ಭಾರತಪ್ರಪಂಚವಿಶೇಷರಾಜಕೀಯಮನರಂಜನೆಅಪರಾಧಕ್ರೀಡೆಕರ್ನಾಟಕಇ- ಪೇಪರ್

ಬೈಕ್‌ ವ್ಹೀಲಿಂಗ್‌ ಸಂಬಂಧ 20 ಮಂದಿ ಬಂಧಿಸಿದ ಪೊಲೀಸ್‌; ಉತ್ತರ ವಿಭಾಗ ಸಂಚಾರ ಠಾಣೆಯಲ್ಲಿ 26 ಪ್ರಕರಣ

KannadaprabhaNewsNetwork | Published : Mar 6, 2024 2:18 AM

ಸಾರ್ವಜನಿಕ ರಸ್ತೆಗಳಲ್ಲಿ ಅಪಾಯಕಾರಿಯಾಗಿ ದ್ವಿಚಕ್ರ ವಾಹನ ವ್ಹೀಲಿಂಗ್‌ ಮಾಡುವವರ ವಿರುದ್ಧ ಫೆ.21ರಿಂದ 29ರವರೆಗೆ ವಿಶೇಷ ಕಾರ್ಯಾಚರಣೆ ನಡೆಸಿರುವ ಉತ್ತರ ವಿಭಾಗದ ಸಂಚಾರ ಪೊಲೀಸರು, 26 ಪ್ರಕರಣ ದಾಖಲಿಸಿ 20 ಮಂದಿ ದ್ವಿಚಕ್ರ ವಾಹನ ಸವಾರರನ್ನು ಬಂಧಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಸಾರ್ವಜನಿಕ ರಸ್ತೆಗಳಲ್ಲಿ ಅಪಾಯಕಾರಿಯಾಗಿ ದ್ವಿಚಕ್ರ ವಾಹನ ವ್ಹೀಲಿಂಗ್‌ ಮಾಡುವವರ ವಿರುದ್ಧ ಫೆ.21ರಿಂದ 29ರವರೆಗೆ ವಿಶೇಷ ಕಾರ್ಯಾಚರಣೆ ನಡೆಸಿರುವ ಉತ್ತರ ವಿಭಾಗದ ಸಂಚಾರ ಪೊಲೀಸರು, 26 ಪ್ರಕರಣ ದಾಖಲಿಸಿ 20 ಮಂದಿ ದ್ವಿಚಕ್ರ ವಾಹನ ಸವಾರರನ್ನು ಬಂಧಿಸಿದ್ದಾರೆ.

ನಗರ ಉತ್ತರ ಸಂಚಾರ ವಿಭಾಗದ ವ್ಯಾಪ್ತಿಯ ದೇವನಹಳ್ಳಿ 6, ಹೆಬ್ಬಾಳ 5, ಯಲಹಂಕ 6, ರಾಜಾಜಿನಗರ 3, ಚಿಕ್ಕಜಾಲ ಮತ್ತು ಪೀಣ್ಯ, ತಲಾ 2, ಆರ್‌.ಟಿ.ನಗರ ಮತ್ತು ಯಶವಂತಪುರ ತಲಾ 1 ಸೇರಿದಂತೆ ಒಟ್ಟು 26 ಪ್ರಕರಣಗಳನ್ನು ದಾಖಲಿಸಿ, 20 ಮಂದಿ ದ್ವಿಚಕ್ರ ವಾಹನ ಸವಾರರನ್ನು ಬಂಧಿಸಿದ್ದಾರೆ.

26 ಪ್ರಕರಣಗಳ ಪೈಕಿ ಆರು ಪ್ರಕರಣಗಳಲ್ಲಿ ಸವಾರರು ಅಪ್ರಾಪ್ತರಾಗಿರುವ ಹಿನ್ನೆಲೆಯಲ್ಲಿ ಅವರ ಪೋಷಕರು/ ದ್ವಿಚಕ್ರ ವಾಹನ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆರು ಪ್ರಕರಣಗಳಲ್ಲಿ ಸವಾರರ ಚಾಲನಾ ಪರವಾನಗಿ(ಡಿಎಲ್‌) ಹಾಗೂ ಐದು ಪ್ರಕರಣಗಳಲ್ಲಿ ವಾಹನ ನೋಂದಣಿ ಪ್ರಮಾಣ ಪತ್ರ(ಆರ್‌ಸಿ) ಅಮಾನತುಗೊಳಿಸಲು ಸಂಬಂಧಪಟ್ಟ ಪ್ರಾದೇಶಿಕ ಸಾರಿಗೆ ಕಚೇರಿಗಳಿಗೆ ಕಳುಹಿಸಲಾಗಿದೆ. ಮುಂದಿನ ದಿನಗಳಲ್ಲಿಯೂ ಈ ವಿಶೇಷ ಕಾರ್ಯಾಚರಣೆ ನಡೆಯಲಿದೆ ಎಂದು ನಗರ ಉತ್ತರ ಸಂಚಾರ ವಿಭಾಗದ ಡಿಸಿಪಿ ಡಿ.ಆರ್‌.ಸಿರಿಗೌರಿ ತಿಳಿಸಿದ್ದಾರೆ.- - - ಬಾಕ್ಸ್‌...ಬೆಂಗಳೂರು ಉತ್ತರ ವಿಭಾಗಎಲ್ಲಿ?ಎಷ್ಟು ಪ್ರಕರಣದೇವನಹಳ್ಳಿ6ಹೆಬ್ಬಾಳ5ಯಲಹಂಕ6ರಾಜಾಜಿನಗರ3ಚಿಕ್ಕಜಾಲ2ಪೀಣ್ಯ2ಆರ್‌.ಟಿ.ನಗರ1ಯಶವಂತಪುರ1ಒಟ್ಟು26

- - -

ಸರಕು ಸಾಗಣೆ ವಾಹನ ಡಿಕ್ಕಿ: ಬೈಕ್‌ ಸವಾರ ಸಾವುಬೆಂಗಳೂರು: ಜ್ಞಾನಭಾರತಿ ಕ್ಯಾಂಪಸ್‌ನ ರಸ್ತೆಯಲ್ಲಿ ಅಪರಿಚಿತ ಸರಕು ಸಾಗಣೆ ವಾಹನವೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿರುವ ಘಟನೆ ಮಂಗಳವಾರ ನಡೆದಿದೆ.ಉಲ್ಲಾಳದ ಗೋಪಿನಾಥ್‌ ಸಾವಂತ್‌ (65) ಮೃತ ಸವಾರ. ಮಧ್ಯಾಹ್ನ 2.30ರ ಸುಮಾರಿಗೆ ಜ್ಞಾನಭಾರತಿ ಕ್ಯಾಂಪಸ್‌ನ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದರು. ಈ ವೇಳೆ ಹಿಂದಿನಿಂದ ವೇಗವಾಗಿ ಬಂದ ಅಪರಿಚಿತ ಸರಕು ಸಾಗಣೆ ವಾಹನವೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನ ಸಹಿತ ಸಾವಂತ್‌ ಬಿದ್ದಿದ್ದಾರೆ. ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಸಾವಂತ್‌ ಅವರನ್ನು ಸ್ಥಳೀಯರ ನೆರವಿನಿಂದ ಸಂಚಾರ ಪೊಲೀಸರು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ತೀವ್ರ ರಕ್ತಸ್ರಾವವಾಗಿದ್ದರಿಂದ ಚಿಕಿತ್ಸೆ ಫಲಿಸದೆ ಸಾವಂತ್‌ ಸಂಜೆ 5.30ರ ಸುಮಾರಿಗೆ ಮೃತಪಟ್ಟಿದ್ದಾರೆ.ಅಪಘಾತದ ಬಳಿಕ ಸರಕು ಸಾಗಣೆ ವಾಹನ ನಿಲ್ಲಿಸದೆ ಚಾಲಕ ಪರಾರಿಯಾಗಿದ್ದಾನೆ. ಈ ಸಂಬಂಧ ಜ್ಞಾನಭಾರತಿ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.- - -