ಹೋಟೆಲ್‌ನಲ್ಲಿ ಯುವತಿ ಮೈ ಮುಟ್ಟಿ, ಅಸಭ್ಯವಾಗಿ ವರ್ತಿಸಿ ಪರಾರಿಯಾಗಿದ್ದವ ಪರಪ್ಪನ ಅಗ್ರಹಾರ ಸೇರಿದ!

KannadaprabhaNewsNetwork |  
Published : Feb 01, 2024, 02:04 AM IST
Chandan | Kannada Prabha

ಸಾರಾಂಶ

ಕೆಲ ದಿನಗಳ ಹಿಂದೆ ಆರ್‌ಪಿಸಿ ಲೇಔಟ್‌ನ ಹೋಟೆಲ್‌ನಲ್ಲಿ ಯುವತಿ ಮೈ ಮುಟ್ಟಿ ಅಸಭ್ಯವಾಗಿ ವರ್ತಿಸಿ ಪರಾರಿಯಾಗಿದ್ದ ಕಿಡಿಗೇಡಿ ಕೊನೆಗೂ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿದ್ದಾನೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಕೆಲ ದಿನಗಳ ಹಿಂದೆ ಆರ್‌ಪಿಸಿ ಲೇಔಟ್‌ನ ಹೋಟೆಲ್‌ನಲ್ಲಿ ಯುವತಿ ಮೈ ಮುಟ್ಟಿ ಅಸಭ್ಯವಾಗಿ ವರ್ತಿಸಿ ಪರಾರಿಯಾಗಿದ್ದ ಕಿಡಿಗೇಡಿ ಕೊನೆಗೂ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿದ್ದಾನೆ.

ಸುಂಕದಕಟ್ಟೆಯ ವಿಘ್ನೇಶ್ವರನಗರದ ನಿವಾಸಿ ಚಂದನ್ ಬಂಧಿತನಾಗಿದ್ದು, ಆರ್‌ಪಿಸಿ ಲೇಔಟ್‌ ಹೋಟೆಲ್‌ಗೆ ತನ್ನ ಸ್ನೇಹಿತರ ಜತೆ ಬಂದಾಗ ಆತ ಈ ಕೃತ್ಯ ಎಸಗಿದ್ದ. ಈ ಬಗ್ಗೆ ಹೋಟೆಲ್ ವ್ಯವಸ್ಥಾಪಕಿ ನೀಡಿದ ದೂರಿನ ಮೇರೆಗೆ ತನಿಖೆ ಕೈಗೆತ್ತಿಕೊಂಡ ವಿಜಯನಗರ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ. ಈ ಕೃತ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿತ್ತು.

ಸ್ನೇಹಿತನ ಮಾತು ಕೇಳಿ ಕೆಟ್ಟ:

ಗ್ಯಾಸ್ ಡೆಲಿವರಿ ಬಾಯ್ ಆಗಿದ್ದ ಚಂದನ್, ಡಿ.30 ರಂದು ರಾತ್ರಿ 7.30ರಲ್ಲಿ ತನ್ನ ಸ್ನೇಹಿತರ ಜತೆಗೆ ಆರ್‌ಪಿಸಿ ಲೇಔಟ್‌ನಲ್ಲಿರುವ ಹೋಟೆಲ್‌ಗೆ ತಿಂಡಿ ತಿನ್ನಲು ಬಂದಿದ್ದ. ಆ ವೇಳೆ ಹೋಟೆಲ್ ಕ್ಯಾಶ್ ಕೌಂಟರ್‌ನಲ್ಲಿ ನಿಂತಿದ್ದ ಯುವತಿಗೆ ಈ ಸ್ನೇಹಿತರ ಕಣ್ಣಿಗೆ ಬಿದ್ದಿದ್ದಳು. ಆ ಯುವತಿ ಮೈ ಮುಟ್ಟು ನೋಡೋಣ ಎಂದು ಚಂದನ್‌ಗೆ ಆತನ ಸ್ನೇಹಿತರು ಸವಾಲು ಹಾಕಿದ್ದರು. ಈ ಸವಾಲು ಸ್ವೀಕರಿಸಿದ ಚಂದನ್‌, ಕ್ಯಾಶ್ ಕೌಂಟರ್‌ನಲ್ಲಿ ನಿಂತಿದ್ದ ಯುವತಿಯನ್ನು ಹಿಂದಿನಿಂದ ಹೋಗಿ ಮುಟ್ಟಿದ್ದ. ಈ ಅಸಭ್ಯ ವರ್ತನೆಗೆ ಸಂತ್ರಸ್ತೆ ಕಿಡಿಕಾರಿದ್ದಳು. ತಕ್ಷಣವೇ ಹೋಟೆಲ್‌ನಿಂದ ಸ್ನೇಹಿತರ ಜತೆ ಆರೋಪಿ ಪರಾರಿಯಾಗಿದ್ದ ಎಂದು ಪೊಲೀಸರು ವಿವರಿಸಿದ್ದಾರೆ.ಮಹಿಳೆಗೆ ಆಶ್ಲೀಲ ಕೈ ಸನ್ನೆ ಮಾಡಿ ಪರಾರಿಯಾಗಿದ್ದ ಕಿಡಿಗೇಡಿ ಸೆರೆ!ಕನ್ನಡಪ್ರಭ ವಾರ್ತೆ ಬೆಂಗಳೂರು ಇತ್ತೀಚಿಗೆ ಕಾರಿನಲ್ಲಿ ಕುಳಿತಿದ್ದ ಮಹಿಳೆ ಜತೆ ಅಸಭ್ಯವಾಗಿ ವರ್ತಿಸಿ ಪರಾರಿಯಾಗಿದ್ದ ಕಿಡಿಗೇಡಿಯನ್ನು ಮಹದೇವಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜೆ.ಬಿ. ನಗರದ ಸುನೀಲ್‌ ಕುಮಾರ್ ಶರ್ಮಾ ಬಂಧಿತನಾಗಿದ್ದು, ಕೆಲ ದಿನಗಳ ಹಿಂದೆ ಮಹದೇವಪುರದ ರಿಂಗ್ ರೋಡ್‌ನಲ್ಲಿ ಮಹಿಳೆಗೆ ಆಶ್ಲೀಲವಾಗಿ ಕೈ ಸನ್ನೆ ಮಾಡಿ ಪರಾರಿಯಾಗಿದ್ದ. ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು, ಆರೋಪಿಯನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುವ ಶರ್ಮಾ, ಗೆಳೆಯರ ಜತೆ ರಿಂಗ್ ರೋಡ್‌ಗೆ ಬಂದಿದ್ದ. ಅದೇ ವೇಳೆ ಸ್ನೇಹಿತರ ಜತೆ ರಿಂಗ್ ರೋಡ್ ಸಮೀಪ ಹೋಟೆಲ್‌ಗೆ ಬಂದಿದ್ದ ಸಂತ್ರಸ್ತೆ, ರಸ್ತೆ ಬದಿ ಕಾರು ನಿಲ್ಲಿಸಿಕೊಂಡು ಕುಳಿತಿದ್ದರು. ಆಗ ಆಕೆಗೆ ಕಾರಿನಿಂದ ಹೊರ ಬರುವಂತೆ ಕೈ ಸನ್ನೆ ಮಾಡಿ ಆರೋಪಿ ಅಸಭ್ಯವಾಗಿ ವರ್ತಿಸಿ ಪರಾರಿಯಾಗಿದ್ದ. ಈ ಸಂಬಂಧ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಆರೋಪಿ ಬಂಧನವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

PREV
Stay informed with the latest crime news in Kannada from Karnataka and India, criminal incidents, police actions, investigations, court verdicts, public safety alerts and breaking updates on Kannada Prabha.

Recommended Stories

ರೌಡಿ ಬಿಕ್ಲು ಶಿವ ಹತ್ಯೆ ಪ್ರಕರಣದ ಪ್ರಮುಖ ನಾಲ್ವರು ಆರೋಪಿಗಳಿಗೆ ಜಾಮೀನು
ಪುತ್ರನ ಸಮಯ ಪ್ರಜ್ಞೆಯಿಂದ 6 ತಾಸು ಡಿಜಿಟಲ್‌ ಅರೆಸ್ಟ್‌ ಆಗಿದ್ದ ತಂದೆ ಅಕ್ರಮದಿಂದ ಪಾರು