ಹಾಡಹಗಲೇ ಮನೆಗಳವು, ದ್ವಿಚಕ್ರ ವಾಹನ ಹಾಗೂ ಮೊಬೈಲ್‌ ಕಳವು ಮಾಡಿದ್ದ ಆಟೋ ಚಾಲಕ ಸೇರಿ 2 ಸೆರೆ

KannadaprabhaNewsNetwork |  
Published : Apr 17, 2025, 12:55 AM ISTUpdated : Apr 17, 2025, 04:22 AM IST
arrest

ಸಾರಾಂಶ

ಮನೆಗಳವು, ದ್ವಿಚಕ್ರ ವಾಹನ ಹಾಗೂ ಮೊಬೈಲ್‌ ಕಳವು ಮಾಡುತ್ತಿದ್ದ ಆಟೋ ಚಾಲಕ ಸೇರಿ ಇಬ್ಬರು ಆರೋಪಿಗಳನ್ನು ಸಿದ್ದಾಪುರ ಠಾಣೆ ಪೊಲೀಸರು ಬಂಧಿಸಿ, ₹20 ಲಕ್ಷ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.

ಬೆಂಗಳೂರು  : ಮನೆಗಳವು, ದ್ವಿಚಕ್ರ ವಾಹನ ಹಾಗೂ ಮೊಬೈಲ್‌ ಕಳವು ಮಾಡುತ್ತಿದ್ದ ಆಟೋ ಚಾಲಕ ಸೇರಿ ಇಬ್ಬರು ಆರೋಪಿಗಳನ್ನು ಸಿದ್ದಾಪುರ ಠಾಣೆ ಪೊಲೀಸರು ಬಂಧಿಸಿ, ₹20 ಲಕ್ಷ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.

ಕೆ.ಆರ್.ಪುರದ ಆಟೋ ಚಾಲಕ ಇಮ್ರಾನ್‌ ಅಲಿಯಾಸ್‌ ಕ್ರೀಡ್‌(31) ಮತ್ತು ದಯಾನಂದನಗರದ ಕೊಳಗೇರಿ ನಿವಾಸಿ ಸೈಯದ್‌ ಇಮ್ತಿಯಾಜ್‌ ಅಲಿಯಾಸ್‌ ಚಾಕು(28) ಬಂಧಿತರು. ಆರೋಪಿಗಳಿಂದ ಸುಮಾರು ₹20 ಲಕ್ಷ ಮೌಲ್ಯದ 173 ಗ್ರಾಂ ಚಿನ್ನಾಭರಣ, 570 ಗ್ರಾಂ ಬೆಳ್ಳಿ ವಸ್ತುಗಳು, ಐದು ಮೊಬೈಲ್‌ಗಳು ಹಾಗೂ ನಾಲ್ಕು ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ. ಇತ್ತೀಚೆಗೆ ದುಷ್ಕರ್ಮಿಗಳು ಹಾಡಹಗಲೇ ಮನೆಯೊಂದರ ಬೀಗ ಮುರಿದು ಕಳವು ಮಾಡಿದ್ದರು. ಈ ಸಂಬಂಧ ನೀಡಲಾದ ದೂರಿನ ಮೇರೆಗೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡು ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿಗಳು ವೃತ್ತಿಪರ ಕಳ್ಳರಾಗಿದ್ದು, ಈ ಹಿಂದೆ ನಗರದ ವಿವಿಧೆಡೆ ಮೊಬೈಲ್‌, ಮನೆ, ದ್ವಿಚಕ್ರ ವಾಹನ ಕಳವು ಮಾಡಿರುವ ಬಗ್ಗೆ ಬಾಯ್ಬಿಟ್ಟಿದ್ದಾರೆ. ಇವರ ಬಂಧನದಿಂದ ಸಿದ್ದಾಪುರ, ಕಬ್ಬನ್‌ ಪಾರ್ಕ್‌, ಹಲಸೂರು ಗೇಟ್‌, ಆಡುಗೋಡಿ ಪೊಲೀಸ್‌ ಠಾಣೆಗಳಲ್ಲಿ ದಾಖಲಾಗಿದ್ದ 10 ಅಪರಾಧ ಪ್ರಕರಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

PREV
Stay informed with the latest crime news in Kannada from Karnataka and India, criminal incidents, police actions, investigations, court verdicts, public safety alerts and breaking updates on Kannada Prabha.

Recommended Stories

ರೌಡಿ ಹತ್ಯೆ: ಯಾವುದೇ ಕ್ಷಣ ಶಾಸಕ ಬೈರತಿ ಸೆರೆ
ಅಕ್ರಮ ಕೃತ್ಯಗಳಿಗೆ ‘ದಂಡ’ ವಿಧಿಸಿ ಮುಚ್ಚು ಹಾಕುತ್ತಿದ್ದ ಅಪಾರ್ಟ್ಮೆಂಟ್ ವಿರುದ್ಧ ಕೇಸು