ಹರ್ಯಾಣ ಬಿಜೆಪಿ ಸರ್ಕಾರ ಪತನದಂಚಿಗೆ

KannadaprabhaNewsNetwork |  
Published : May 08, 2024, 01:32 AM IST
ಸೈನಿ | Kannada Prabha

ಸಾರಾಂಶ

ಲೋಕಸಭಾ ಚುನಾವಣೆಯ ನಡುವೆ ಹರ್ಯಾಣದಲ್ಲಿ ಆಡಳಿತಾರೂಢ ಬಿಜೆಪಿಗೆ ಹಿನ್ನಡೆಯಾಗಿದ್ದು, ರಾಜ್ಯದಲ್ಲಿ ನಯಬ್ ಸಿಂಗ್ ಸೈನಿ ನೇತೃತ್ವದ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು 3 ಪಕ್ಷೇತರರು ಹಿಂಪಡೆದಿದ್ದಾರೆ. ಇದರಿಂದಾಗಿ ಸರ್ಕಾರ ಅಲ್ಪಮತಕ್ಕೆ ಕುಸಿದಿದ್ದು, ಪತನ ಭೀತಿ ಎದುರಿಸುತ್ತಿದೆ.

ಚಂಡೀಗಢ: ಲೋಕಸಭಾ ಚುನಾವಣೆಯ ನಡುವೆ ಹರ್ಯಾಣದಲ್ಲಿ ಆಡಳಿತಾರೂಢ ಬಿಜೆಪಿಗೆ ಹಿನ್ನಡೆಯಾಗಿದ್ದು, ರಾಜ್ಯದಲ್ಲಿ ನಯಬ್ ಸಿಂಗ್ ಸೈನಿ ನೇತೃತ್ವದ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು 3 ಪಕ್ಷೇತರರು ಹಿಂಪಡೆದಿದ್ದಾರೆ. ಇದರಿಂದಾಗಿ ಸರ್ಕಾರ ಅಲ್ಪಮತಕ್ಕೆ ಕುಸಿದಿದ್ದು, ಪತನ ಭೀತಿ ಎದುರಿಸುತ್ತಿದೆ.

ಸ್ವತಂತ್ರ ಶಾಸಕರಾದ ಸೋಂಬಿರ್ ಸಾಗ್ವಾನ್, ರಣಧೀರ್ ಗೊಲ್ಲೆನ್ ಮತ್ತು ಧರಂಪಾಲ್ ಗೊಂಡರ್ ಬೆಂಬಲ ಹಿಂಪಡೆದವರು. ಎಲ್ಲರೂ ಕಾಂಗ್ರೆಸ್‌ಗೆ ಬೆಂಬಲ ನೀಡಲು ನಿರ್ಧರಿಸಿದ್ದೇವೆ ಎಂದು ಹರ್ಯಾಣದ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಮತ್ತು ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಉದಯ್ ಭಾನ್ ಅವರ ಉಪಸ್ಥಿತಿಯಲ್ಲಿ ಘೋಷಿಸಿದ್ದಾರೆ.

ರೈತರಿಗೆ ಸಂಬಂಧಿಸಿದ ಸಮಸ್ಯೆಗಳು ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ನಾವು ಈ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ ಎಂದು ಅವರು ಹೇಳಿದ್ದಾರೆ.

ಆದರೆ ವಾಸ್ತವವಾಗಿ ಈ ಮೂವರಿಗೂ ನಯಬ್‌ ಸೈನಿ ಸಂಪುಟದಲ್ಲಿ ಸಚಿವ ಸ್ಥಾನ ಕೈತಪ್ಪಿತ್ತು. ಹೀಗಾಗಿ ಇವರು ಬಿಜೆಪಿಗೆ ನೀಡಿದ್ದ ಬೆಂಬಲ ಹಿಂಪಡೆದಿದ್ದಾರೆ ಎಂದು ಮೂಲಗಳು ಹೇಳಿವೆ. ಇದರ ಬೆನ್ನಲ್ಲೇ ರಾಜ್ಯದಲ್ಲಿ ಬಿಜೆಪಿ ಸರ್ಕಾರ ವಜಾ ಮಾಡಿ ರಾಷ್ಟ್ರಪತಿ ಆಳ್ವಿಕೆ ಜಾರಿಗೆ ಕಾಂಗ್ರೆಸ್ ಒತ್ತಾಯಿಸಿದೆ.

ಇತ್ತೀಚೆಗಷ್ಟೇ ಜೆಜೆಪಿ-ಬಿಜೆಪಿ ಮೈತ್ರಿ ಕುಸಿದುಬಿದ್ದಿತ್ತು. ಆಗ ಸಿಎಂ ಮನೋಹರಲಾಲ್‌ ಖಟ್ಟರ್ ರಾಜೀನಾಮೆ ನೀಡಿದ ಕಾರಣ ಸೈನಿ ಸಿಎಂ ಆಗಿದ್ದರು. ಆಗ 3 ಪಕ್ಷೇತರರು ಹಾಗೂ ಹರ್ಯಾಣ ಲೋಕಹಿತ ಪಾರ್ಟಿಯ ಒಬ್ಬ ಶಾಸಕನ ಬೆಂಬಲದ ಆಧಾರದಲ್ಲಿ ಬಿಜೆಪಿ ಅಧಿಕಾರದಲ್ಲಿ ಉಳಿದಿತ್ತು.

--ಹರ್ಯಾಣ ಬಲಾಬಲ90 ಸದಸ್ಯ ಬಲದ ಹರ್ಯಾಣ ವಿಧಾನಸಭೆಯಲ್ಲಿ ಪ್ರಸ್ತುತ 2 ಸ್ಥಾನ ಖಾಲಿ ಇದ್ದು, 88 ಶಾಸಕರಿದ್ದಾರೆ. ಇನ್ನು 2 ಕ್ಷೇತ್ರಕ್ಕೆ ಉಪಚುನಾವಣೆಗಳು ನಡೆಯುತ್ತಿವೆ. 88ರಲ್ಲಿ ಈವರೆಗೆ ಬಿಜೆಪಿ ಮೈತ್ರಿಕೂಟ 44 ಸ್ಥಾನ ಹೊಂದಿತ್ತು (ಬಿಜೆಪಿ 40, ಪಕ್ಷೇತರರು 3, ಹರ್ಯಾಣ ಲೋಕಹಿತ ಪಾರ್ಟಿ 1). ಇನ್ನು ವಿಪಕ್ಷಗಳಲ್ಲಿ ಕಾಂಗ್ರೆಸ್‌ 30, ಜೆಜೆಪಿ 10, 3 ಪಕ್ಷೇತರರು ಹಾಗೂ ಐಎನ್‌ಎಲ್‌ಡಿಯ ಒಬ್ಬರಿದ್ದರು. ಆದರೆ ಈಗ 3 ಪಕ್ಷೇತರರು ಬೆಂಬಲ ಹಿಂಪಡೆದಿರುವ ಕಾರಣ ಬಿಜೆಪಿ ಮೈತ್ರಿಕೂಟದ ಬಲ 41ಕ್ಕೆ ಇಳಿದಿದೆ. ಹೀಗಾಗಿ ಸರ್ಕಾರ ಪತನದ ಅಂಚಿಗೆ ಬಂದು ನಿಂತಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಕೇಂದ್ರ ಸಚಿವ ಚೌಹಾಣ್‌ ಐಎಸ್‌ಐ ಟಾರ್ಗೆಟ್‌: ಭದ್ರತೆ ಹೆಚ್ಚಳ
ಆನಂದದ ಕ್ಷಣ ದುರಂತದ ಕ್ಷಣವಾಗಿ ಬದಲು!