ದರ್ಶನ್‌ ಅಭಿಮಾನಿಗಳಿಂದ ಬೆದರಿಕೆ: ನಟ ಪ್ರಥಮ್‌ ದೂರು

Published : Jun 20, 2024, 05:05 AM IST
Olle huduga pratham Karnataka Aliya

ಸಾರಾಂಶ

ಕೊಲೆ ಆರೋಪ ಹೊತ್ತಿರುವ ನಟ ದರ್ಶನ್ ವಿರುದ್ಧ ಹೇಳಿಕೆ ನೀಡಿದ್ದಕ್ಕೆ ಅಭಿಮಾನಿಗಳ ಹೆಸರಿನಲ್ಲಿ 50ಕ್ಕೂ ಹೆಚ್ಚು ಬೆದರಿಕೆ ಕರೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಜ್ಞಾನಭಾರತಿ ಠಾಣೆ ಪೊಲೀಸರಿಗೆ ನಟ ಪ್ರಥಮ್ ಬುಧವಾರ ದೂರು ನೀಡಿದ್ದಾರೆ.

ಬೆಂಗಳೂರು : ಕೊಲೆ ಆರೋಪ ಹೊತ್ತಿರುವ ನಟ ದರ್ಶನ್ ವಿರುದ್ಧ ಹೇಳಿಕೆ ನೀಡಿದ್ದಕ್ಕೆ ಅಭಿಮಾನಿಗಳ ಹೆಸರಿನಲ್ಲಿ 50ಕ್ಕೂ ಹೆಚ್ಚು ಬೆದರಿಕೆ ಕರೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಜ್ಞಾನಭಾರತಿ ಠಾಣೆ ಪೊಲೀಸರಿಗೆ ನಟ ಪ್ರಥಮ್ ಬುಧವಾರ ದೂರು ನೀಡಿದ್ದಾರೆ.

 ಈ ದೂರನ್ನು ಸ್ವೀಕರಿಸಿದ ಪೊಲೀಸರು, ಗಂಭೀರ ಸ್ವರೂಪವಲ್ಲದ ಕೃತ್ಯ (ಎನ್‌ಸಿ) ಎಂದು ನಮೂದಿಸಿದ್ದಾರೆ.  

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಅವರ ಸಹಚರರ ಬಂಧನ ಬಳಿಕ ಘಟನೆ ಖಂಡಿಸಿ ಮಾಧ್ಯಮಗಳಿಗೆ ಪ್ರಥಮ್ ಹೇಳಿಕೆ ನೀಡಿದ್ದರು.

ಇದರಿಂದ ಕೋಪಕೊಂಡು ಪ್ರಥಮ್ ಅ‍ವರಿಗೆ ದರ್ಶನ್ ಅಭಿಮಾನಿಗಳ ಹೆಸರಿನಲ್ಲಿ 50 ಹೆಚ್ಚು ಬೆದರಿಕೆ ಕರೆಗಳು ಬಂದಿವೆ. ಈ ಬೆದರಿಕೆ ಕರೆಗಳ ಹಿನ್ನಲೆಯಲ್ಲಿ ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ಜ್ಞಾನಭಾರತಿ ಠಾಣೆಗೆ ತೆರಳಿ ಪ್ರಥಮ್ ದೂರು ಸಲ್ಲಿಸಿದ್ದಾರೆ.

PREV

Recommended Stories

ಮೆಟ್ರೋ ಕರ್ತವ್ಯ ವೇಳೆ ಮೃತಪಟ್ಟ ಸೆಕ್ಯೂರಿಟಿ ಗಾರ್ಡ್‌ಗೆ 5.8 ಲಕ್ಷ ಪರಿಹಾರ ನೀಡಿ: ಹೈಕೋರ್ಟ್ ನಿರ್ದೇಶನ
ಗಣೇಶೋತ್ಸವ ವೇಳೆ ಡಿಜೆ ಬಳಸಿದರೆ ಕ್ರಮ ಕೈಗೊಳ್ಳಿ: ಸೀಮಂತ್ ಕುಮಾರ್ ಸಿಂಗ್‌ ಆದೇಶ