14 ದಿನ ಹಡಗಿನಲ್ಲಿದ್ದ ಕ್ಷಿಪಣಿ ಸಿಡಿತಲೆ ಹೊರತೆಗೆದ ಸೇನೆ

KannadaprabhaNewsNetwork |  
Published : Jun 14, 2026, 03:15 AM IST
Army

ಸಾರಾಂಶ

ಮೇ 26ರಂದು ವಾಯುದಾಳಿಗೆ ತುತ್ತಾಗಿದ್ದ ನೌಕೆಯೊಂದರ ಇಂಧನ ಟ್ಯಾಂಕ್‌ನಲ್ಲಿ ಸ್ಫೋಟಿಸದೆ ಇದ್ದ ಕ್ಷಿಪಣಿಯ ಸಿಡಿತಲೆಯನ್ನು ಭಾರತೀಯ ನೌಕಾಪಡೆ ಯಶಸ್ವಿಯಾಗಿ ಹೊರತೆಗೆದಿದೆ. ನೌಕೆ 2 ಸಾವಿರ ಕಿ.ಮೀ. ಪ್ರಯಾಣಿಸಿ ಕೊಚ್ಚಿಯನ್ನು ತಲುಪಿತ್ತು.

ಕೊಚ್ಚಿ: ಮೇ 26ರಂದು ವಾಯುದಾಳಿಗೆ ತುತ್ತಾಗಿದ್ದ ನೌಕೆಯೊಂದರ ಇಂಧನ ಟ್ಯಾಂಕ್‌ನಲ್ಲಿ ಸ್ಫೋಟಿಸದೆ ಇದ್ದ ಕ್ಷಿಪಣಿಯ ಸಿಡಿತಲೆಯನ್ನು ಭಾರತೀಯ ನೌಕಾಪಡೆ ಯಶಸ್ವಿಯಾಗಿ ಹೊರತೆಗೆದಿದೆ.  

ಯುಎಇಯಿಂದ ತೈಲ ಹೊತ್ತು ಕೇರಳದ ಕೊಚ್ಚಿ ಕಡೆ ಹೊರಟಿದ್ದ ನೌಕೆ

ಯುಎಇಯಿಂದ ತೈಲ ಹೊತ್ತು ಕೇರಳದ ಕೊಚ್ಚಿ ಕಡೆ ಹೊರಟಿದ್ದ ಮಾರ್ಶಲ್‌ ದ್ವೀಪದ ಧ್ವಜವಿದ್ದ ಎಂಪಿ ಒಲಿಂಪಿಕ್‌ ಲೈಫ್‌ ಹಡಗಿನ ಮೇಲೆ ಒಮಾನ್‌ ಕರಾವಳಿಯಲ್ಲಿ ದಾಳಿಯಾಗಿತ್ತು. ಕ್ಷಿಪಣಿಯೊಂದು ಹಲವು ವಿಭಾಗಗಳನ್ನು ಭೇದಿಸಿ ಇಂಧನ ಸಂಗ್ರಹಿಸಿಟ್ಟಿದ್ದ ವಿಭಾಗವನ್ನು ಹೊಕ್ಕಿತ್ತು. ಇದರ ಹೊರತಾಗಿಯೂ ನೌಕೆ 2 ಸಾವಿರ ಕಿ.ಮೀ. ಪ್ರಯಾಣಿಸಿ ಕೊಚ್ಚಿಯನ್ನು ತಲುಪಿತ್ತು.

ವಿಶೇಷ ಸ್ಫೋಟಕ ವಿಲೇವಾರಿ ತಂಡ 

ಇಲ್ಲಿ ವಿಶೇಷ ಸ್ಫೋಟಕ ವಿಲೇವಾರಿ ತಂಡದ ಸಿಬ್ಬಂದಿ ಸಿಡಿತಲೆಯನ್ನು ಜತನದಿಂದ ಹೊರತೆಗೆದು ನಿಷ್ಕ್ರಿಯಗೊಳಿಸಿದ್ದಾರೆ. ಈ ಬಗ್ಗೆ ರಕ್ಷಣಾ ಸಚಿವಾಲಯ ಜೂ.11ರಂದು ಮಾಹಿತಿ ನೀಡಿದ್ದು, ‘ವಿಶೇಷ ಕಾಳಜಿಯಿಂದ ಯೋಜಿಸಿ ಕೈಗೊಳ್ಳಲಾದ ಅಪಾಯಕಾರಿ ಕಾರ್ಯಾಚರಣೆ’ ಎಂದು ಇದನ್ನು ಬಣ್ಣಿಸಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.
Read more Articles on

Recommended Stories

ಅಮೆರಿಕದಲ್ಲಿನ ಸ್ವಯಂ ಶ್ರೀಮಂತರಲ್ಲಿ ಜಯಶ್ರೀ: 64000 ಕೋಟಿ ರು.ಆಸ್ತಿ
ಪುರುಷ ಶವ ಬಗ್ಗೆ ಕೀಳು ಹೇಳಿಕೆ ನೀಡಿದ್ದ ವೈದ್ಯೆಗೆ ಕಡ್ಡಾಯ ರಜೆ