ಭೀಮನ ಅಮಾವಾಸ್ಯೆಯಂದು ಪತಿ ಪಾದ ಪೂಜೆ ಬಳಿಕ ಮಹಿಳೆ ಶಂಕಾಸ್ಪದ ಸಾವು

Published : Jul 26, 2025, 05:41 AM IST
arrest / Representative image

ಸಾರಾಂಶ

ಭೀಮನ ಅಮಾವಾಸ್ಯೆಯ ದಿನ ಗಂಡನ ಪಾದ ಪೂಜೆ ಮಾಡಿದ ಬಳಿಕ ಮಹಿಳೆಯೊಬ್ಬಳು ಅನುಮಾನಾಸ್ಪದವಾಗಿ ಸಾವಿಗೀಡಾದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಅಂಚೆಪಾಳ್ಯ ಗ್ರಾಮದಲ್ಲಿ ನಡೆದಿದೆ.

 ಪೀಣ್ಯ ದಾಸರಹಳ್ಳಿ :  ಭೀಮನ ಅಮಾವಾಸ್ಯೆಯ ದಿನ ಗಂಡನ ಪಾದ ಪೂಜೆ ಮಾಡಿದ ಬಳಿಕ ಮಹಿಳೆಯೊಬ್ಬಳು ಅನುಮಾನಾಸ್ಪದವಾಗಿ ಸಾವಿಗೀಡಾದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಅಂಚೆಪಾಳ್ಯ ಗ್ರಾಮದಲ್ಲಿ ನಡೆದಿದೆ.

ಸ್ಪಂದನಾ ಮೃತಪಟ್ಟ ದುರ್ದೈವಿ ಮಹಿಳೆ. ಘಟನೆ ಸಂಬಂಧ ಪತಿ ಅಭಿಷೇಕ್​ನನ್ನು ಮಾದನಾಯಕನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಒಂದೂವರೆ ವರ್ಷದ ಹಿಂದೆ ಕನಕಪುರದ ನಿವಾಸಿಯಾದ ಸ್ಪಂದನ ಹಾಗೂ ಕರಿಕಲ್ಲ ದೊಡ್ಡಿ ನಿವಾಸಿಯಾದ ಅಭಿಷೇಕ್ ಜೊತೆ ಮದುವೆಯಾಗಿತ್ತು. ಬೃಂದಾವನ ಕಾಲೇಜಿನಲ್ಲಿ ಎಂಬಿಎ ವ್ಯಾಸಂಗ ಮಾಡುತ್ತಿದ್ದ ಸ್ಪಂದನಾಳಿಗೆ ಇನ್​ಸ್ಟಾಗ್ರಾಮ್​ನಲ್ಲಿ ಅಭಿಷೇಕ್ ಪರಿಚಯ ಆಗಿತ್ತು. ಪೋಷಕರ ವಿರೋಧದ ನಡುವೆಯೂ ಕನಕಪುರದ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಮದುವೆ ಆಗಿದ್ದರು. ಪತಿ ಅಭಿಷೇಕ್​ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದ. ಸ್ಪಂದನಾ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಳು.

ಮನೆಯಲ್ಲಿ ಭೀಮನ ಅಮಾವಾಸ್ಯೆಯ ದಿನ ಗಂಡನ ಪಾದ ಪೂಜೆ ಮಾಡಿದ ಬಳಿಕ ಈ ಘಟನೆ ನಡೆದಿದೆ. ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಸ್ಪಂದನಾ ಶವ ಪತ್ತೆಯಾಗಿದ್ದು ಮೈಮೇಲೆ ಗಾಯದ ಗುರುತುಗಳಿವೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.

ಸ್ಪಂದನಾ ಕೊನೆಯದಾಗಿ ತನ್ನ ತಂಗಿಗೆ ವಾಟ್ಸಾಪ್​ನಲ್ಲಿ ಮೆಸೇಜ್​ ಮಾಡಿದ್ದು ನನ್ನ ಸಾವಿಗೆ ಅಭಿ ಹಾಗೂ ಅವರ ಇಡೀ ಕುಟುಂಬ. ಜೊತೆಗೆ ಕಂಪನಿಯ ಉದ್ಯೋಗಿಗಳು ಕಾರಣ ಎಂದು ಕಳುಹಿಸಿದ್ದಾಳೆ.

ಮದುವೆಯಾದ ಬಳಿಕ ಸ್ಪಂದನಾಳಿಗೆ ಅಭಿಷೇಕ್​ ಕುಟುಂಬದವರು ವರದಕ್ಷಿಣೆ ತರುವಂತೆ ಕಿರುಕುಳ ನೀಡುತ್ತಿದ್ದರು ಎಂದು ಮಹಿಳೆ ಪೋಷಕರು ಆರೋಪ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಪತಿಯ ಜತೆ ಜಗಳ ನಡೆದು ಆಕೆ ನೇಣು ಹಾಕಿಕೊಂಡಿರಬೇಕು ಎಂದು ಶಂಕಿಸಲಾಗಿದೆ. 

PREV
Read more Articles on

Recommended Stories

ಬಾಯ್‌ಫ್ರೆಂಡಿಂದ ₹2.5 ಕೋಟಿ ಸುಲಿಗೆ ಮಾಡಲು ಮಾಜಿ ಪ್ರಿಯತಮೆ ಯತ್ನ
ಅಣ್ಣನ ಮೇಲಿನ ದ್ವೇಷಕ್ಕೆ ಇಬ್ಬರು ಮಕ್ಕಳನ್ನು ಭೀಕರವಾಗಿ ಕೊಂದ ಚಿಕ್ಕಪ್ಪ