ಸೊಲ್ಲಾಪುರದ ಜವಳಿ ಕಾರ್ಖಾನೆಯಲ್ಲಿ ಬೆಂಕಿ ದುರಂತಕ್ಕೆ 8 ಬಲಿ

Published : May 19, 2025, 04:58 AM IST
Gulzar House hyderabad fire

ಸಾರಾಂಶ

ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ಜವಳಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಇದರಿಂದಾಗಿ ಒಂದುವರೆ ವರ್ಷದ ಮಗು ಸೇರಿ 8 ಜನರು ದುರ್ಮರಣ ಹೊಂದಿದ್ದಾರೆ.

ಮುಂಬೈ: ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ಜವಳಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಇದರಿಂದಾಗಿ ಒಂದುವರೆ ವರ್ಷದ ಮಗು ಸೇರಿ 8 ಜನರು ದುರ್ಮರಣ ಹೊಂದಿದ್ದಾರೆ. 

ಭಾನುವಾರ ಮಧ್ಯಾಹ್ನ ಸೊಲ್ಲಾಪುರದ ಅಕ್ಕಲಕೋಟೆ ರಸ್ತೆ ಬಳಿ ಮಹಾರಾಷ್ಟ್ರ ಕೈಗಾರಿಕಾ ಅಭಿವೃದ್ಧಿ ಪ್ರದೇಶದಲ್ಲಿದ್ದ ಕೇಂದ್ರ ಜವಳಿ ಮಿಲ್‌ನಲ್ಲಿ ದುರಂತ ಸಂಭವಿಸಿದೆ. 

ಮೇಲ್ನೋಟಕ್ಕೆ ಶಾರ್ಟ್‌ ಸರ್ಕಿಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ವೇಳೆ ಕಾರ್ಖಾನೆಯ ಮಾಲೀಕ ಹಾಜಿ ಉಸ್ಮಾನ್‌, ಅವರ ಒಂದೂವರೆ ವರ್ಷದ ಮೊಮ್ಮಗ ಮತ್ತು ಕಾರ್ಮಿಕರು ಘಟನೆಯಲ್ಲಿ ಮೃತಪಟ್ಟಿದ್ದಾರೆ. ತನಿಖೆ ಶುರುವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.
Read more Articles on

Recommended Stories

ಹಿಂಸಾತ್ಮಕ ಜಿರಳೆಗಳ ಕೇಸ್‌ ಮುಂದುವರಿಸಿ : ಸುಪ್ರೀಂ
ರಾಷ್ಟ್ರಾಧ್ಯಕ್ಷರ ಸ್ವಕ್ಷೇತ್ರದಲ್ಲೇ ಬಿಜೆಪಿ ಅಭ್ಯರ್ಥಿಗೆ ಸೋಲು!