ಜೀವನವೇ ಕುಂಟೆ ಬಿಲ್ಲೆ: ನಿರ್ದೇಶಕ ಸಿದ್ದೇಗೌಡ

Published : Sep 26, 2025, 12:18 PM IST
Film theater

ಸಾರಾಂಶ

ಸಿದ್ದೇಗೌಡ ನಿರ್ದೇಶನದಲ್ಲಿ ಯದು ಬಾಲಾಜಿ, ಮೇಘಾಶ್ರೀ ನಾಯಕ, ನಾಯಕಿಯಾಗಿರುವ ಜಿ ಕುಮಾರ್‌ ಗೌಡ ನಿರ್ಮಾಣದ ಕುಂಟೆಬಿಲ್ಲೆ ಸಿನಿಮಾ ಇಂದು ಬಿಡುಗಡೆಯಾಗುತ್ತಿದೆ. ಸಿನಿಮಾ ಬಗ್ಗೆ ನಿದೇಶಕ ಸಿದ್ದೇಗೌಡ ಮಾತುಗಳು.

 

- ಚಿಕ್ಕ ವಯಸ್ಸಿನಲ್ಲಿ ನಾವೆಲ್ಲ ಆಟ ಆಡುತ್ತಿರುತ್ತೇವೆ. ಆಟಗಳು ಪಾಠಗಳನ್ನು, ಜೀವನದ ಮೌಲ್ಯವನ್ನು ಕಲಿಸುತ್ತವೆ. ಅನೇಕರ ಬಾಲ್ಯಕಾಲದ ಆಟದಲ್ಲಿ ಕುಂಟೇಬಿಲ್ಲೆಗೊಂದು ವಿಶೇಷ ಸ್ಥಾನ ಇರುತ್ತದೆ. ಅದರಲ್ಲಿ ಕ್ರಶ್‌ಗಳು ಹೆಚ್ಚಾಗಿ ಆಗುತ್ತವೆ. ಅದು ಬದುಕಿನ ಎಲ್ಲ ಹಂತದಲ್ಲೂ ಕಾಡುತ್ತಿರುತ್ತದೆ. ‘ಕುಂಟೆಬಿಲ್ಲೆ’ ಎಂಬ ಶೀರ್ಷಿಕೆಯ ನಮ್ಮ ಸಿನಿಮಾ ಇವೆಲ್ಲಕ್ಕೂ ಕನೆಕ್ಟ್‌ ಆಗಿದ್ದೇ ಭಿನ್ನ ಬಗೆಯ ಕಥೆ ಹೇಳುತ್ತದೆ.

- ದಿನನಿತ್ಯ ಓದುವಂಥಾ ಸುದ್ದಿಗಳೇ ಈ ಸಿನಿಮಾಕ್ಕೆ ಸ್ಫೂರ್ತಿ. ಆರು ತಿಂಗಳು ಈ ಸಿನಿಮಾಕ್ಕೆ ಶ್ರಮಿಸಿದ್ದೇವೆ. ಸಮಾಜದಲ್ಲಿ ಎಲ್ಲ ವರ್ಗದ ಜನರೂ ಸಮಾನರು. ಪ್ರೀತಿ, ಪ್ರೇಮ ಅನ್ನೋದು ಜಾತಿ, ವರ್ಗ, ಆರ್ಥಿಕ ಹಿನ್ನೆಲೆ ನೋಡಿ ಬರೋದಿಲ್ಲ. ಚಿಕ್ಕ ವಯಸ್ಸಿನ ಪ್ರೀತಿ ಜೀವನದುದ್ದಕ್ಕೂ ಕಾಡುತ್ತದೆ ಎಂಬುದರ ಜೊತೆಗೆ ಸಮಾಜಕ್ಕೆ ಅದ್ಭುತ ಸಂದೇಶವನ್ನೂ ನೀಡಿದ್ದೇವೆ.

- ಸಿನಿಮಾದಲ್ಲಿ ಸಾಕಷ್ಟು ರೋಚಕ ತಿರುವುಗಳಿವೆ. ಆಡಂಬರ ಇಲ್ಲದೆ ಸಹಜವಾಗಿ ಮಾಡಿದ ಸಿನಿಮಾ. ಈ ಸಬ್ಜೆಕ್ಟ್‌ ಬಗ್ಗೆ ತುಂಬ ಸಿನಿಮಾ ಬಂದರೂ ಈ ಥರದ ನರೇಶನ್‌ ಬಂದಿಲ್ಲ. ಪ್ರೇಕ್ಷಕ ಒಂದೇ ಒಂದು ಸಲ ಥೇಟರ್‌ ಒಳಗೆ ಬಂದರೆ ಸಾಕು, ನಂತರ ಆತನೇ ಎಲ್ಲರನ್ನೂ ಕರೆದುಕೊಂಡು ಬರುತ್ತಾನೆ, ನನಗೆ ಆ ವಿಶ್ವಾಸ ಇದೆ.

- ಹೆಚ್‌ ಡಿ ಕೋಟೆ ತಾಲೂಕಿನ ಜಿ ಬಿ ಸರಗೂರು ನನ್ನ ಹುಟ್ಟೂರು. ನಾನು ಸಿನಿಮಾ ರಂಗಕ್ಕೆ ಬಂದು 30 ವರ್ಷಗಳಾಗಿವೆ. ಆರಂಭದಲ್ಲಿ ಕಿರುತೆರೆಯಲ್ಲಿದ್ದೆ. ಆ ಬಳಿಕ ಹಿರಿತೆರೆಗೆ ಬಂದೆ. ಹಳ್ಳಿ ಸೊಗಡಿನ ಒಂದೊಳ್ಳೆ ಕಥೆ ಹೇಳುವ ಉದ್ದೇಶದಿಂದ ಈ ಸಿನಿಮಾ ಮಾಡಿದ್ದೇನೆ.

PREV
Stay updated with the latest Kannada Cinema News (ಸಿನಿಮಾ ಸುದ್ದಿ) — Sandalwood, TV serials, celebrity gossip, movie reviews, and trending film-world updates. Read fresh entertainment news headlines on Kannada Prabha.
Read more Articles on

Recommended Stories

ಟಾಕ್ಸಿಕ್ ಚಿತ್ರದ ಕಾರ್‌ ಸೀನ್‌ನಲ್ಲಿರೋ ನಟೇಲಿ ಬರ್ನ್‌ ಯಾರು?
ರಾಕಿಂಗ್‌ ಸ್ಟಾರ್‌ ಮುಂದಿನ ನಿರ್ದೇಶಕರಿಗೆ ಗೀತು ಮೋಹನ್‌ದಾಸ್‌ ಕಿವಿಮಾತು