ವಿಷ್ಣುವರ್ಧನ್ ಸ್ಮಾರಕದಲ್ಲಿ ರಾನಿ ಚಿತ್ರೀಕರಣ ಮುಕ್ತಾಯ

KannadaprabhaNewsNetwork |  
Published : Dec 23, 2023, 01:45 AM IST
ರಾನಿ | Kannada Prabha

ಸಾರಾಂಶ

ಮೈಸೂರಿನ ವಿಷ್ಣುವರ್ಧನ್ ಸಮಾಧಿಯಲ್ಲಿ ಕುಂಬಳಕಾಯಿ ಒಡೆದ ರಾನಿ ಚಿತ್ರತಂಡ.

ಕನ್ನಡಪ್ರಭ ಸಿನಿವಾರ್ತೆ

‘ಕನ್ನಡತಿ’ ಖ್ಯಾತಿಯ ಕಿರಣ್ ರಾಜ್‌ ನಾಯಕನಾಗಿರುವ ‘ರಾನಿ’ ಸಿನಿಮಾದ ಕೊನೆಯ ಹಂತದ ಚಿತ್ರೀಕರಣ ಮೈಸೂರಿನ ವಿಷ್ಣುವರ್ಧನ್‌ ಸ್ಮಾರಕದಲ್ಲಿ ನಡೆದಿದೆ.

ಪ್ಯಾನ್ ಇಂಡಿಯಾ ಮಟ್ಟದಲ್ಲಿ ರೂಪುಗೊಳ್ಳುತ್ತಿರುವ ಈ ಸಿನಿಮಾವನ್ನು ಗುರುತೇಜ್ ಶೆಟ್ಟಿ ನಿರ್ದೇಶಿಸಿದ್ದಾರೆ. ಆ್ಯಕ್ಷನ್ ಮತ್ತು ಭಾವುಕತೆ ಎರಡರ ಮಿಶ್ರಣ ಈ ಸಿನಿಮಾ ಎಂದು ಅವರು ಈ ಹಿಂದೆ ತಿಳಿಸಿದ್ದರು. ಚಿತ್ರದಲ್ಲಿ ರಾಧ್ಯ, ಸಮೀಕ್ಷಾ ಮತ್ತು ಅಪೂರ್ವ ನಾಯಕಿಯರಾಗಿ ನಟಿಸಿದ್ದಾರೆ. ಚಂದ್ರಕಾಂತ್ ಪೂಜಾರಿ, ಉಮೇಶ ಹೆಗ್ಡೆ ನಿರ್ಮಿಸಿದ್ದಾರೆ. ರವಿಶಂಕರ್, ಮಠ ಗುರುಪ್ರಸಾದ್, ಯಶ್ ಶೆಟ್ಟಿ, ಸೂರ್ಯ ಕುಂದಾಪುರ, ಧರ್ಮಣ್ಣ ಕಡೂರ್, ಮೈಕೋ ನಾಗರಾಜ್, ಉಗ್ರಂ ಮಂಜು ನಟಿಸಿದ್ದಾರೆ.

PREV
Stay updated with the latest Kannada Cinema News (ಸಿನಿಮಾ ಸುದ್ದಿ) — Sandalwood, TV serials, celebrity gossip, movie reviews, and trending film-world updates. Read fresh entertainment news headlines on Kannada Prabha.

Recommended Stories

ಪ್ರೇಕ್ಷಕನಿಗೆ ಸಿನಿಮಾಗೆ ರೇಟಿಂಗ್ ಕೊಡುವ ಹಕ್ಕಿಲ್ಲವೇ!
ಟಾಕ್ಸಿಕ್ ಚಿತ್ರದ ಕಾರ್‌ ಸೀನ್‌ನಲ್ಲಿರೋ ನಟೇಲಿ ಬರ್ನ್‌ ಯಾರು?