--
- ಗ್ಯಾಂಗ್ಸ್ಟಾರ್ ಲಾರೆನ್ಸ್ ಬಿಷ್ಣೋಯಿ ಹೆಸರಲ್ಲಿ ನಟ ಸಲ್ಮಾನ್ ಖಾನ್ಗೆ ಬೆದರಿಕೆ ಹಾಕಿದ್ದ ಮಾನ್ವಿಯ ಸುಹೇಲ್- ಇದೇ ರೀತಿ ಪ್ರತ್ಯೇಕವಾಗಿ ಬೆದರಿಕೆ ಹಾಕಿ ಕಳೆದ ವಾರವಷ್ಟೇ ಬಂಧನಕ್ಕೆ ಒಳಗಾಗಿದ್ದ ಹಾವೇರಿಯ ಭಿಕಾರಾಂ- ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ ರಾಜ್ಯದಿಂದಲೇ ಇಬ್ಬರ ಬಂಧನ
--ಮುಂಬೈ: ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯಿ ಹೆಸರಲ್ಲಿ ನಟ ಸಲ್ಮಾನ್ ಖಾನ್ರಿಂದ 5 ಕೋಟಿ ರು.ಗೆ ಬೇಡಿಕೆ ಇಟ್ಟು, ಜೀವ ಬೆದರಿಕೆ ಹಾಕಿದ ಪ್ರಕರಣ ಸಂಬಂಧ ರಾಯಚೂರು ಜಿಲ್ಲೆಯ ಮಾನ್ವಿಯ ಸುಹೇಲ್ ಪಾಷಾ (24) ಎಂಬಾತನನ್ನು ಮುಂಬೈ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.ಬಿಷ್ಣೋಯಿ ಹೆಸರಲ್ಲಿ ಸಲ್ಮಾನ್ ಖಾನ್ಗೆ ಬೆದರಿಕೆ ಹಾಕಿ ಕರ್ನಾಟಕದಲ್ಲಿ ಬಂಧನಕ್ಕೆ ಒಳಗಾದ 2ನೇ ವ್ಯಕ್ತಿ ಸುಹೇಲ್. ಸಲ್ಮಾನ್ ಖಾನ್ಗೆ ಪ್ರತ್ಯೇಕವಾಗಿ ಬೆದರಿಕೆ ಹಾಕಿದ್ದ ರಾಜಸ್ಥಾನ ಮೂಲದ ಭಿಕಾರಾಂ ಜಲಾರಾಂ ಎಂಬಾತನನ್ನು ಕಳೆದ ಮಂಗಳವಾರ ಹಾವೇರಿಯಲ್ಲಿ ಮುಂಬೈ ಪೊಲೀಸರು ಬಂಧಿಸಿದ್ದರು.
ಯುವ ಗೀತ ರಚನೆಕಾರನಾಗಿರುವ ಸುಹೇಲ್, ತನ್ನ ಹೊಸ ಹಾಡನ್ನು ಜನಪ್ರಿಯ ಮಾಡುವ ನಿಟ್ಟಿನಲ್ಲಿ ಇಂಥದ್ದೊಂದು ಬೆದರಿಕೆ ಹಾಕಿದ್ದ ಎಂಬ ವಿಷಯ ವಿಚಾರಣೆ ವೇಳೆ ಬೆಳಕಿಗೆ ಬಂದಿದೆ. ಅಲ್ಲದೆ ವೆಂಕಟ ನಾರಾಯಣ ಎಂಬ ಅಮಾಯಕ ವ್ಯಕ್ತಿಯ ಮೊಬೈಲ್ ಬಳಸಿ ಜಾಣತನ ಪ್ರದರ್ಶಿಸಲು ಹೋಗಿದ್ದ ಸುಹೇಲ್ ತಾನೇ ಸಂಕಟ ತಂದುಕೊಂಡಿದ್ದಾನೆ.ಸುಲಿಗೆ ಕರೆ:
ಈ ಬಗ್ಗೆ ಅವರನ್ನು ವಿಚಾರಿಸಿದಾಗ ಅಪರಿಚಿತನೊಬ್ಬ ಕರೆ ಮಾಡುವ ಉದ್ದೇಶದಿಂದ ತನ್ನ ಮೊಬೈಲ್ ಪಡೆದಿದ್ದ ಎಂದು ವೆಂಕಟ್ ತಿಳಿಸಿದ್ದರು. ಜೊತೆಗೆ ಮೊಬೈಲ್ ಪರಿಶೀಲನೆ ವೇಳೆ ಮೊಬೈಲ್ಗೆ ವಾಟ್ಸಾಪ್ ಇನ್ಸ್ಟಾಲ್ ಮಾಡಲು ಒಟಿಪಿ ಬಂದಿದ್ದ ವಿಷಯ ಪತ್ತೆಯಾಗಿತ್ತು.