ಮರಾಠವಾಡದಲ್ಲಿ 1088ರೈತರ ಆತ್ಮಹತ್ಯೆ: ನಂ.1

KannadaprabhaNewsNetwork |  
Published : Jan 24, 2024, 02:02 AM ISTUpdated : Jan 24, 2024, 12:50 PM IST
ಆತ್ಮಹತ್ಯೆ | Kannada Prabha

ಸಾರಾಂಶ

ಮಹಾರಾಷ್ಟ್ರದಲ್ಲಿ ಸಾವಿನ ಸರಣಿ ಮುಂದುವರೆದಿದೆ. 2023ರಲ್ಲಿ ಮರಾಠವಾಡ ಪ್ರಾಂತ್ಯದಲ್ಲಿ ಬರೋಬ್ಬರಿ 1088 ರೈತರು ಆತ್ಮಹತ್ಯೆ ಮಾಡಿಕೊಂಡು ದೇಶದಲ್ಲಿ ಮೊದಲ ಸ್ಥಾನದಲ್ಲಿದೆ.

ಸಂಭಾಜಿನಗರ(ಮಹಾರಾಷ್ಟ್ರ): ಮಹಾರಾಷ್ಟ್ರದ ಮರಾಠವಾಡ ಪ್ರಾಂತ್ಯದಲ್ಲಿ ಬರುವ 8 ಜಿಲ್ಲೆಗಳಲ್ಲಿ 2023ರಲ್ಲಿ ಒಟ್ಟು 1,088 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಿಂದಿನ ವರ್ಷಕ್ಕೆ ಹೋಲಿಸಿದರೆ ಸಾವಿನ ಪ್ರಮಾಣದಲ್ಲಿ ಶೇ.65ರಷ್ಟು ಹೆಚ್ಚಳವಾಗಿದೆ ಎಂದು ವರದಿಯೊಂದು ತಿಳಿಸಿದೆ. ಮರಾಠವಾಡ ದೇಶದಲ್ಲೇ ಅತಿ ಹೆಚ್ಚು ರೈತರ ಆತ್ಮಹತ್ಯೆಗೆ ಸಾಕ್ಷಿಯಾಗುವ ಪ್ರದೇಶಗಳ ಪೈಕಿ ಒಂದು.

ವಿಭಾಗೀಯ ಆಯುಕ್ತರ ಕಚೇರಿ ಬಿಡುಗಡೆ ಮಾಡಿರುವ ವರದಿ ಅನ್ವಯ, 2023ರಲ್ಲಿ ಬೀಡ್‌ ಜಿಲ್ಲೆಯಲ್ಲಿ ಅತಿ ಹೆಚ್ಚು 269 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಉಳಿದಂತೆ ಸಂಭಾಜಿನಗರದಲ್ಲಿ 182, ನಾಂದೇಡ್‌ನಲ್ಲಿ 75, ಧರಾಶಿವದಲ್ಲಿ 171, ಪರ್ಭಾನಿಯಲ್ಲಿ 103, ಜಲ್ನಾದಲ್ಲಿ 74, ಲಾತೂರ್‌ನಲ್ಲಿ 72, ಮತ್ತು ಹಿಂಗೋಲಿಯಲ್ಲಿ 42 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಪೈಕಿ ಪರಿಹಾರಕ್ಕೆ ಅರ್ಹವಾಗಿದ್ದ 777 ರೈತರ ಕುಟುಂಬಕ್ಕೆ ತಲಾ 1 ಲಕ್ಷ ರು. ನೀಡಲಾಗಿದೆ. ಅಲ್ಲದೆ ಇನ್ನೂ 151 ಪ್ರಕರಣಗಳಲ್ಲಿ ಪರಿಹಾರದ ಅರ್ಹತೆಯ ಪರಿಶೀಲನೆ ನಡೆಸಲಾಗುತ್ತಿದೆ ಎಂದು ವರದಿ ಹೇಳಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಶಬರಿಮಲೆ ಚಿನ್ನಕನ್ನ: ಕಾಂತಾರ ನಟಗೆ ಇ.ಡಿ. ಸಮನ್ಸ್‌
ಐಎಎಸ್‌, ಐಎಫ್ಎಸ್‌ಗಳಿಗೆ ಯುಪಿಎಸ್ಸಿ 2ನೇ ಚಾನ್ಸ್‌ ಇಲ್ಲ- ಯುಪಿಎಸ್ಸಿ ನಿಯಮ ಬದಲು