ಶ್ರೀರಂಗಪಟ್ಟಣ : ಕ್ಯಾಂಟೀನ್‌ನಲ್ಲಿ ಇಬ್ಬರಿಗೆ ಇರಿದು ಹಲ್ಲೆ: ಪೊಲೀಸರಿಂದ ಸ್ಥಳ ಮಹಜರು

KannadaprabhaNewsNetwork |  
Published : Mar 20, 2025, 01:17 AM ISTUpdated : Mar 20, 2025, 04:36 AM IST
18ಕೆಎಂಎನ್ ಡಿ15 | Kannada Prabha

ಸಾರಾಂಶ

ಕೃಷ್ಣರಾಜಪೇಟೆ ತಾಲೂಕಿನ ಸಾಸಲು ಗ್ರಾಮದ ನಂಜಪ್ಪ ಹಲ್ಲೆ ನಡೆಸಿದ ಆರೋಪಿ. ಮೈಸೂರಿನ ಕುಮಾರಸ್ವಾಮಿ ಮತ್ತು ನಂಜನಗೂಡಿನ ಬಿ.ಆರ್ ಉಮೇಶ್ ಹಲ್ಲೆಗೊಳಗಾದವರು ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

 ಶ್ರೀರಂಗಪಟ್ಟಣ :  ಪಟ್ಟಣದ ನ್ಯಾಯಾಲಯದ ಪಕ್ಕದ ಕ್ಯಾಂಟೀನ್‌ನಲ್ಲಿ ವ್ಯಕ್ತಿಗಳಿಬ್ಬರಿಗೆ ಸ್ಕೂಲ್ ಡ್ರೈವರ್‌ ಒಬ್ಬ ಇರಿದು ಹಲ್ಲೆ ನಡೆಸಿರುವ ಸಂಬಂಧ ಟೌನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಸ್ಥಳ ಮಹಜರು ನಡೆಸಿದರು. ಕೃಷ್ಣರಾಜಪೇಟೆ ತಾಲೂಕಿನ ಸಾಸಲು ಗ್ರಾಮದ ನಂಜಪ್ಪ (40) ಹಲ್ಲೆ ನಡೆಸಿದ ಆರೋಪಿ. ಮೈಸೂರಿನ ಕುಮಾರಸ್ವಾಮಿ ಮತ್ತು ನಂಜನಗೂಡಿನ ಬಿ.ಆರ್ ಉಮೇಶ್ ಹಲ್ಲೆಗೊಳಗಾದವರು ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೈಸೂರಿನ ಎನ್.ಆರ್ ಮೊಹಲ್ಲಾ ನಿವಾಸಿ ಎನ್.ಯತೀಶ್ ಎಂಬುವವರು ಠಾಣೆಗೆ ದೂರು ನೀಡಿ, ನಾವು ಕುಟುಂಬ ಸಮೇತ ಪಟ್ಟಣದ ನ್ಯಾಯಾಲಯಕ್ಕೆ ಹಾಜರಾಗಿದ್ದೆವು. ನ್ಯಾಯಾಲಯಕ್ಕೆ ಸಂಬಂಧಿಸಿದಂತೆ ಕೆಲಸ ಮುಗಿಸಿ ನಮ್ಮ ಮಾವ ಮೈಸೂರಿನ ಕುಮಾರಸ್ವಾಮಿ ಮತ್ತು ಸ್ನೇಹಿತರಾದ ಬಿ.ಆರ್. ಉಮೇಶ್ ಇವರು ನ್ಯಾಯಾಲಯದ ಪಕ್ಕದಲ್ಲಿರುವ ಕ್ಯಾಂಟೀನ್‌ನಲ್ಲಿ ಟೀ ಕುಡಿಯುತ್ತಿದ್ದ ವೇಳೆ ನಂಜಪ್ಪ ಎಂಬುವವರು ಹಳೇ ದ್ವೇಷದ ಹಿನ್ನೆಲೆಯಲ್ಲಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ.

ದೇಹದ ಸುಮಾರು ಭಾಗಗಲ್ಲಿ ಚುಚ್ಚಿ ರಕ್ತ ಬರುವಂತೆ ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ. ಜೊತೆಗೆ ನಂಜಪ್ಪರವರ ಮಾವ ರಾಜೇಂದ್ರ, ಅತ್ತೆಯಾದ ಮಂಜುಳ, ಪತ್ನಿಯಾದ ಪಾರ್ವತಿ ಈ ನಾಲ್ವರು ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ್ದಾರೆ. ಇವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದರು. ಆರೋಪಿಯನ್ನು ಬಂಧಿಸಿರುವ ಪೊಲೀಸರು, ಮಂಗಳವಾರ ಬೆಳಗ್ಗೆ ಘಟನಾ ಸ್ಥಳಕ್ಕೆ ತೆರಳಿ ಮಹಜರು ನಡೆಸಿದರು.

ಕೋಳಿ ಅಂಗಡಿಯಲ್ಲಿ ವಿದ್ಯುತ್‌ ಸ್ಪರ್ಶ: ಯುವಕ ಸಾವು

ಮಂಡ್ಯ: ಕೋಳಿ ಅಂಗಡಿಯೊಂದರಲ್ಲಿ ವಿದ್ಯುತ್‌ ಸ್ಪರ್ಶಕ್ಕೊಳಗಾಗಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ತಾಲೂಕಿನ ಬಿಳಿದೇಗಲು ಗ್ರಾಮದಲ್ಲಿ ನಡೆದಿದೆ. ಹಂಚಹಳ್ಳಿ ಗ್ರಾಮದ ಸಂಜಯ್‌ (22) ಮೃತ ಯುವಕ. ಕೋಳಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಸಂಜಯ್‌, ಕ್ಲೀನಿಂಗ್‌ ಗ್ರೈಂಡರ್‌ನಿಂದ ವಿದ್ಯುತ್‌ ಸ್ಪರ್ಶಗೊಂಡು ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಕೆರಗೋಡು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

PREV

Recommended Stories

ರೈತನ ಬ್ಯಾಂಕ್ ಖಾತೆಯಲ್ಲಿದ್ದ ಕೋಟ್ಯಂತರ ರು.ಗೆ ಕದೀಮರಿಂದ ಕನ್ನ..!
ಗ್ರಾಮ ಲೆಕ್ಕಿಗರ ಹುದ್ದೆಗೆ ನಕಲಿ ಅಂಗವಿಕಲ ಪ್ರಮಾಣಪತ್ರ ಸಲ್ಲಿಕೆ...!