ಕನ್ನಡಪ್ರಭ ವಾರ್ತೆ ಬೆಂಗಳೂರು
ಮಲ್ಲೇಶ್ವರ ನಿವಾಸಿ ಕುಸುಮಿತಾ(21) ಮೃತ ವಿದ್ಯಾರ್ಥಿನಿ. ಮಹಾಕವಿ ಕುವೆಂಪು ರಸ್ತೆಯ ದೇವಯ್ಯ ಪಾರ್ಕ್ ಬಳಿ ಶುಕ್ರವಾರ ಬೆಳಗ್ಗೆ 8.30ರ ಸುಮಾರಿಗೆ ಈ ಘಟನೆ ನಡೆದಿದೆ.
ಮೃತ ಕುಸುಮಿತಾ ರಾಜರಾಜೇಶ್ವರಿನಗರದ ಜೆಎಸ್ಎಸ್ ಎಂಜಿನಿಯರಿಂಗ್ ಕಾಲೇಜಿನಲ್ಲಿ 2ನೇ ವರ್ಷದ ಬಿಇ ವ್ಯಾಸಂಗ ಮಾಡುತ್ತಿದ್ದಳು. ಬೆಳಗ್ಗೆ ದ್ವಿಚಕ್ರ ವಾಹನದಲ್ಲಿ ಕಾಲೇಜಿಗೆ ಹೊರಟ್ಟಿದ್ದಳು. ಮಹಕಾವಿ ಕುವೆಂಪು ರಸ್ತೆಯಲ್ಲಿ ನವರಂಗ್ ಥಿಯೇಟರ್ ಕಡೆಗೆ ಹೋಗುವಾಗ ಹಿಂದಿನಿಂದ ವೇಗವಾಗಿ ಬಂದ ಬಿಎಂಟಿಸಿ ಬಸ್, ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿದೆ.ಡಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನ ಸಹಿತ ರಸ್ತೆಗೆ ಬಿದ್ದ ಕುಸುಮಿತಾಳನ್ನು ಸುಮಾರು 15 ಅಡಿಗಳಷ್ಟು ದೂರಕ್ಕೆ ಬಸ್ ಎಳೆದೊಯ್ದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಕುಸುಮಿತಾಳನ್ನು ಸ್ಥಳೀಯರು ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಕುಸುಮಿತಾ ತೀವ್ರ ರಕ್ತಸ್ರಾವವಾಗಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾಳೆ. ಸುದ್ದಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು, ಬಿಎಂಟಿಸಿ ಬಸ್ ಹಾಗೂ ಅದರ ಚಾಲಕನ್ನು ವಶಕ್ಕೆ ಪಡೆದಿದ್ದಾರೆ.
ಅಪಘಾತದ ಸುದ್ದಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಮೃತ ವಿದ್ಯಾರ್ಥಿನಿ ಕುಸುಮಿತಾಳ ಪೋಷಕರು ಹಾಗೂ ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿತ್ತು. ಮಗಳು ನಿತ್ಯ ಮೆಟ್ರೋ ರೈಲಿನಲ್ಲಿ ಕಾಲೇಜಿಗೆ ಹೋಗುತ್ತಿದ್ದಳು. ತಡವಾದ ಹಿನ್ನೆಲೆಯಲ್ಲಿ ದ್ವಿಚಕ್ರ ವಾಹನದಲ್ಲಿ ಕಾಲೇಜಿಗೆ ಹೋಗುತ್ತಿದ್ದಳು. ಆದರೆ, ಬಿಎಂಟಿಸಿ ಬಸ್ ನಮ್ಮ ಮಗಳನ್ನು ಬಲಿ ಪಡೆದಿದೆ. ಇನ್ನು ಯಾರಿಗೂ ಈ ರೀತಿ ಆಗಬಾರದು ಎಂದು ಮೃತ ವಿದ್ಯಾರ್ಥಿನಿ ತಂದೆ ಹರಿಪ್ರಕಾಶ್ ಕಣ್ಣೀರಿಟ್ಟರು.
ಬೈಕ್ ಸ್ಕಿಡ್: ಬಿಎಂಟಿಸಿ