ಕನ್ನಡಪ್ರಭ ವಾರ್ತೆ ಮಂಡ್ಯಡಿಎಂಸಿ ಪ್ರೊಡಕ್ಷನ್ಸ್ ನಿರ್ಮಿಸಿರುವ ಲೇಡಿಸ್ ಬಾರ್ ಚಿತ್ರ ಫೆ.೧೬ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರನಿರ್ದೇಶಕ ಎ.ಎನ್. ಮುತ್ತು ತಿಳಿಸಿದರು.
ಬೆಂಗಳೂರಿನಲ್ಲಿ ಶೇ. ೭೫ರಷ್ಟು ಚಿತ್ರೀಕರಣ ನಡೆಸಿದ್ದು, ಉಳಿದಂತೆ ಮದ್ದೂರು ಮತ್ತು ಮಾಗಡಿಯಲ್ಲಿ ಚಿತ್ರೀಕರಣ ಮಾಡಲಾಗಿದೆ. ನಾಲ್ಕು ಹಾಡುಗಳು ಇವೆ. ಇದರಲ್ಲಿ ನಾಯಕ ಅಥವಾ ನಾಯಕಿ ಇರುವುದಿಲ್ಲ. ಚಿತ್ರಕಥೆಯೇ ನಾಯಕ-ನಾಯಕಿಯರನ್ನು ನಿರೂಪಿಸುತ್ತದೆ ಎಂದರು.
ಮದ್ದೂರಿನ ತೈಲೂರಿನವರೇ ಆದ ಟಿ.ಎಂ. ಸೋಮಶೇಖರ್ ಅವರು ಚಿತ್ರ ನಿರ್ಮಾಪಕರಾಗಿದ್ದು, ತಾರಾಗಣದಲ್ಲಿ ಹಾಸನದ ಶಿವಾನಿಗೌಡ ಹಾಗೂ ಮಂಡ್ಯದ ಪ್ರೇರಣಾ ಇತರರು ಅಚ್ಚುಕಟ್ಟಾಗಿ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಹಿರಿಯ ಛಾಯಾಗ್ರಾಹಕ ವೀನಸ್ಮೂರ್ತಿ ಚಿತ್ರೀಕರಮ ಮಾಡಿದ್ದಾರೆ ಎಂದರು.ಚಿತ್ರನಿರ್ಮಾಪಕ ಟಿ.ಎಂ.ಸೋಮಶೇಖರ್ ಮಾತನಾಡಿ, ಮದ್ದೂರಿನ ತೈಲೂರಿನವನಾದ ನಾನು ರೈತ ಕುಟುಂಬದಿಂದ ಬಂದಿದ್ದು, ಚಿತ್ರೋಧ್ಯಮದಲ್ಲಿ ಕೆಲಸ ಮಾಡಿದ್ದೇನೆ. ಇದೀಗ ನಾನೇ ಚಿತ್ರ ನಿರ್ಮಾಣ ಮಾಡಬೇಕೆಂಬ ಬಯಕೆಯಿಂದ ಲೇಡಿಸ್ ಬಾರ್ ಚಿತ್ರವನ್ನು ನಿರ್ಮಾಣ ಮಾಡಿದ್ದಾಗಿ ತಿಳಿಸಿದರು.
ನಟಿಯರಾದ ಪ್ರೇರಣಾ, ಶಿವಾನಿಗೌಡ, ಛಾಯಾಗ್ರಾಹಕ ವೀನಸ್ಮೂರ್ತಿ ಗೋಷ್ಠಿಯಲ್ಲಿದ್ದರು.