ಮೊಬೈಲ್‌ ಕದಿಯುವಾಗ ಪ್ರತಿರೋಧ ಮಾಡಿದವನಿಗೆ ಇಬ್ಬರು ದುಷ್ಕರ್ಮಿಗಳು ಚಾಕು ಇರಿದು ಕೊಲೆ

KannadaprabhaNewsNetwork |  
Published : Feb 22, 2025, 12:46 AM ISTUpdated : Feb 22, 2025, 04:23 AM IST
ಹತ್ಯೆ | Kannada Prabha

ಸಾರಾಂಶ

ಮೊಬೈಲ್‌ ಕದಿಯಲು ಪ್ರಯತ್ನಿಸುವಾಗ ಎಚ್ಚರಗೊಂಡು ಪ್ರತಿರೋಧವೊಡ್ಡಿದ ವ್ಯಕ್ತಿಗೆ ಇಬ್ಬರು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಹತ್ಯೆ ಮಾಡಿ ಪರಾರಿಯಾಗಿರುವ ಘಟನೆ ಹಾಡಹಗಲೇ ನಡೆದಿದೆ.

 ಬೆಂಗಳೂರು :  ಮೊಬೈಲ್‌ ಕದಿಯಲು ಪ್ರಯತ್ನಿಸುವಾಗ ಎಚ್ಚರಗೊಂಡು ಪ್ರತಿರೋಧವೊಡ್ಡಿದ ವ್ಯಕ್ತಿಗೆ ಇಬ್ಬರು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಹತ್ಯೆ ಮಾಡಿ ಪರಾರಿಯಾಗಿರುವ ಘಟನೆ ಹಾಡಹಗಲೇ ನಡೆದಿದೆ.

ಕಾಮಾಕ್ಷಿಪಾಳ್ಯದ ವೃಷಭಾವತಿನಗರ ನಿವಾಸಿ ಚಂದ್ರ(45) ಹತ್ಯೆಯಾದ ದುರ್ದೈವಿ. ಮೆಜೆಸ್ಟಿಕ್‌ನ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಟರ್ಮಿನಲ್‌-1ರ 15ನೇ ಪ್ಲಾಟ್‌ಫಾರ್ಮ್‌ನಲ್ಲಿ ಗುರುವಾರ ಮಧ್ಯಾಹ್ಯ ಸುಮಾರು 1.30ಕ್ಕೆ ಈ ಘಟನೆ ನಡೆದಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಉಪ್ಪಾರಪೇಟೆ ಪೊಲೀಸ್ ಠಾಣೆಯ ಅಧಿಕಾರಿಗಳು ತಿಳಿಸಿದ್ದಾರೆ.

ಏನಿದು ಘಟನೆ?:

ಮೈಸೂರು ಮೂಲದ ಚಂದ್ರ ಹಲವು ವರ್ಷಗಳಿಂದ ಕಾಮಾಕ್ಷಿಪಾಳ್ಯದಲ್ಲಿ ನೆಲೆಸಿದ್ದರು. ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಿದ್ದ ಚಂದ್ರ ಕಳೆದ ಎರಡು ದಿನಗಳಿಂದ ಕೆಲಸಕ್ಕೆ ಹೋಗಿರಲಿಲ್ಲ. ಗುರುವಾರ ಮಧ್ಯಾಹ್ನ ಮದ್ಯ ಸೇವಿಸಿದ್ದ ಚಂದ್ರ ಮೆಜೆಸ್ಟಿಕ್‌ನ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಟರ್ಮಿನಲ್‌-1ರ 15ನೇ ಪ್ಲಾಟ್‌ ಫಾರ್ಮ್‌ನ ಪ್ರಯಾಣಿಕರು ಕೂರುವ ಆಸನದ ಮೇಲೆ ಮಲಗಿದ್ದರು. ಇದೇ ಸಮಯಕ್ಕೆ ಇಬ್ಬರು ದುಷ್ಕರ್ಮಿಗಳು ಅಲ್ಲಿಗೆ ಬಂದಿದ್ದು, ಚಂದ್ರ ಅವರ ಜೇಬಿನಿಂದ ಮೊಬೈಲ್‌ ಕದಿಯಲು ಪ್ರಯತ್ನಿಸಿದ್ದಾರೆ. ಅಷ್ಟರಲ್ಲಿ ಚಂದ್ರ ಎಚ್ಚರಗೊಂಡು ಮೊಬೈಲ್‌ ಬಿಗಿಯಾಗಿ ಹಿಡಿದುಕೊಂಡು ದುಷ್ಕರ್ಮಿಗಳಿಗೆ ಪ್ರತಿರೋಧವೊಡ್ಡಿದ್ದಾರೆ. ಈ ವೇಳೆ ದುಷ್ಕರ್ಮಿಗಳು ಏಕಾಏಕಿ ಚಾಕು ತೆಗೆದು ಚಂದ್ರ ಅವರ ಎದೆ, ಮುಖ, ಹೊಟ್ಟೆಗೆ ಇರಿದು ಹತ್ಯೆ ಮಾಡಿ ಪರಾರಿಯಾಗಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಬಳಿಕ ಮೃತದೇಹವನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಈ ಸಂಬಂಧ ಉಪ್ಪಾರಪೇಟೆ ಪೊಲೀಸ್‌ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳದ ಸಿಸಿಟಿವಿ ದೃಶ್ಯಾವಳಿ ಪರಿಶೀಲಿಸಿರುವ ಪೊಲೀಸರು, ದುಷ್ಕರ್ಮಿಗಳ ಬಂಧನಕ್ಕೆ ಶೋಧಿಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

PREV
Stay informed with the latest crime news in Kannada from Karnataka and India, criminal incidents, police actions, investigations, court verdicts, public safety alerts and breaking updates on Kannada Prabha.

Recommended Stories

ಅಕ್ರಮ ಕೃತ್ಯಗಳಿಗೆ ‘ದಂಡ’ ವಿಧಿಸಿ ಮುಚ್ಚು ಹಾಕುತ್ತಿದ್ದ ಅಪಾರ್ಟ್ಮೆಂಟ್ ವಿರುದ್ಧ ಕೇಸು
ವಿವಾಹ ಪವಿತ್ರವಾದ ಶಾಶ್ವತ ಸಮ್ಮಿಲನ : ಹೈಕೋರ್ಟ್‌