಲ್ಲಿ ಶ್ರೀ ರಂಗಮುಡಿ ಮಹೋತ್ಸವ ಗುರುವಾರ ಸಂಜೆ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಸಡಗರ ಸಂಭ್ರಮದಿಂದ ನಡೆಯಿತು.

ಶ್ರೀರಂಗನಾಥನ ಜಯಂತಿ ಪ್ರಯುಕ್ತ ಪಟ್ಟಣದ ಶ್ರೀರಂಗನಾಥ ದೇವಾಲಯದಲ್ಲಿ ಶ್ರೀ ರಂಗಮುಡಿ ಉತ್ಸವವನ್ನು ದೇವಾಲಯದ ಅರ್ಚಕರ ತಂಡ ಹಾಗೂ ಆಡಳಿತ ಮಂಡಳಿ ಸದಸ್ಯರ ನೇತೃತ್ವದಲ್ಲಿ ಶ್ರೀರಂಗನ ಉತ್ಸವ ಮೂರ್ತಿ ಹಾಗೂ ಶ್ರೀರಂಗನಾಯಕಮ್ಮ ಅವರಿಗೆ ವಜ್ರಖಚಿತ ಕಿರುಮುಡಿಯ ಧಾರಣೆ ಮಾಡಲಾಯಿತು. ನಂತರ ಉತ್ಸವ ಮೂರ್ತಿಗಳನ್ನು ಪಟ್ಟಣದ ಪ್ರಮುಖ ಬೀದಿಯಲ್ಲಿ ಮೆರವಣಿಗೆ ಮಾಡಲಾಯಿತು. ಶ್ರೀರಂಗಮುಡಿ ಉತ್ಸವ ಮೂರ್ತಿ ಮೆರವಣಿಗೆಗೆ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಸೋಮಶೇಖರ್ ಹಾಗೂ ದೇವಾಲಯದ ಇಒ ಉಮಾ ಚಾಲನೆ ನೀಡಿದರು.

ಶ್ರೀರಂಗನಾಥಸ್ವಾಮಿ ಹಾಗೂ ರಂಗನಾಯಕಿ ಅಮ್ಮನವರ ವಿಗ್ರಹಕ್ಕೆ ಮುಂಜಾನೆಯಿಂದಲೇ ವಿಶೇಷ ಪೂಜಾ ಕೈಂಕರ್ಯಗಳು ಹಾಗೂ ದೇವರಿಗೆ ಮಹಾಭಿಷೇಕವನ್ನು ದೇವಾಲಯದ ಪ್ರಧಾನ ಅರ್ಚಕ ವಿಜಯಸಾರಥಿ ನೇತೃತ್ವದಲ್ಲಿ ಜರುಗಿತು. ಮಧ್ಯಾಹ್ನ ನೆರದಿದ್ದ ಭಕ್ತರಿಗೆ ಪ್ರಸಾದ ನಿಯೋಗ ನಡೆಸಲಾಯಿತು. ಸಂಜೆ ಪಟ್ಟಣದ ಉಪ ಖಜಾನೆಯಲ್ಲಿದ್ದ ವಜ್ರ ಖಚಿತ ಚಿನ್ನದ ಕಿರೀಟವನ್ನು ರಂಗನಾಥಸ್ವಾಮಿಗೆ ಕಿರೀಟ ಧಾರಣೆ ಮಾಡಿ ಪಲ್ಲಕಿ ಮೇಲಿರಿಸಿ ಪಟ್ಟಣದ ರಾಜಬೀದಿ, ಪೂರ್ಣಯ್ಯ ಬೀದಿ ಮತ್ತು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಉತ್ಸವಮೂರ್ತಿಯ ಮೆರವಣಿಗೆ ಮಾಡಲಾಯಿತು. ಮೆರವಣಿಗೆ ನಡೆಯುವ ಬೀದಿಗಳಲ್ಲಿ ಮಹಿಳೆಯರು ರಂಗವಲ್ಲಿ ಹಾಕಿ ಹಣ್ಣು ಆರತಿ ಪೂಜೆ ಸಲ್ಲಿಸಿದರು. ದಾರಿಯುದ್ದಕ್ಕೂ ಶ್ರೀರಂಗನ ಭಕ್ತರು ಸಾಲುಗಟ್ಟಿ ದೇವರ ದರ್ಶನ ಪಡೆದರು. ರಂಗಮುಡಿ ಉತ್ಸವದ ಅಂಗವಾಗಿ ರಾಜ್ಯವಲ್ಲದೆ, ತಮಿಳುನಾಡು, ಆಂಧ್ರಪ್ರದೇಶ ಹಾಗೂ ರಾಜ್ಯದ ಬೆಂಗಳೂರು, ಮೈಸೂರು, ಮಂಡ್ಯ ಇತರೆಡೆಯಿಂದ ಸಾವಿರಾರು ಭಕ್ತರು ಆಗಮಿಸಿದ್ದರು.

PREV
Stay informed with the latest crime news in Kannada from Karnataka and India, criminal incidents, police actions, investigations, court verdicts, public safety alerts and breaking updates on Kannada Prabha.

Recommended Stories

ನವಜಾತ ಶಿಶು ಕತ್ತು ಕುಯ್ದು ಟಾಯ್ಲೆಟ್‌ಗೆ ಎಸೆದ ತಾಯಿ
ಸಾಲಗಾರರ ಕಾಟ: 17 ನೇಮಹಡಿಯಿಂದ ಹಾರಿ ಆತ್ಮ*ತ್ಯೆ