;Resize=(412,232))
‘ನಾವಾಗಿಯೇ ಹೋಗಿ ಕೇಳಿ ಪಡೆದುಕೊಂಡ ಪ್ರಶಸ್ತಿ ಅಲ್ಲ. ಅವರೇ ಕರೆದು ಗುರುತಿಸಿ ಕೊಡುವ ಪ್ರಶಸ್ತಿಯನ್ನು ಮತ್ತು ಪ್ರಶಸ್ತಿ ಪಡೆದುಕೊಂಡ ಕನ್ನಡದ ಕಲಾವಿದರನ್ನು ಅತ್ಯಂತ ನಿರ್ಲಕ್ಷ್ಯದಿಂದ ನಡೆಸಿಕೊಳ್ಳುವುದು ಯಾಕೆ?’
ಈ ಕುರಿತು ನಟ ಶ್ರೀಮುರಳಿ, ‘ಫಿಲಂಫೇರ್ ಅವಾರ್ಡ್ ತೆಗೆದುಕೊಂಡ ನಟ ನಟಿಯರ ಫೋಟೋಗಳನ್ನು ಫಿಲಂಫೇರ್ ಮ್ಯಾಗಜೀನ್ನ ಮುಖಪುಟದಲ್ಲಿ ಹಾಕುತ್ತಾರೆ. ಆದರೆ, ಈ ಮುಖಪುಟದಲ್ಲಿ ಕನ್ನಡದವರು ಮಾತ್ರ ಇರಲ್ಲ. ಯಾಕೆ ಈ ನಿರ್ಲಕ್ಷ್ಯ ಧೋರಣೆ ಎಂಬುದು ಅರ್ಥವಾಗುತ್ತಿಲ್ಲ. ನಾವು ಹೋಗಿ ಕೇಳಿ ಪಡೆದುಕೊಂಡ ಪ್ರಶಸ್ತಿ ಅಲ್ಲ ಅದು. ಅವರೇ ಕರೆದು ಗೌರವಿಸಿದ್ದು. ಅವರ ಗೌರವಕ್ಕೆ ಪ್ರಾಮುಖ್ಯತೆ ಕೊಡುವಾಗ ಕನ್ನಡದವರನ್ನು ನಿರ್ಲಕ್ಷಿಸುವ ಅಥವಾ ಉಡಾಫೆಯಿಂದ ನಡೆಸಿಕೊಳ್ಳುವ ಮನಸ್ಥಿತಿ ಯಾಕೆ, ಕನ್ನಡದವರು ಏನು ತಪ್ಪು ಮಾಡಿದ್ದಾರೆ. ಈ ರೀತಿಯ ತಾತ್ಸಾರ ಧೋರಣೆ ಸರಿಯಲ್ಲ’ ಎಂದು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.
ಇತ್ತೀಚೆಗಷ್ಟೆ 70ನೇ ಫಿಲಮ್ ಫೇರ್ ಅವಾರ್ಡ್ ಕಾರ್ಯಕ್ರಮ ಕೇರಳದ ಕೊಚ್ಚಿಯಲ್ಲಿ ನಡೆಯಿತು. ‘ಬಘೀರ’ ಚಿತ್ರಕ್ಕಾಗಿ ನಟ ಶ್ರೀಮುರಳಿ ಅವರಿಗೆ ಪ್ರಶಸ್ತಿ ನೀಡಲಾಗಿತ್ತು.