ಹೈವೋಲ್ಟೇಜ್‌ ತಂತಿ ತಗುಲಿ ಬಸ್‌ಗೆ ಬೆಂಕಿ: 5 ಮಂದಿ ಸಾವು

KannadaprabhaNewsNetwork |  
Published : Mar 12, 2024, 02:04 AM IST
ಬಸ್‌ | Kannada Prabha

ಸಾರಾಂಶ

ಬಸ್ಸಿಗೆ ಓವರ್‌ಹೆಡ್‌ ಹೈವೋಲ್ಟೇಜ್‌ ತಂತಿ ತಗುಲಿ ಬೆಂಕಿ ಹೊತ್ತಿಕೊಂಡಿದ್ದು, ಐದು ಮಂದಿ ಸಜೀವ ದಹನಗೊಂಡ ಘಟನೆ ಉತ್ತರಪ್ರದೇಶದ ಗಾಜಿಪುರದಲ್ಲಿ ನಡೆದಿದೆ.

ಗಾಜಿಪುರ: ಬಸ್ಸಿಗೆ ಓವರ್‌ಹೆಡ್‌ ಹೈವೋಲ್ಟೇಜ್‌ ತಂತಿ ತಗುಲಿ ಬೆಂಕಿ ಹೊತ್ತಿಕೊಂಡಿದ್ದು, ಐದು ಮಂದಿ ಸಜೀವ ದಹನಗೊಂಡ ಘಟನೆ ಉತ್ತರಪ್ರದೇಶದ ಗಾಜಿಪುರದಲ್ಲಿ ನಡೆದಿದೆ.

ಈ ದುರ್ಘಟನೆಯಲ್ಲಿ 11 ಮಂದಿ ಗಾಯಗೊಂಡಿದ್ದಾರೆ. ಕುಟುಂಬವೊಂದು ಮುದುವೆ ಕಾರ್ಯಕ್ರಮಗಳನ್ನು ಮುಗಿಸಿ ದೇಗುಲಕ್ಕೆ ತೆರಳುವಾಗ ಈ ಘಟನೆ ಸಂಭವಿಸಿದೆ.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಜೀವಹಾನಿಗೆ ಸಂತಾಪ ಸೂಚಿಸಿ, ಗಾಯಾಳುಗಳಿಗೆ ಉಚಿತ ಚಿಕಿತ್ಸೆ ನೀಡುವಂತೆ ಸೂಚಿಸಿದ್ದಾರೆ. ಮೃತ ಕುಟುಂಬಕ್ಕೆ ತಲಾ 5 ಲಕ್ಷ ರು. ಹಾಗೂ ಗಂಭೀರವಾಗಿ ಗಾಯಗೊಂಡವರಿಗೆ 50 ಸಾವಿರ ರು. ಆರ್ಥಿಕ ನೆರವು ನೀಡಲಾಗುವುದು ಎಂದು ತಮ್ಮ ಟ್ವೀಟರ್‌ ಖಾತೆಯಲ್ಲಿ ಫೋಸ್ಟ್‌ ಮಾಡಿದ್ದಾರೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಕನ್ನಡತಿ ಕೃತಿ ಕಾರಂತ್‌ಗೆ ಜಾಗತಿಕ ಪ್ರಶಸ್ತಿ
ಎಲ್‌ಎನ್‌ಜಿ ಕೊರತೆಯಿಂದ ಕೈಗಾರಿಕೆಗೆ ಶಾಕ್‌