ಕನ್ನಡಪ್ರಭ ವಾರ್ತೆ ಬೆಂಗಳೂರು
ಚಾಮರಾಜಪೇಟೆ ನಿವಾಸಿ ಮಧು(22) ಮೃತ ಹಿಂಬದಿ ಸವಾರ. ಪ್ರಜ್ವಲ್ ಗಾಯಗೊಂಡಿರುವ ಸವಾರ. ಗುರುವಾರ ರಾತ್ರಿ 9.45ರ ಸುಮಾರಿಗೆ ನಾಯಂಡಹಳ್ಳಿ ಜಂಕ್ಷನ್ನಲ್ಲಿ ಈ ಅಪಘಾತ ಸಂಭವಿಸಿದೆ.
ಮಧು ಮತ್ತು ಪ್ರಜ್ವಲ್ ಸ್ನೇಹಿತರು. ನಾಗರಬಾವಿಯಲ್ಲಿ ಸ್ನೇಹಿತರನ್ನು ಭೇಟಿಯಾಗಿ ದ್ವಿಚಕ್ರ ವಾಹನದಲ್ಲಿ ಚಾಮರಾಜಪೇಟೆ ಕಡೆಗೆ ವಾಪಾಸ್ ಆಗುತ್ತಿದ್ದರು. ಈ ವೇಳೆ ನಾಯಂಡಹಳ್ಳಿ ಜಂಕ್ಷನ್ನಲ್ಲಿ ಬರುವಾಗ ಹಿಂದಿನಿಂದ ವೇಗವಾಗಿ ಬಂದು ಸರಕು ಸಾಗಣೆ ವಾಹನವೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿದೆ. ಈ ವೇಳೆ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನ ಸಹಿತ ಸವಾರರಿಬ್ಬರೂ ರಸ್ತೆಗೆ ಬಿದ್ದಿದ್ದಾರೆ.ಸೊಂಟದ ಮೇಲೆ ಉರುಳಿದ ಚಕ್ರ:
ಸರಕು ಸಾಗಣೆ ವಾಹನದ ಅತಿಯಾದ ವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಕಾರಣ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ. ಘಟನೆ ಬಳಿಕ ವಾಹನ ನಿಲ್ಲಿಸದೆ ಚಾಲಕ ಪರಾರಿಯಾಗಿದ್ದಾನೆ. ಘಟನಾ ಸ್ಥಳದ ಸುತ್ತಮುತ್ತಲ ಸಿಟಿಟಿವಿ ಕ್ಯಾಮೆರಾ ದೃಶ್ಯಾವಳಿ ಪರಿಶೀಲಿಸಿ, ವಾಹನ ಪತ್ತೆಗೆ ಪ್ರಯತ್ನಿಸಲಾಗುತ್ತಿದೆ. ಈ ಸಂಬಂಧ ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.