ಶ್ರೀರಂಗಪಟ್ಟಣ:
ಬೆಂಗಳೂರು ಮೂಲದ ಕೃಷ್ಣರ ಪುತ್ರ ಸುರೇಶ್ (26) ಕೊಲೆಯಾದ ವ್ಯಕ್ತಿ ಎಂದು ತಿಳಿದು ಬಂದಿದೆ.
ಮಂಡ್ಯದ ನಿಖಿಲ್ ಎಂಬ ಸ್ನೇಹಿತನೊಂದಿಗೆ ಮಂಗಳವಾರ ಸಂಜೆ ಶ್ರೀರಂಗಪಟ್ಟಣಕ್ಕೆ ಬಂದು ರಾಂಪುರಕ್ಕೆ ಹೋಗುವ ಉತ್ತರ ಕಾವೇರಿ ನದಿಗೆ ಅಡ್ಡಲಾಗಿರುವ ಹಳೇ ರೈಲ್ವೆ ಸೇತುವೆ ಮೇಲೆ ಕುಳಿತು ಮದ್ಯೆ ಸೇವಿಸಿ ಮತ್ತು ಬಂದ ನಂತರ ಸುರೇಶ್ ಗೆ ಸ್ನೇಹಿತ ನಿಖಿಲ್ ತಲೆಗೆ ಹೊಡೆದು ಕೊಲೆ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.ಕೊಲೆಯಾದ ಸ್ಥಳದಲ್ಲಿ ಮೃತನ ಮೊಬೈಲ್ ದೊರೆತಿದ್ದು, ಆತನ ಮೊಬೈಲ್ ನಿಂದ ಮೃತ ಸುರೇಶ್ ಅವರ ಪೋಷಕರಿಗೆ ಮಾಹಿತಿ ತಿಳಿಸಿದ್ದಾರೆ. ಸ್ಥಳಕ್ಕೆ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಎಎಸ್ಪಿ ಸಿ.ಇ.ತಿಮ್ಮಯ್ಯ, ಡಿವೈಎಸ್ಪಿ ಶಾಂತ ಮಲ್ಲಪ್ಪ, ಸಿಪಿಐ ಬಿ.ಜಿ ಕುಮಾರ್ ಸೇರಿದಂತೆ ಇತರೆ ಹಿರಿಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಶವವನ್ನು ಮೈಸೂರಿನ ಕೆಆರ್ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಕುರಿತು ಪ್ರಕರಣ ಪಟ್ಟಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಮನೆ ಬಾಗಿಲು ಮುರಿದು ಚಿನ್ನಾಭರಣ ದೋಚಿದ ಕಳ್ಳರು
ಗ್ರಾಮದ ಟಿ.ಎಲ್.ಶಿವಪ್ಪ ಅವರು ಬೆಂಗಳೂರಿಗೆ ತೆರಳಿದ್ದರು. ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು ಬೀರುವಿನಲ್ಲಿದ್ದ 15 ಗ್ರಾಂ ಚಿನ್ನಾಭರಣ ಸೇರಿದಂತೆ ಬೆಳ್ಳಿ ಸಾಮಗ್ರಿಗಳನ್ನು ದೋಚಿ ಪರಾರಿಯಾಗಿದ್ದಾರೆ. ಬುಧವಾರ ಬೆಳಗಿನ ಜಾವ ಪಕ್ಕದ ಮನೆಯವರು ಕಳ್ಳತನವಾಗಿರುವುದನ್ನು ಗಮನಿಸಿದ್ದಾರೆ. ಸ್ಥಳಕ್ಕೆ ಡಿವೈಎಸ್ ಪಿ ಎಸ್.ಬಿ.ಯಶವಂತ ಕುಮಾರ್, ಸಿಪಿಐ ಬವಸರಾಜು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಂಡ್ಯ: ತಾಲೂಕಿನ ಯಲಿಯೂರು ಮಂಡ್ಯ ರೈಲು ನಿಲ್ದಾಣಗಳ ನಡುವೆ ಕಿ.ಮೀ ನಂಬರ್ 98/300-400 ರಲ್ಲಿ ರೈಲುಗಾಡಿ ಗುದ್ದಿ ಅಪರಿಚಿತ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ಮೈಸೂರು ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ವ್ಯಕ್ತಿಗೆ ಸುಮಾರು 50-60 ವರ್ಷವಾಗಿದೆ. 5 ಅಡಿ ಎತ್ತರ, ಕಪ್ಪು ಮೈ ಬಣ್ಣ, ಸಾಧಾರಣ ಶರೀರ, ಬಿಳಿ ಮೀಸೆ ಹೊಂದಿದ್ದು ಮೈ ಮೇಲೆ ತಿಳಿ ನೀಲಿ ಬಣ್ಣದ ಬನಿಯನ್, ಬಿಳಿ ಬಣ್ಣದ ಕಪ್ಪು ಗೆರೆ ಇರುವ ಶರ್ಟ್, ಕಪ್ಪು ಬಣ್ಣದ ಚಡ್ಡಿ, ನೀಲಿ ಬಣ್ಣದ ಟರ್ಕಿ ಟವಲ್, ಕೆಂಪು ಧರಿಸಿರುತ್ತಾರೆ. ವಾರಸುದಾರರಿದಲ್ಲಿ ದೂ.-0821-2516579ಸ ಮೊ-9480802122 ಅನ್ನು ಸಂಪರ್ಕಿಸಬಹುದು ಎಂದು ಮೈಸೂರು ರೈಲ್ವೆ ಪೊಲೀಸ್ ಠಾಣೆ ಆರಕ್ಷಕ ಉಪನೀರಿಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.