- ಪೋಷಕರು, ಶಿಕ್ಷಕರಿಗೆ ಹಿರಿಯ ಪತ್ರಕರ್ತಅಂಶಿ ಪ್ರಸನ್ನಕುಮಾರ್ ಸಲಹೆ
---
ಕನ್ನಡಪ್ರಭ ವಾರ್ತೆ ಮೈಸೂರುಮಕ್ಕಳಿಗೆ ಕೇವಲ ಎಂಜಿನಿಯರಿಂಗ್, ಮೆಡಿಕಲ್ ಓದುವಂತೆ ಒತ್ತಡ ಹೇರದೆ ಅವರ ಆಸಕ್ತಿಯ ವಿಷಯ ಗುರುತಿಸಿ ಪೋಷಕರು ಹಾಗೂ ಶಿಕ್ಷಕರು ಪ್ರೋತ್ಸಾಹಿಸಬೇಕು ಎಂದು ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್ ಸಲಹೆ ಮಾಡಿದರು.
ಎಸ್ಎಸ್ಎಲ್ಸಿ ಹಾಗೂ ಪಿಯುಸಿ ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ. ಅದರಲ್ಲೂ ಮುಂದೇನು ನಾವೇನು ಆಗಬೇಕು ಎಂಬುದನ್ನು ನಿರ್ಧರಿಸುವುದು ಪಿಯುಸಿ. ಆದ್ದರಿಂದ ವಿದ್ಯಾರ್ಥಿಗಳು ಗುರಿ ಇಟ್ಟುಕೊಂಡು ಗುರುವಿನ ಮಾರ್ಗದರ್ಶನ ಹಾಗೂ ಪೋಷಕರ ಬೆಂಬಲದಿಂದ ಉತ್ತಮವಾಗಿ ಓದಬೇಕು. ಸಾಧನೆ ಮಾಡುವ ಮನಸ್ಸಿದ್ದರೆ ಏನು ಬೇಕಾದರೂ ಸಾಧಿಸಬಹುದು ಎಂದು ಅವರು ಹೇಳಿದರು.
ದೇಶದ ಕಲೆ, ಸಾಹಿತ್ಯ, ಸಂಸ್ಕೃತಿ, ಪರಂಪರೆಯ ಬಗ್ಗೆ ತಿಳಿದುಕೊಳ್ಳಬೇಕು. ಪರಿಸರ ಕಾಳಜಿಯನ್ನು ಕೂಡ ಹೊಂದಿರಬೇಕು ಎಂದು ಅವರು ಹೇಳಿದರು.
ಎಸ್ಎಸ್ಎಲ್ಸಿಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ಪ್ರಯೋಗ್ ರಾಜ್, ಜೆ. ಲಕ್ಷ್ಮಿ ಚರಿತಾ, ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಹೆಚ್ಚು ಅಂಕ ಗಳಿಸಿದ ಸುಪ್ರಿಯಾ ಹಾಗೂ ವಿಜ್ಞಾನ ವಿಭಾಗದಲ್ಲಿ ಹೆಚ್ಚು ಅಂಕ ಗಳಿಸಿದ ಎಂ. ತೇಜಸ್ವಿನಿ ಅವರನ್ನು ಸನ್ಮಾನಿಸಲಾಯಿತು.
ಸಹ ಶಿಕ್ಷಕ ಗಣೇಶ್ ಕುಮಾರ್ ವರದಿ ಓದಿದರು. ವಿದ್ಯಾರ್ಥಿಗಳಾದ ಸಾನ್ವಿ ಹೆಬ್ಬಾರ್ ಮತ್ತು ಸಂಗಡಿಗರು ಪ್ರಾರ್ಥಿಸಿದರು. ಮಹೇಶ್ವರಿ ಸ್ವಾಗತಿಸಿದರು. ಸಿ.ಎಸ್. ನಿಶ್ಚಲ್ ವಂದಿಸಿದರು. ಅನ್ನಪೂರ್ಣ ಹಾಗೂ ಮೌರ್ಯ ಲೋಕೇಶ್ ಕಾರ್ಯಕ್ರಮ ನಿರೂಪಿಸಿದರು. ನಂತರ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.
ವಾರ್ಷಿಕೋತ್ವವ ಅಂಗವಾಗಿ ಶಾಲಾ- ಕಾಲೇಜಿನ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಸಾಹಿತ್ಯಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಸ್ಪರ್ಧೆಗಳ ವಿಜೇತರಿಗೆ ಡಿಡಿಪಿಐ ಎಚ್.ಕೆ. ಪಾಂಡು ಕಲಾಮಂದಿರದಲ್ಲಿ ಭಾನುವಾರ ಬೆಳಗ್ಗೆ ನಡೆದ ಸಮಾರಂಭದಲ್ಲಿ ಬಹುಮಾನ ವಿತರಿಸಿದರು.
ಶಾಲಾ ವಾರ್ಷಿಕೋತ್ಸವ ಅಂಗವಾಗಿ ತರಳಬಾಳು ಶಿಕ್ಷಣ ಕೇಂದ್ರದಲ್ಲಿ ನಡೆದ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ವಸ್ತು ಪ್ರದರ್ಶನವನ್ನು ಇಸ್ರೋ ನಿವೃತ್ತ ಪರಿಸರ ವಿಜ್ಞಾನಿ ಡಾ.ವಿ. ಜಗನ್ನಾಥ ಉದ್ಘಾಟಿಸಿದರು.