ರಾಜ್ಯ ಸಮ್ಮೇಳನಕ್ಕೆ 5 ಸಾವಿರ ಪತ್ರಕರ್ತರು: ಶಿವಾನಂದ ತಗಡೂರು

KannadaprabhaNewsNetwork |  
Published : Apr 07, 2026, 01:30 AM IST
ಚಿತ್ರ 6ಬಿಡಿಆರ್55 | Kannada Prabha

ಸಾರಾಂಶ

ಏ.11ರಂದು ಬೆಳಿಗ್ಗೆ 11ಕ್ಕೆ ಜನವಾಡಾ ರಸ್ತೆಯ ಝೀರಾ ಕನ್ವೆನ್ಶನ್ ಹಾಲ್‌ನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮೇಳನಕ್ಕೆ ಚಾಲನೆ ನೀಡುವರು.

ಕನ್ನಡಪ್ರಭ ವಾರ್ತೆ ಬೀದರ್

ನಗರದಲ್ಲಿ ಇದೇ ತಿಂಗಳ 11 ಮತ್ತು 12ರಂದು ನಡೆಯಲಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 40ನೇ ಪತ್ರಕರ್ತರ ರಾಜ್ಯ ಸಮ್ಮೇಳನದಲ್ಲಿ 5 ಸಾವಿರ ಪತ್ರಕರ್ತರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಅಧ್ಯಕ್ಷ ಶಿವಾನಂದ ತಗಡೂರು ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಸೋಮವಾರ ಸಮ್ಮೇಳನದ ಮೆರವಣಿಗೆ, ವಸತಿ, ಸಾರಿಗೆ ಸೇರಿ ವಿವಿಧ ಸಮಿತಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿ, ರಾಜ್ಯದ ಎಲ್ಲ ಜಿಲ್ಲೆಗಳಿಂದ ಪತ್ರಕರ್ತರು ಬರಲಿದ್ದಾರೆ. ಪತ್ರಕರ್ತರಿಗೆ ವಸತಿ, ಆಹಾರ ಸೇರಿದಂತೆ ಯಾವುದೇ ರೀತಿಯ ತೊಂದರೆ ಆಗದಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಸಮ್ಮೇಳನ ಮಾದರಿಯಾಗಿ ಸಂಘಟಿಸಲು ತೀವ್ರಗತಿಯ ತಯಾರಿಗಳು ನಡೆದಿವೆ ಎಂದು ತಿಳಿಸಿದರು.

ಏ.11ರಂದು ಬೆಳಿಗ್ಗೆ 11ಕ್ಕೆ ಜನವಾಡಾ ರಸ್ತೆಯ ಝೀರಾ ಕನ್ವೆನ್ಶನ್ ಹಾಲ್‌ನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮೇಳನ ಉದ್ಘಾಟಿಸಲಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಜಿಲ್ಲೆಯ ಎಲ್ಲ ಶಾಸಕರು ಹಾಗೂ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಹೇಳಿದರು.

ಸಮ್ಮೇಳನದಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಹಾಗೂ ಮಾಧ್ಯಮ, ಗಾಂಧಿ ಮತ್ತು ಅಂಬೇಡ್ಕರ್, ಎ.ಐ. ಸೇರಿ ನಾಲ್ಕು ಗೋಷ್ಠಿಗಳು ಜರುಗಲಿವೆ. ಸಂಘದ ಪ್ರಶಸ್ತಿಗಳ ಪ್ರದಾನವೂ ನಡೆಯಲಿದೆ ಎಂದು ತಿಳಿಸಿದರು.

ಇದಕ್ಕೂ ಮುನ್ನ ಬೆಳಿಗ್ಗೆ 9ಕ್ಕೆ ಬಸವೇಶ್ವರ ವೃತ್ತದಿಂದ ಝೀರಾ ಕನ್ವೆನ್ಶನ್ ಹಾಲ್‌ವರೆಗೆ ಭವ್ಯ ಮೆರವಣಿಗೆ ನಡೆಸಲು ನಿರ್ಣಯಿ ಸಲಾಗಿದೆ. 40ನೇ ಸಮ್ಮೇಳನದ ಅಂಗವಾಗಿ ಮೆರವಣಿಗೆಯಲ್ಲಿ 40 ಬೃಹತ್ ಕೊಡೆಗಳು ಗಮನ ಸೆಳೆಯಲಿವೆ. ಬೈಲೂರು ನಿಷ್ಕಲ ಮಂಟಪದ ನಿಜಗುಣಪ್ರಭು ಸ್ವಾಮೀಜಿ ಹಾಗೂ ಭಾಲ್ಕಿ ಹಿರೇಮಠ ಸಂಸ್ಥಾನದ ಗುರುಬಸವ ಪಟ್ಟದ್ದೇವರು ಭಾಗವಹಿಸ ಲಿದ್ದಾರೆ ಎಂದು ಹೇಳಿದರು.

ಇದೇ ವೇಳೆ ಸಾರಿಗೆ ಸಮಿತಿಯ ಪೋಸ್ಟರ್‌ನ್ನು ಬಿಡುಗಡೆ ಮಾಡಿದರು. ಜಿಲ್ಲೆಯಲ್ಲಿ ವಿವಿಧ ಉಪ ಸಮಿತಿಗಳ ಪದಾಧಿಕಾರಿ ಗಳು ಸಮ್ಮೇಳನ ಸಿದ್ಧತಾ ಕಾರ್ಯಗಳಲ್ಲಿ ನಿರತರಾಗಿದ್ದಾರೆ. ಸಮ್ಮೇಳನವನ್ನು ಸರ್ವ ರೀತಿಯಿಂದಲೂ ಯಶಸ್ವಿಗೊಳಿಸಲು ಶಕ್ತಿ ಮೀರಿ ಪ್ರಯತ್ನಿಸಲಾಗುತ್ತಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಆನಂದ ದೇವಪ್ಪ ಮಾಹಿತಿ ನೀಡಿದರು.

ಜಿಲ್ಲಾ ಅಡಾಕ್ ಸಮಿತಿ ಸದಸ್ಯರಾದ ಅಪ್ಪಾರಾವ್ ಸೌದಿ, ಶಿವಕುಮಾರ ಸ್ವಾಮಿ, ಮೆರವಣಿಗೆ ಸಮಿತಿಯ ಪ್ರಧಾನ ಸಂಚಾಲಕ ಡಾ.ರಜನೀಶ್ ವಾಲಿ, ಸಂಚಾಲಕ ವಿಜಯಕುಮಾರ ಸೋನಾರೆ, ಸಹ ಸಂಚಾಲಕ ನಂದಕುಮಾರ ಕರಂಜೆ, ವಸತಿ ಸಮಿತಿ ಯ ಸಂಚಾಲಕ ಶ್ರೀಕಾಂತ ಪಾಟೀಲ, ಸಹ ಸಂಚಾಲಕ ಸಂತೋಷ್ ಚೆಟ್ಟಿ, ಸಾರಿಗೆ ಸಮಿತಿಯ ಪ್ರಧಾನ ಸಂಚಾಲಕ ಪೃಥ್ವಿರಾಜ್ ಎಸ್., ಸಂಚಾಲಕ ಸುನೀಲ್ ಕುಲಕರ್ಣಿ, ಛಾಯಾಚಿತ್ರ ಪ್ರದರ್ಶನ ಸಮಿತಿಯ ಪ್ರಧಾನ ಸಂಚಾಲಕ ಗೋಪಿಚಂದ್ ತಾಂದಳೆ, ಶಿಸ್ತು ಪಾಲನಾ ಹಾಗೂ ಸ್ವಯಂ ಸೇವಕರ ಸಮಿತಿಯ ಪ್ರಧಾನ ಸಂಚಾಲಕ ಎಂ.ಪಿ. ಮುದಾಳೆ, ಹಿರಿಯ ಪತ್ರಕರ್ತರಾದ ಅಶೋಕುಮಾರ ಕರಂಜಿ, ಬಸವರಾಜ ಕಾಮಶೆಟ್ಟಿ, ಅನಿಲ್ ಪಾಟೀಲ ಹಾಲಹಿಪ್ಪರ್ಗಾ, ಸಿದ್ರಾಮಯ್ಯ ಸ್ವಾಮಿ, ಹಾಜಿಪಾಶಾ, ಧಮೇಂದ್ರ ಪೂಜಾರಿ, ಮಾಣಿಕೇಶ್ ಪಾಟೀಲ, ಪ್ರವೀಣ್ ಮೇತ್ರೆ, ಸತೀಶ್ ತುಪ್ಪದ್ ಮತ್ತಿತರರು ಇದ್ದರು.

PREV
Stay updated with the latest Kannada Cinema News (ಸಿನಿಮಾ ಸುದ್ದಿ) — Sandalwood, TV serials, celebrity gossip, movie reviews, and trending film-world updates. Read fresh entertainment news headlines on Kannada Prabha.

Recommended Stories

ಟಾಕ್ಸಿಕ್‌ ನಾಡಿಯಾ ಪಾತ್ರಕ್ಕೆ ಕಿಯಾರಾ ಆಯ್ಕೆಯಾದದ್ದು ಹೇಗೆ?
ಒಂದ್ಸಲ ಟಚ್‌ ಮಾಡಲು ಬಿಡ್ತೀಯಾ ಅಂತ ಕೇಳಿದ್ದ : ರಣವೀರ್‌ ಸಿಂಗ್‌