ವಿಮಾನ ಅವಘಡದಿಂದ ಪಾರಾದ ಧ್ರುವ ಸರ್ಜಾ, ಮಾರ್ಟಿನ್ ಚಿತ್ರತಂಡ

KannadaprabhaNewsNetwork |  
Published : Feb 21, 2024, 02:05 AM ISTUpdated : Feb 21, 2024, 11:37 AM IST
ಮಾರ್ಟಿನ್‌ | Kannada Prabha

ಸಾರಾಂಶ

ವಿಮಾನ ಅವಘಡದಿಂದ ಪಾರಾದ ಧ್ರುವ ಸರ್ಜಾ ಹಾಗೂ ಮಾರ್ಟಿನ್ ಚಿತ್ರತಂಡ

ಕನ್ನಡಪ್ರಭ ಸಿನಿವಾರ್ತೆ

ಧ್ರುವ ಸರ್ಜಾ ನಟನೆಯ ‘ಮಾರ್ಟಿನ್​’ ಚಿತ್ರತಂಡ ಪ್ರಯಾಣಿಸುತ್ತಿದ್ದ ವಿಮಾನ ಹವಾಮಾನ ವೈಪರೀತ್ಯದಿಂದ ತುರ್ತು ಭೂಸ್ಪರ್ಶ ಮಾಡಿದ್ದು, ಈ ವಿಮಾನ ಅವಘಡದಲ್ಲಿ ಧ್ರುವ ಸರ್ಜಾ ಮತ್ತು ಮಾರ್ಟಿನ್ ಚಿತ್ರತಂಡ ಯಾವುದೇ ತೊಂದರೆಯಿಲ್ಲದೆ ಪಾರಾಗಿದ್ದಾರೆ.

ಈ ಕುರಿತು ವಿಡಿಯೋ ಮೂಲಕ, ‘ಕೂದಲೆಳೆಯ ಅಂತರದಿಂದ ವಿಮಾನ ಅವಘಡದಿಂದ ಪಾರಾಗಿದ್ದೇವೆ. ಇದು ಮೈನಡುಗಿಸಿದ ಅನುಭವ. ಜೀವನದಲ್ಲಿ ಇಂಥ ಭಯಾನಕ ಅನುಭವ ಆಗಿರಲಿಲ್ಲ. 

ದೇವರಿಗೆ ನಾವು ಧನ್ಯವಾದ ಹೇಳಬೇಕು’ ಎಂದು ಧ್ರುವ ಸರ್ಜಾ ತಿಳಿಸಿದ್ದಾರೆ. ‘ಮಾರ್ಟಿನ್‌’ ಚಿತ್ರತಂಡ ಪ್ರಯಾಣಿಸುತ್ತಿದ್ದ ವಿಮಾನ ಶ್ರೀನಗರದಿಂದ ದೆಹಲಿಗೆ ಮರಳುತ್ತಿತ್ತು. 

ದಾರಿ ಮಧ್ಯೆ ಹವಾಮಾನ ವೈಪರೀತ್ಯದಿಂದ ತುರ್ತು ಭೂಸ್ಪರ್ಶ ಮಾಡಬೇಕಾಯ್ತು. ‘ಪೈಲೆಟ್‌ ಸಮಯಪ್ರಜ್ಞೆಯಿಂದ ಸ್ವಲ್ಪದರಲ್ಲೇ ಅಪಘಾತವಾಗುವುದು ತಪ್ಪಿದೆ’ ಎಂದು ಚಿತ್ರತಂಡ ಹೇಳಿದೆ. 

ಇತ್ತೀಚೆಗೆ ಮುಂಬೈಯಿಂದ ಹೈದರಾಬಾದ್‌ಗೆ ವಿಮಾನದಲ್ಲಿ ತೆರಳುವಾಗ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಅವರಿಗೂ ಇಂಥದ್ದೇ ಅನುಭವವಾಗಿತ್ತು.

PREV
Stay updated with the latest Kannada Cinema News (ಸಿನಿಮಾ ಸುದ್ದಿ) — Sandalwood, TV serials, celebrity gossip, movie reviews, and trending film-world updates. Read fresh entertainment news headlines on Kannada Prabha.

Recommended Stories

ಬಾಲಿವುಡ್‌ ನಟಿ ದೀಪಿಕಾ ಬ್ಯಾಗ್‌ ತಡಕಾಡಿದರೆ ಸಿಗುವ ವಿಚಿತ್ರ ವಸ್ತು ಏನು ಗೊತ್ತಾ
ಬೆಂಗಳೂರು ಚಿತ್ರೋತ್ಸವದಲ್ಲಿ ಇಂದು ನೋಡಬಹುದಾದ ಅತ್ಯುತ್ತಮ 10 ಸಿನಿಮಾಗಳು