ನವದೆಹಲಿ: ಮಂಗಳವಾರ ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಖ್ಯಾತ ನಟರಾದ ಮುಮ್ಮಟಿ, ಮಾಧವನ್ ಸೇರಿದಂತೆ 65 ಸಾಧಕರಿಗೆ ಎರಡನೇ ಹಂತದಲ್ಲಿ ಪದ್ಮ ಪ್ರಶಸ್ತಿ ನೀಡಿ ಗೌರವಿಸಿದರು.
ಮಲಯಾಳಂನ ಖ್ಯಾತ ನಟ ಮುಮ್ಮುಟಿ, ಖ್ಯಾತ ಹಿನ್ನೆಲೆ ಗಾಯಕಿ ಅಲ್ಕಾ ಯಾಗ್ನಿಕ್, ಮಾಧವನ್, ಸುಪ್ರೀಂ ಮಾಜಿ ನ್ಯಾಯಮೂರ್ತಿ ಕೆ.ಟಿ.ಥಾಮಸ್, ಜೆಎಂಎಂ ಸಂಸ್ಥಾಪಕ ಶಿಬು ಸೊರೆನ್ ( ಮರಣೋತ್ತರ)ಪ್ರಶಸ್ತಿ ನೀಡಲಾಯಿತು.
ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್, ಕೇಂದ್ರ ಸಚಿವ ಅಮಿತ್ ಶಾ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.