ಕನ್ನಡಪ್ರಭ ವಾರ್ತೆ ಬೆಂಗಳೂರು
ಕೊತ್ತನೂರಿನ ನಗರೇಶ್ವರ ನಾಗೇನಹಳ್ಳಿ ಕರ್ನಾಟಕ ಕೊಳಗೇರಿ ಮಂಡಳಿ (ಕೆಎಸ್ಬಿ) ಕಾಲೋನಿ ನಿವಾಸಿ ಲಕ್ಷ್ಮಣ್ (30) ಬಂಧಿತ. 2024ರ ನ.26ರಂದು ಕೆಎಸ್ಬಿ ಕಾಲೋನಿ ನಿವಾಸಿ ಡಿ.ಮೇರಿ (59) ನಾಪತ್ತೆಯಾಗಿದ್ದರು. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಪ್ರಕರಣ ದಾಖಲಿಸಿ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿ ಕೊಲೆ ಆರೋಪಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಏನಿದು ಪ್ರಕರಣ?:ಕೊಲೆಯಾದ ಮೇರಿಯ ಪತಿ ಹಾಗೂ ಆಕೆಯ ಏಕೈಕ ಮಗಳು ಕೆಲ ವರ್ಷಗಳ ಹಿಂದೆ ಅಕಾಲಿಕ ಮೃತಪಟ್ಟಿದ್ದು, ಮೇರಿ ಕೊತ್ತನೂರಿನ ನಗರೇಶ್ವರ ನಾಗೇನಹಳ್ಳಿ ಕೆಎಸ್ಬಿ ಕಾಲೋನಿಯಲ್ಲಿ ಒಂಟಿಯಾಗಿ ನೆಲೆಸಿದ್ದರು. ಹೆಣ್ಣೂರು ಕ್ರಾಸ್ನಲ್ಲಿರುವ ಈಕೆಯ ಸಂಬಂಧಿ ಜೆನಿಫರ್ ಪ್ರತಿದಿನ ಮೇರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸುತ್ತಿದ್ದರು. 2024ರ ನ.26ರಂದು ಬೆಳಗ್ಗೆ 11.30ಕ್ಕೆ ಮೇರಿ ಮೊಬೈಲ್ಗೆ ಕರೆ ಮಾಡಿದಾಗ ಸ್ವಿಚ್ಡ್ ಆಫ್ ಬಂದಿದೆ. ಅನುಮಾನಗೊಂಡು ಮನೆಗೆ ಬಂದು ನೋಡಿದಾಗ ಮೇರಿ ನಾಪತ್ತೆಯಾಗಿದ್ದರು. ಹೀಗಾಗಿ ಕೊತ್ತನೂರು ಪೊಲೀಸ್ ಠಾಣೆಗೆ ತೆರಳಿ ಮೇರಿ ನಾಪತ್ತೆ ಸಂಬಂಧ ದೂರು ನೀಡಿದ್ದರು. ಪ್ರಕರಣ ದಾಖಲಿಸಿದ ಪೊಲೀಸರು ಮೇರಿ ಪತ್ತೆಗೆ ಹುಡುಕಾಟ ನಡೆಸಿ, ಎಲ್ಲಿಯೂ ಸಿಗದ ಹಿನ್ನೆಲೆ ಸುಮ್ಮನಾಗಿದ್ದರು.
ಅದೇ ಕೆಎಸ್ಬಿ ಕಾಲೋನಿ ನಿವಾಸಿಯಾಗಿರುವ ಲಕ್ಷ್ಮಣ್ ಮದುವೆಯಾಗಿದ್ದು, 3 ಮಕ್ಕಳಿವೆ. ಈತ ಕೊಳಾಯಿ ರಿಪೇರಿ ಜತೆಗೆ ಆಟೋ ಓಡಿಸಿಕೊಂಡಿದ್ದ. ಮೇರಿ ನಾಪತ್ತೆಯಾದ ಬೆನ್ನಲ್ಲೇ ಲಕ್ಷ್ಮಣ್ ಸಹ ನಾಪತ್ತೆಯಾಗಿದ್ದ. ಹೀಗಾಗಿ ಆತನ ಪತ್ನಿ 2024ರ ನ.29ರಂದು ಪತಿ ಲಕ್ಷ್ಮಣ್ ನಾಪತ್ತೆ ಸಂಬಂಧ ಡಿ.ಜೆ.ಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿದ್ದ ಡಿ.ಜೆ.ಹಳ್ಳಿ ಪೊಲೀಸರು ಆತನ ಪತ್ತೆ ಕಾರ್ಯಕ್ಕೆ ಮುಂದಾಗಿದ್ದರು. ಜೆನಿಫರ್, ಮೇರಿಯನ್ನು ಲಕ್ಷ್ಮಣ್ ಕೊಲೆ ಮಾಡಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಬಳಿಕ ಕೊತ್ತನೂರು ಪೊಲೀಸರು, ಹೆಣ್ಣೂರಿನಲ್ಲಿ ತಲೆಮರೆಸಿಕೊಂಡಿದ್ದ ಲಕ್ಷ್ಮಣ್ನನ್ನು ಪತ್ತೆಹಚ್ಚಿ ವಶಕ್ಕೆ ಪಡೆದು ವಿಚಾರಣೆ ಮಾಡಿದಾಗ ಮೇರಿ ಕೊಲೆ ರಹಸ್ಯ ಬಯಲಾಗಿದೆ. ಹೆಚ್ಚಿನ ವಿಚಾರಣೆಗಾಗಿ ಆರೋಪಿಯನ್ನು 5 ದಿನ ಕಸ್ಟಡಿಗೆ ಪಡೆದಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
-ಬಾಕ್ಸ್)ಸಾಲ ತೀರಿಸಲು ಒಂಟಿ ಮಹಿಳೆ ಕೊಲೆ
ಪೊಲೀಸರ ದಾರಿ ತಪ್ಪಿಸಲು ಪ್ಲ್ಯಾನ್
ಮಹಿಳೆಯ ಮೊಬೈಲ್ ಕಸದ ರಾಶಿಗೆ ಎಸೆದ:
ನಾಲ್ಕು ತಿಂಗಳ ಹಿಂದೆ ದಾಖಲಾಗಿದ್ದ ಮಹಿಳೆ ನಾಪತ್ತೆ ಪ್ರಕರಣ ಪತ್ತೆಯಾಗಿದೆ. ಪರಿಚಿತ ವ್ಯಕ್ತಿಯೇ ಆಕೆಯನ್ನು ಕೊಲೆ ಮಾಡಿದ್ದು, ಸದ್ಯ ಆತನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ. ನಿರ್ಜನಪ್ರದೇಶದಲ್ಲಿ ಮಹಿಳೆಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆಕೆಯ ಬಳಿಯಿದ್ದ ಚಿನ್ನಾಭರಣಕ್ಕಾಗಿ ಆರೋಪಿ ಕೊಲೆ ಮಾಡಿರುವುದು ಗೊತ್ತಾಗಿದ್ದು, ತನಿಖೆ ಮುಂದುವರೆದಿದೆ.