ಕನ್ನಡಪ್ರಭ ವಾರ್ತೆ ಪಾಂಡವಪುರ
ಗ್ರಾಮದ ನರಸಿಂಹೇಗೌಡ (55) ಕೊಲೆಯಾದ ವ್ಯಕ್ತಿ. ಅದೇ ಗ್ರಾಮದ ವೆಂಕಟೇಶ್, ಮಂಜುನಾಥ್ ಕೊಲೆಗೈದು ಪೊಲೀಸರಿಗೆ ಶರಣಾಗಿದ್ದಾರೆ. ಮಗಳ ಕೊಲೆ ಪ್ರತೀಕಾರಕ್ಕೆ ಕೊಲೆ ಆರೋಪಿಯ ತಂದೆಯನ್ನು ಹತ್ಯೆ ಮಾಡಲಾಗಿದೆ.
ಕೊಲೆಯಾದ ನರಸಿಂಹೇಗೌಡ ಬೆಳ್ಳಾಳೆ ಗೇಟ್ ಬಳಿ ಅಂಗಡಿಯಲ್ಲಿ ಬೆಳಗ್ಗೆ ಟೀ ಕುಡಿಯುತ್ತ ಕುಳಿತಿದ್ದ ವೇಳೆ ಹಿಂಬದಿಯಿಂದ ಬಂದ ವೆಂಕಟೇಶ್, ಮಂಜುನಾಥ್ ಚಾಕುವಿನಿಂದ ನರಸಿಂಹೇಗೌಡನಿಗೆ ಮನಬಂದಂತೆ ಇರಿದಿದ್ದಾರೆ. ಇದರಿಂದ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲಿಯೇ ಬಿದ್ದು ಒದ್ದಾಡಿ ಮೃತಪಟ್ಟಿದ್ದಾರೆ.ಕೊಲೆ ಮಾಡಿದ ಆರೋಪಿಗಳಾದ ವೆಂಕಟೇಶ್, ಮಂಜುನಾಥ್ ನೇರವಾಗಿ ಠಾಣೆಗೆ ಹೋಗಿ ಪೊಲೀಸರಿಗೆ ಶರಣಾಗಿದ್ದಾರೆ. ಘಟನೆ ಸಂಬಂಧವಾಗಿ ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೇಲುಕೋಟೆ ಎಸ್ಇಟಿ ಶಾಲೆ ಶಿಕ್ಷಕಿ ಹಾಗೂ ಮಾಣಿಕ್ಯನಹಳ್ಳಿಯ ಲೋಕೇಶ್ ಪತ್ನಿ ಶಿಕ್ಷಕಿ ದೀಪಿಕಾ (35) ಕಳೆದ 2024 ಜನವರಿ 22 ರಂದು ನಾಪತ್ತೆಯಾಗಿದ್ದಳು. ಬಳಿಕ ಜ.23ರಂದು ಯೋಗಾನರಸಿಂಹಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಶವವಾಗಿ ಪತ್ತೆಯಾಗಿದ್ದಳು.
ಇತ್ತೀಚೆಗೆ ನಿತೀಶ್ ಜಾಮೀನಿನ ಮೇಲೆ ಹೊರ ಬಂದಿದ್ದನು. ಇದರಿಂದ ಕೋಪಗೊಂಡಿದ್ದ ದೀಪಿಕಾಳ ತಂದೆ ವೆಂಕಟೇಶ್ ಮಗಳನ್ನು ಕೊಲೆ ಮಾಡಿದ್ದ ನಿತೀಶ್ನನ್ನು ಹೇಗಾದರೂ ಮಾಡಿ ಕೊಲೆ ಮಾಡಬೇಕೆಂದು ಸಂಚು ರೂಪಿಸಿದ್ದನು. ಮೇ 11 ರಂದು ಧರ್ಮಸ್ಥಳದಲ್ಲಿ ನಿತೀಶ್ ತಂಗಿ ಮದುವೆ ನಿಗದಿಯಾಗಿತ್ತು.
ಘಟನ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಎಎಸ್ಪಿ ತಿಮ್ಮಯ್ಯ ಭೇಟಿಕೊಟ್ಟು ಪರಿಶೀಲನೆ ನಡೆಸಿದರು. ಸ್ಥಳೀಯರಿಂದ ಮಾಹಿತಿ ಪಡೆದರು.