ವಿಚಾರಣೆಯಲ್ಲಿ ಇಬ್ಬರು ಸಚಿವರ ಹೆಸರು ಬಾಯ್ಬಿಟ್ಟ ಕೇಜ್ರಿ!

KannadaprabhaNewsNetwork |  
Published : Apr 02, 2024, 01:02 AM ISTUpdated : Apr 02, 2024, 05:25 AM IST
kejri

ಸಾರಾಂಶ

ಅಬಕಾರಿ ಹಗರಣ ಸಂಬಂಧ ಬಂಧನಕ್ಕೆ ಒಳಗಾಗಿ ಜಾರಿ ನಿರ್ದೇಶನಾಲಯ (ಇ.ಡಿ.)ದ ವಿಚಾರಣೆ ಎದುರಿಸಿದ ವೇಳೆ ದೆಹಲಿಯ ಇಬ್ಬರು ಮಂತ್ರಿಗಳಾದ ಅತಿಷಿ ಹಾಗೂ ಸೌರಭ್‌ ಭಾರದ್ವಾಜ್‌ ಅವರ ಹೆಸರನ್ನು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಬಾಯಿಬಿಟ್ಟಿದ್ದಾರೆ ಎಂದು ಇ.ಡಿ. ಹೇಳಿಕೊಂಡಿದೆ.

ನವದೆಹಲಿ: ಅಬಕಾರಿ ಹಗರಣ ಸಂಬಂಧ ಬಂಧನಕ್ಕೆ ಒಳಗಾಗಿ ಜಾರಿ ನಿರ್ದೇಶನಾಲಯ (ಇ.ಡಿ.)ದ ವಿಚಾರಣೆ ಎದುರಿಸಿದ ವೇಳೆ ದೆಹಲಿಯ ಇಬ್ಬರು ಮಂತ್ರಿಗಳಾದ ಅತಿಷಿ ಹಾಗೂ ಸೌರಭ್‌ ಭಾರದ್ವಾಜ್‌ ಅವರ ಹೆಸರನ್ನು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಬಾಯಿಬಿಟ್ಟಿದ್ದಾರೆ ಎಂದು ಇ.ಡಿ. ಹೇಳಿಕೊಂಡಿದೆ.

ಅಬಕಾರಿ ಹಗರಣ ಸಂಬಂಧ ಬಂಧನಕ್ಕೆ ಒಳಗಾಗಿರುವ ಆಮ್‌ ಆದ್ಮಿ ಪಕ್ಷದ ಸಂವಹನ ವಿಭಾಗದ ಮಾಜಿ ಮುಖ್ಯಸ್ಥ ವಿಜಯ್‌ ನಾಯರ್‌ ನನಗೇನೂ ವರದಿ ಮಾಡಿಕೊಳ್ಳುತ್ತಿರಲಿಲ್ಲ. ಅತಿಷಿ ಹಾಗೂ ಸೌರಭ್‌ ಜತೆ ಮಾತನಾಡುತ್ತಿದ್ದ. ಆತನ ಜತೆ ನನ್ನ ಮಾತುಕತೆ ಸೀಮಿತವಾಗಿತ್ತು ಎಂದು ಕೇಜ್ರಿ ಹೇಳಿದ್ದಾರೆ ಎಂದು ಇ.ಡಿ. ತಿಳಿಸಿದೆ. ಇದರಿಂದಾಗಿ ಕೇಜ್ರಿವಾಲ್‌ ಬಂಧನ ಖಂಡಿಸಿ ನಿರಂತರವಾಗಿ ಹೋರಾಟ ನಡೆಸುತ್ತಿರುವ ಹಾಗೂ ದೆಹಲಿ ಸರ್ಕಾರವನ್ನು ಮುನ್ನಡೆಸುತ್ತಿರುವ ಈ ಇಬ್ಬರೂ ಮಂತ್ರಿಗಳಿಗೆ ಸಂಕಷ್ಟ ಎದುರಾದಂತಾಗಿದೆ.

ಈ ನಡುವೆ, ಅತಿಷಿ ಅವರನ್ನು ಈ ಬಗ್ಗೆ ಸುದ್ದಿಗಾರರು ಮಾತನಾಡಿಸಿದಾಗ, ಅವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಯಾರು ಈ ನಾಯರ್‌?:

ಜಾರಿ ನಿರ್ದೇಶನಾಲಯದ ಆರೋಪ ಪಟ್ಟಿಯ ಪ್ರಕಾರ, ವಿಜಯ್‌ ನಾಯರ್‌ ‘ಸೌತ್‌ ಗ್ರೂಪ್‌’ಗೆ ಮಧ್ಯವರ್ತಿಯಾಗಿ ಕೆಲಸ ಮಾಡಿದ್ದ. ದೆಹಲಿ ಅಬಕಾರಿ ಲೈಸೆನ್ಸ್‌ ಅನ್ನು ಬೇಕಾದವರಿಗೆ ಮಂಜೂರು ಮಾಡಿಸಲು 100 ಕೋಟಿ ರು. ಲಂಚವನ್ನು ಕೇಜ್ರಿವಾಲ್‌ ಸರ್ಕಾರಕ್ಕೆ ಕೊಡಿಸಿದ್ದ. ಪ್ರಕರಣದಲ್ಲಿ ಆರೋಪಿಯಾಗಿರುವ ಸಮೀರ್‌ ಮಹೇಂದ್ರು ಎಂಬಾತನಿಗೆ ಕೇಜ್ರಿವಾಲ್‌ ಅವರನ್ನು ಭೇಟಿಯಾಗಲು ನಾಯರ್ ಸಮಯ ನಿಗದಿ ಮಾಡಿಸಿದ್ದ. ಆದರೆ ಭೇಟಿ ಸಾಧ್ಯವಾಗದೆ, ವಿಡಿಯೋ ಕಾಲ್‌ ಮೂಲಕ ಮಾತುಕತೆ ನಡೆದಿತ್ತು. ಆ ವೇಳೆ, ‘ನಾಯರ್‌ ನಮ್ಮ ಹುಡುಗ, ಆತನನ್ನು ನಂಬಬಹುದು. ಅವರ ಜತೆ ವ್ಯವಹಾರ ಮುಂದುವರಿಸಿಕೊಂಡು ಹೋಗಬಹುದು’ ಎಂದು ಕೇಜ್ರಿವಾಲ್‌ ತಿಳಿಸಿದ್ದರು.

ನಾಯರ್‌ನನ್ನು ಹಗರಣ ಸಂಬಂಧ ಸಿಬಿಐ ಹಾಗೂ ಇ.ಡಿ. ಬಂಧಿಸಿದ್ದವು. ಸದ್ಯ ಆತ ಜೈಲಿನಲ್ಲಿ ಇದ್ದಾನೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ರಾಣಾಗೆ ಏಮ್ಸ್‌ನಲ್ಲಿ ದಯಾಮರಣ ಪ್ರಕ್ರಿಯೆ ಆರಂಭ
‘ಒನ್‌ ಬ್ಯಾಟಲ್‌ ಆಫ್ಟರ್‌ ಅನದರ್‌’ಗೆ ‘ಅತ್ಯುತ್ತಮ ಚಿತ್ರ’ ಆಸ್ಕರ್‌ ಗೌರವ