ದರ್ಶನ್‌ ಅಭಿಮಾನಿಗಳಿಂದ ಬೆದರಿಕೆ: ನಟ ಪ್ರಥಮ್‌ ದೂರು

Published : Jun 20, 2024, 05:05 AM IST
Olle huduga pratham Karnataka Aliya

ಸಾರಾಂಶ

ಕೊಲೆ ಆರೋಪ ಹೊತ್ತಿರುವ ನಟ ದರ್ಶನ್ ವಿರುದ್ಧ ಹೇಳಿಕೆ ನೀಡಿದ್ದಕ್ಕೆ ಅಭಿಮಾನಿಗಳ ಹೆಸರಿನಲ್ಲಿ 50ಕ್ಕೂ ಹೆಚ್ಚು ಬೆದರಿಕೆ ಕರೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಜ್ಞಾನಭಾರತಿ ಠಾಣೆ ಪೊಲೀಸರಿಗೆ ನಟ ಪ್ರಥಮ್ ಬುಧವಾರ ದೂರು ನೀಡಿದ್ದಾರೆ.

ಬೆಂಗಳೂರು : ಕೊಲೆ ಆರೋಪ ಹೊತ್ತಿರುವ ನಟ ದರ್ಶನ್ ವಿರುದ್ಧ ಹೇಳಿಕೆ ನೀಡಿದ್ದಕ್ಕೆ ಅಭಿಮಾನಿಗಳ ಹೆಸರಿನಲ್ಲಿ 50ಕ್ಕೂ ಹೆಚ್ಚು ಬೆದರಿಕೆ ಕರೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಜ್ಞಾನಭಾರತಿ ಠಾಣೆ ಪೊಲೀಸರಿಗೆ ನಟ ಪ್ರಥಮ್ ಬುಧವಾರ ದೂರು ನೀಡಿದ್ದಾರೆ.

 ಈ ದೂರನ್ನು ಸ್ವೀಕರಿಸಿದ ಪೊಲೀಸರು, ಗಂಭೀರ ಸ್ವರೂಪವಲ್ಲದ ಕೃತ್ಯ (ಎನ್‌ಸಿ) ಎಂದು ನಮೂದಿಸಿದ್ದಾರೆ.  

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಅವರ ಸಹಚರರ ಬಂಧನ ಬಳಿಕ ಘಟನೆ ಖಂಡಿಸಿ ಮಾಧ್ಯಮಗಳಿಗೆ ಪ್ರಥಮ್ ಹೇಳಿಕೆ ನೀಡಿದ್ದರು.

ಇದರಿಂದ ಕೋಪಕೊಂಡು ಪ್ರಥಮ್ ಅ‍ವರಿಗೆ ದರ್ಶನ್ ಅಭಿಮಾನಿಗಳ ಹೆಸರಿನಲ್ಲಿ 50 ಹೆಚ್ಚು ಬೆದರಿಕೆ ಕರೆಗಳು ಬಂದಿವೆ. ಈ ಬೆದರಿಕೆ ಕರೆಗಳ ಹಿನ್ನಲೆಯಲ್ಲಿ ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ಜ್ಞಾನಭಾರತಿ ಠಾಣೆಗೆ ತೆರಳಿ ಪ್ರಥಮ್ ದೂರು ಸಲ್ಲಿಸಿದ್ದಾರೆ.

PREV
Stay informed with the latest crime news in Kannada from Karnataka and India, criminal incidents, police actions, investigations, court verdicts, public safety alerts and breaking updates on Kannada Prabha.

Recommended Stories

ಆಕ್ಟಿವೇ ಮಾಡದ ಹೊಸ ಕ್ರೆಡಿಟ್ ಕಾರ್ಡ್‌ ಬಳಸಿ 1.08 ಲಕ್ಷ ರು. ದೋಚಿದ ಸೈಬರ್ ಖದೀಮರು
ನಿದ್ರೆಗೆ ಜಾರಿದ ಪ್ರಯಾಣಿಕನ ದೋಚಿ ಮಾರ್ಗ ಮಧ್ಯೆಯೇ ಇಳಿಸಿ ಕ್ಯಾಬ್‌ ಚಾಲಕ ಪರಾರಿ!