ದೊಣ್ಣೆಯಿಂದ ಹೊಡೆದು ಪತಿ ಕೊಲೆಗೈದ ಪತ್ನಿ

Published : May 16, 2024, 10:41 AM IST
Murder

ಸಾರಾಂಶ

ಮಹಿಳೆಯೊಬ್ಬಳು ದೊಣ್ಣೆಯಿಂದ ಹೊಡೆದು ತನ್ನ ಗಂಡನನ್ನೇ ಕೊಲೆ ಮಾಡಿರುವ ಘಟನೆ ಇಲ್ಲಿನ ಗೌರಿ ಕಾಲುವೆ ಬಡಾವಣೆಯಲ್ಲಿ ಮಂಗಳವಾರ ರಾತ್ರಿ ನಡೆದಿದೆ

ಚಿಕ್ಕಮಗಳೂರು: ಮಹಿಳೆಯೊಬ್ಬಳು ದೊಣ್ಣೆಯಿಂದ ಹೊಡೆದು ತನ್ನ ಗಂಡನನ್ನೇ ಕೊಲೆ ಮಾಡಿರುವ ಘಟನೆ ಇಲ್ಲಿನ ಗೌರಿ ಕಾಲುವೆ ಬಡಾವಣೆಯಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಸುರೇಶ್‌ (53) ಮೃತ ದುರ್ದೈವಿ. ಕೊಲೆ ಆರೋಪಿ ಪತ್ನಿ ಭಾರತಿಯನ್ನು ಪೊಲೀಸರು ಬಂಧಿಸಿದ್ದಾರೆ. 

ಮರಗೆಲಸ ಮಾಡುತ್ತಿದ್ದ ಸುರೇಶ್‌ ಎಂದಿನಂತೆ ರಾತ್ರಿ ಮನೆಗೆ ಬಂದಿದ್ದಾರೆ. ಬಳಿಕ ಗಂಡ ಹೆಂಡತಿ ನಡುವೆ ಜಗಳವಾಗಿದ್ದು, ಆಗ ಭಾರತಿ ದೊಣ್ಣೆಯಿಂದ ಪತಿಯ ತಲೆಗೆ ಹೊಡೆದಿದ್ದಾಳೆ. ತೀವ್ರ ಸ್ವರೂಪದ ಪೆಟ್ಟಾಗಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸುರೇಶ್‌ ಮೃತಪಟ್ಟಿದ್ದಾರೆ.

PREV
Stay informed with the latest crime news in Kannada from Karnataka and India, criminal incidents, police actions, investigations, court verdicts, public safety alerts and breaking updates on Kannada Prabha.

Recommended Stories

ಅಕ್ರಮ ಕೃತ್ಯಗಳಿಗೆ ‘ದಂಡ’ ವಿಧಿಸಿ ಮುಚ್ಚು ಹಾಕುತ್ತಿದ್ದ ಅಪಾರ್ಟ್ಮೆಂಟ್ ವಿರುದ್ಧ ಕೇಸು
ವಿವಾಹ ಪವಿತ್ರವಾದ ಶಾಶ್ವತ ಸಮ್ಮಿಲನ : ಹೈಕೋರ್ಟ್‌