ಕನ್ನಡಪ್ರಭ ವಾರ್ತೆ ಮಳವಳ್ಳಿ
ಕಳೆದ ಆಗಸ್ಟ್ 17ರಂದು ಬೆಳಗ್ಗೆ ಸುಮಾರು 6 ಗಂಟೆ ಸಮಯದಲ್ಲಿ ಮಹಿಳೆ ಹಾಗೂ ಮಕ್ಕಳು ತನ್ನ ಪತಿಯೊಂದಿಗೆ ಕುಡಿತದ ವಿಚಾರವಾಗಿ ಜಗಳವಾಡಿದ್ದಾರೆ. ಆಗ ಪತಿಯ ಬಲಗಾಲಿನ ಚಪ್ಪಲಿ ಆಕಸ್ಮಿಕವಾಗಿ ಪತ್ನಿಗೆ ತಗುಲಿದೆ.
ಜಗಳದ ಬಗ್ಗೆ ಗ್ರಾಮದ ಯಜಮಾನರುಗಳಿಗೆ ತಿಳಿಸಿ ಗಂಡನಿಗೆ ಬುದ್ಧಿವಾದ ಹೇಳಿಸಿದ್ದಾರೆ. ಆಗ ಗ್ರಾಮದ ಯಜಮಾನರು ನಿನ್ನ ಗಂಡ ಯಾರದೋ ಮಾತು ಕೇಳಿಕೊಂಡು ನಿನಗೆ ಚಪ್ಪಲಿಯಲ್ಲಿ ಹೊಡೆದಿದ್ದಾನೆ. ಆದ್ದರಿಂದ ನಿನಗೆ ಹಾಗೂ ನಿನ್ನ ಗಂಡನಿಗೆ ತಲಾ 5 ಸಾವಿರ ರು. ದಂಡ ಹಾಗೂ ಇಬ್ಬರೂ ತಲೆ ಕೂದಲು ಬೋಳಿಸಿಕೊಳ್ಳುವಂತೆ ಗ್ರಾಮದ ನ್ಯಾಯದ ಕಟ್ಟೆಯಲ್ಲಿ ತೀರ್ಪು ನೀಡಿದ್ದಾರೆ.ಇಷ್ಟಕ್ಕೂ ಸುಮ್ಮನಾಗದ ಯಜಮಾನರು ನನ್ನ ಹಾಗೂ ನನ್ನ ಗಂಡನ ಮೇಲೆ ಒತ್ತಡ ಹಾಕಿ ತಲೆ ಕೂದಲು ತೆಗೆಸಿದ್ದಾರೆ. ಇದರಿಂದ ನಾನು ಮಹಿಳೆಯಾಗಿ ಗ್ರಾಮದ ಬೀದಿಗಳಲ್ಲಿ ತಿರುಗಾಡಲು ಆಗದೆ ತುಂಬಾ ತೊಂದರೆ ಅನುಭವಿಸುತ್ತಿದ್ದೇನೆ. ಊರಿನ ಯಜಮಾನರು ನನ್ನ ಪತಿಗೆ ಬುದ್ಧಿ ಹೇಳಲಿ ಎಂದು ಮನವಿ ಮಾಡಿದರೆ, ನಮಗೆ ಈ ರೀತಿ ಅವಮಾನ ಮಾಡಿದ್ದಾರೆ. ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ನೊಂದ ಮಹಿಳೆ ದೂರು ನೀಡಿದ್ದಾರೆ.
ಚಿರತೆ ದಾಳಿಗೆ ಎರಡು ಮೇಕೆಗಳು ಬಲಿ
ಚಿರತೆ ದಾಳಿಯಿಂದ ಕೊಟ್ಟಿಗೆಯಲ್ಲಿ ಕಟ್ಟಿದ್ದ ಮೇಕೆಗಳು ಬಲಿಯಾಗಿರುವ ಘಟನೆ ಸಮೀಪದ ಲಿಂಗಪಟ್ಟಣ ಗ್ರಾಮದಲ್ಲಿ ಮಂಗಳವಾರ ಮುಸುಕಿನ ಜಾವದಲ್ಲಿ ನಡೆದಿದೆ.
ಕುರಿ, ಮೇಕೆಗಳ ಚೀರಾಟ ಕೇಳಿದ ಮನೆಯವರು ಹೊರಗೆ ಬಂದು ನೋಡಿದಾಗ ಚಿರತೆ ಮೇಕೆಗಳನ್ನು ಬಿಟ್ಟು ಓಡಿ ಹೋಗಿದೆ. ಘಟನೆಯಿಂದಾಗಿ ಬೆಲೆಬಾಳುವ ಮೇಕೆಗಳು ಸತ್ತು ಹೋಗಿದ್ದು, ಸುಮಾರು 40 ಸಾವಿರ ರು. ನಷ್ಟ ಉಂಟಾಗಿದೆ. ಸರ್ಕಾರ ಸೂಕ್ತ ಪರಿಹಾರ ನೀಡಬೇಕೆಂದು ಮಾಲೀಕರಾದ ರಮೇಶ್ ಮನವಿ ಮಾಡಿದರು.
ವಿಷಯ ತಿಳಿದ ಅರಣ್ಯ ಇಲಾಖೆ ಗಸ್ತು ಅರಣ್ಯ ಪಾಲಕ ಪಿ.ಎಂ.ಕೃಷ್ಣ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಸಂತ್ರಸ್ತರಿಗೆ ಅರಣ್ಯ ಇಲಾಖೆ ವತಿಯಿಂದ ಸೂಕ್ತ ಪರಿಹಾರ ಒದಗಿಸಲು ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು.