ವಿಸಿ ನಾಲೆಯಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಮಕ್ಕಳು ಸಾವು

KannadaprabhaNewsNetwork |  
Published : Apr 08, 2025, 12:32 AM ISTUpdated : Apr 08, 2025, 04:58 AM IST
7ಕೆಎಂಎನ್ ಡಿ22 | Kannada Prabha

ಸಾರಾಂಶ

ಮೈಸೂರಿನ ಗೌಸಿಯಾನಗರದ ಸೋನು (17), ಸಿಮ್ರಾನ್ (16), ಸಿದ್ದೀಖ್ (9) ಮೃತ ದುರ್ದೈವಿ ಮಕ್ಕಳು. ಮೃತ ಮಕ್ಕಳು ಚಿಕ್ಕಾರಳ್ಳಿಯ ತಮ್ಮ ಸೋದರ ಮಾವನ ಮನೆಗೆ ಆಗಮಿಸಿದ್ದ ವೇಳೆ ಈ ಘಟನೆ ನಡೆದಿದೆ. ಸಿದ್ದೀಖ್ ಕಾಲು ತೊಳೆಯಲು ನಾಲೆಗೆ ಇಳಿಯುತ್ತಿದ್ದಂತೆ ಕಾಲು ಜಾರಿ ಬಿದ್ದಿದ್ದಾನೆ.

 ಶ್ರೀರಂಗಪಟ್ಟಣ : ವಿ.ಸಿ.ನಾಲೆಯಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಸಾವಿಗೀಡಾಗಿರುವ ಘಟನೆ ತಾಲೂಕಿನ ನಾರ್ತ್ ಬ್ಯಾಂಕ್ ಬಳಿ ಇರುವ ವಿಸಿ ನಾಲೆಯಲ್ಲಿ ಸೋಮವಾರ ಸಂಜೆ ನಡೆದಿದೆ.

ಮೈಸೂರಿನ ಗೌಸಿಯಾನಗರದ ಸೋನು (17), ಸಿಮ್ರಾನ್ (16), ಸಿದ್ದೀಖ್ (9) ಮೃತ ದುರ್ದೈವಿ ಮಕ್ಕಳು. ಮೃತ ಮಕ್ಕಳು ಚಿಕ್ಕಾರಳ್ಳಿಯ ತಮ್ಮ ಸೋದರ ಮಾವನ ಮನೆಗೆ ಆಗಮಿಸಿದ್ದ ವೇಳೆ ಈ ಘಟನೆ ನಡೆದಿದೆ.

ಈ ಮೂವರು ಮಕ್ಕಳು ತಮ್ಮ ಅಜ್ಜಿಯೊಂದಿಗೆ ನಾಲೆ ಬಳಿ ತೆರಳಿದ್ದರು. ಅಜ್ಜಿ ನಾಲೆಯಲ್ಲಿ ಮುಖ ತೊಳೆಯಲು ಮುಂದಾಗಿದ್ದಾರೆ. ಈ ವೇಳೆ ಸಿದ್ದೀಖ್ ಕಾಲು ತೊಳೆಯಲು ನಾಲೆಗೆ ಇಳಿಯುತ್ತಿದ್ದಂತೆ ಕಾಲು ಜಾರಿ ಬಿದ್ದಿದ್ದಾನೆ. ನಾಲಾ ಏರಿ ಮೇಲಿದ್ದ ಸೋನು ಹಾಗೂ ಸಿಮ್ರಾನ್ ತಮ್ಮನ ರಕ್ಷಿಸಲು ಮುಂದಾಗಿದ್ದಾರೆ. ಆದರೆ, ಸಾಧ್ಯವಾಗಿದೆ ಈ ಮೂವರು ಮಕ್ಕಳು ನೀರಲ್ಲಿ ಮುಳುಗಿ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ಹಾಗೂ ಸ್ಥಳೀಯರು ನಾಲೆಯಲ್ಲಿ ಮುಳಗಿದ್ದ ಮಕ್ಕಳ ಮೃತ ದೇಹಕ್ಕಾಗಿ ಶೋಧಕಾರ್ಯ ನಡೆಸಿ ಅಂತಿಮವಾಗಿ ಮೂವರು ಮಕ್ಕಳ ಮೃತದೇಹ ಪತ್ತೆಯಾಗಿವೆ. ಮರಣೋತ್ತರ ಪರೀಕ್ಷೆ ನಡೆಸಿ ನಂತರ ಮೃತರ ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ. ಈ ಸಂಬಂಧ ಕೆಆರ್‌ಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV
Stay informed with the latest crime news in Kannada from Karnataka and India, criminal incidents, police actions, investigations, court verdicts, public safety alerts and breaking updates on Kannada Prabha.

Recommended Stories

ಅಕ್ರಮ ಕೃತ್ಯಗಳಿಗೆ ‘ದಂಡ’ ವಿಧಿಸಿ ಮುಚ್ಚು ಹಾಕುತ್ತಿದ್ದ ಅಪಾರ್ಟ್ಮೆಂಟ್ ವಿರುದ್ಧ ಕೇಸು
ವಿವಾಹ ಪವಿತ್ರವಾದ ಶಾಶ್ವತ ಸಮ್ಮಿಲನ : ಹೈಕೋರ್ಟ್‌