ಕಾಳಿಂಗ ಸರ್ಪದ ಕತೆ ಹೇಳುವ ಸಿನಿಮಾ ತಿಮ್ಮನ ಮೊಟ್ಟೆಗಳು : ರಕ್ಷಿತ್‌ ತೀರ್ಥಹಳ್ಳಿ

Published : Jun 14, 2025, 10:23 AM IST
Thimmana Mottegalu Movie

ಸಾರಾಂಶ

ರಕ್ಷಿತ್‌ ತೀರ್ಥಹಳ್ಳಿ ನಿರ್ದೇಶನದ‘ತಿಮ್ಮನ ಮೊಟ್ಟೆಗಳು’ ಚಿತ್ರದ ಟ್ರೇಲರನ್ನು ನಿರ್ದೇಶಕ ಪಿ ಶೇಷಾದ್ರಿ, ಕೋಡ್ಲು ರಾಮಕೃಷ್ಣ ಬಿಡುಗಡೆ ಮಾಡಿದ್ದಾರೆ.

 ಸಿನಿವಾರ್ತೆ

ರಕ್ಷಿತ್‌ ತೀರ್ಥಹಳ್ಳಿ ನಿರ್ದೇಶನದ‘ತಿಮ್ಮನ ಮೊಟ್ಟೆಗಳು’ ಚಿತ್ರದ ಟ್ರೇಲರನ್ನು ನಿರ್ದೇಶಕ ಪಿ ಶೇಷಾದ್ರಿ, ಕೋಡ್ಲು ರಾಮಕೃಷ್ಣ ಬಿಡುಗಡೆ ಮಾಡಿದ್ದಾರೆ.

ಈ ಸಿನಿಮಾ ಕುರಿತು ನಿರ್ದೇಶಕ ರಕ್ಷಿತ್‌ ತೀರ್ಥಹಳ್ಳಿ, ‘ಪಶ್ಚಿಮ ಘಟ್ಟದ ಕಾಡುಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುವ ಕಾಳಿಂಗ ಸರ್ಪದ ಕುರಿತ ಕತೆ ಈ ಚಿತ್ರದಲ್ಲಿದೆ. ಅಮೆರಿಕದ ಡಲ್ಲಾಸ್‌ನಲ್ಲಿ ಈ ಚಿತ್ರದ ಪ್ರಿಮೀಯರ್ ಶೋ ನಡೆದಿದೆ. ಅಲ್ಲಿನ ಜನರು ಚಿತ್ರವನ್ನು ಬಹಳ ಇಷ್ಟಪಟ್ಟಿದ್ದಾರೆ’ ಎಂದರು.

ಪಿ.ಶೇಷಾದ್ರಿ, ‘ನಾನು ಈ ಚಿತ್ರವನ್ನು ಕೊಲ್ಕತ್ತಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ನೋಡಿದ್ದೇನೆ. ಈಗಿನ ಪರಿಸ್ಥಿತಿಗೆ ತಕ್ಕಂತ ಕತೆ ಚಿತ್ರದಲ್ಲಿದೆ. ಇಂಥ ಚಿತ್ರಗಳನ್ನು ನೋಡಲು ಜನ ಚಿತ್ರಮಂದಿರಗಳಿಗೆ ಬರಬೇಕು’ ಎಂದರು.

ಆದರ್ಶ್ ಅಯ್ಯಂಗಾರ್‌ ಈ ಸಿನಿಮಾ ನಿರ್ಮಿಸಿದ್ದಾರೆ. ಜೂನ್‌ 27ಕ್ಕೆ ಸಿನಿಮಾ ತೆರೆಗೆ ಬರುತ್ತಿದೆ. ಹಿರಿಯ ನಟ ಸುಚೇಂದ್ರ ಪ್ರಸಾದ್‌, ತಿಮ್ಮನ ಪಾತ್ರಧಾರಿ ಕೇಶವ್‌ ಗುತ್ತಳಿಕೆ, ಆಶಿಕಾ ಸೋಮಶೇಖರ್‌, ಪ್ರಗತಿ ಪ್ರಭು, ರಘು ರಾಮನಕೊಪ್ಪ ಹಾಗೂ ಸಂಗೀತ ನಿರ್ದೇಶಕ ಹೇಮಂತ್‌ ಜೋಯಿಷ್‌ ಹಾಜರಿದ್ದರು.

 

PREV
Stay updated with the latest Kannada Cinema News (ಸಿನಿಮಾ ಸುದ್ದಿ) — Sandalwood, TV serials, celebrity gossip, movie reviews, and trending film-world updates. Read fresh entertainment news headlines on Kannada Prabha.
Read more Articles on

Recommended Stories

ಈ ಸಲದ ಚಿತ್ರೋತ್ಸವಕ್ಕೆ 2 ಲಕ್ಷ ಮಂದಿ ಬರುತ್ತಾರೆ: ಸಾಧು ಕೋಕಿಲ
ಕನ್ನಡಕ್ಕೆ ಹೊಸತನದ ಕತೆ ಕೊಟ್ಟ ಲ್ಯಾಂಡ್‌ಲಾರ್ಡ್‌