ಕನ್ನಡಪ್ರಭ ವಾರ್ತೆ ಮದ್ದೂರು
ಘಟನೆ ಕುರಿತಂತೆ ಪೊಲೀಸರು ಗೌಪ್ಯತೆ ಕಾಪಾಡಿರುವುದು ಅನೇಕ ಅನುಮಾನಗಳಿಗೆ ಕಾರಣವಾಗಿದೆ. ಶಿವಮೊಗ್ಗದ ಕಾರಾಗೃಹದಲ್ಲಿ ಕರ್ತವ್ಯ ಲೋಪದ ಮೇಲೆ ಈಚೆಗೆ ಅಮಾನತ್ತುಗೊಂಡಿರುವ ಜಯರಾಮ 52 ಠಾಣೆಯ ಸಿಬ್ಬಂದಿ ಎದುರೇ ಮೈ ಮೇಲೆ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಯತ್ನಿಸಿ ತೀವ್ರವಾಗಿ ಗಾಯಗೊಂಡಿದ್ದಾರೆ.
ಭಾನುವಾರ ರಾತ್ರಿ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ಬೆಂಕಿಯನ್ನು ನಂದಿಸಿ ಜಯರಾಮನನ್ನು ರಕ್ಷಣೆ ಮಾಡಿದ ನಂತರ ಮದ್ದೂರು ಮತ್ತು ಮಂಡ್ಯ ಜಿಲ್ಲಾಸ್ಪತ್ರೆಗೆ ಕರೆತಂದು ಪ್ರಥಮ ಚಿಕಿತ್ಸೆ ನೀಡಿದ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಜೆಎಸ್ಎಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೆಂಕಿಯಿಂದ ಈತನ ತಲೆಗೆ ತೀವ್ರ ಸುಟ್ಟಗಾಯವಾಗಿದೆ. ಪರಿಸ್ಥಿತಿ ಚಿಂತಾ ಜನಕವಾಗಿದೆ.ಮೂಲತಃ ಮಂಡ್ಯದ ದ್ವಾರಕಾನಗರದ ನಿವಾಸಿ ಜಯರಾಮು ಮದ್ದೂರು ತಾಲೂಕು ರುದ್ರಾಕ್ಷಿಪುರ ಗ್ರಾಮದ ಪತ್ನಿ ಹಾಗೂ ಜಯರಾಮ್ ನಡುವೆ ಕಳೆದ ಎರಡು ದಿನಗಳ ಹಿಂದೆ ಗಲಾಟೆಯಾಗಿದೆ. ಈ ಬಗ್ಗೆ ಜಯರಾಮ ಮದ್ದೂರು ಠಾಣೆಗೆ ದೂರು ನೀಡಿದ್ದರೂ ಸಹ ಕರ್ತವ್ಯದಲ್ಲಿದ್ದ ಅಧಿಕಾರಿಗಳು ದೂರು ದಾಖಲು ಮಾಡಿಕೊಳ್ಳದೆ ನಿರ್ಲಕ್ಷ ಮಾಡಿದ್ದರು.
ಈ ಸಂಬಂಧ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ಸೋಮವಾರ ಬೆಳಗ್ಗೆ ಮದ್ದೂರಿಗೆ ದಿಢೀರ್ ಭೇಟಿ ಘಟನೆ ಕುರಿತಂತೆ ಮಾಹಿತಿ ಪಡೆದುಕೊಂಡರು.