ಪಹಲ್ಗಾಂ ದಾಳಿಗೆ 1 ತಿಂಗಳು; ಇನ್ನೂ ಹಂತಕರ ಪತ್ತೆಯಿಲ್ಲ

KannadaprabhaNewsNetwork |  
Published : May 22, 2025, 11:50 PM ISTUpdated : May 23, 2025, 05:50 AM IST
ಪಹಲ್ಗಾಂ  | Kannada Prabha

ಸಾರಾಂಶ

ಪಹಲ್ಗಾಂ ಉಗ್ರ ದಾಳಿಗೆ 26 ಅಮಾಯಕ ನಾಗರಿಕರು ಬಲಿಯಾಗಿ ಮೇ 22ಕ್ಕೆ ಒಂದು ತಿಂಗಳು ಕಳೆದಿದೆ. ಉಗ್ರರ ಪತ್ತೆಗೆ ಭದ್ರತಾ ಪಡೆಗಳು ಕಾಶ್ಮೀರ ಕಣಿವೆಯಾದ್ಯಂತ ಕಾರ್ಯಾಚರಣೆ ನಡೆಸುತ್ತಿವೆ. ಆದರೆ ನಾಗರಿಕರನ್ನು ಕೊಂದ ಉಗ್ರರು ಇನ್ನೂ ತಲೆಮರೆಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 ಪಹಲ್ಗಾಂ: ಪಹಲ್ಗಾಂ ಉಗ್ರ ದಾಳಿಗೆ 26 ಅಮಾಯಕ ನಾಗರಿಕರು ಬಲಿಯಾಗಿ ಮೇ 22ಕ್ಕೆ ಒಂದು ತಿಂಗಳು ಕಳೆದಿದೆ. ಉಗ್ರರ ಪತ್ತೆಗೆ ಭದ್ರತಾ ಪಡೆಗಳು ಕಾಶ್ಮೀರ ಕಣಿವೆಯಾದ್ಯಂತ ಕಾರ್ಯಾಚರಣೆ ನಡೆಸುತ್ತಿವೆ. ಆದರೆ ನಾಗರಿಕರನ್ನು ಕೊಂದ ಉಗ್ರರು ಇನ್ನೂ ತಲೆಮರೆಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಕರಣದ ತನಿಖೆಯನ್ನು ವಹಿಸಿಕೊಂಡಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ), ನರಮೇಧದಲ್ಲಿ ನೇರವಾಗಿ ಅಥವಾ ಪರೋಕ್ಷವಾಗಿ ಭಾಗಿಯಾದ 100ಕ್ಕೂ ಹೆಚ್ಚು ಶಂಕಿತರನ್ನು ಪ್ರಶ್ನಿಸಿದೆ.

ಘಟನೆ ನಡೆದ ಬೈಸರನ್ ಹುಲ್ಲುಗಾವಲಿನ ಆಹಾರ ಮಳಿಗೆ ಮಾಲೀಕರು, ಜಿಪ್‌ಲೈನ್ ನಿರ್ವಾಹಕರು, ಕುದುರೆ ಸವಾರರು ಸೇರಿದಂತೆ ವಿವಿಧ ಸೇವೆಗಳನ್ನು ಒದಗಿಸುತ್ತಿದ್ದವರನ್ನು ಪರಿಶೀಲಿಸಲಾಗಿದೆ.ದಾಳೆ ನಡೆಸಿದ ಉಗ್ರರ ರೇಖಾಚಿತ್ರ ಬಿಡುಗಡೆ ಮಾಡಿ, ಅವರ ಮಾಹಿತಿ ನೀಡಿದವರಿಗೆ 20 ಲಕ್ಷ ರು. ಬಹುಮಾನ ಘೋಷಿಸಲಾಗಿದೆ. ಪಹಲ್ಗಾಂ ಸುತ್ತಮುತ್ತಲಿನ ಮೊಬೈಲ್ ಡೇಟಾ, ದಾಳಿ ವೇಳೆ ಪ್ರವಾಸಿಗರು ಸೆರೆಹಿಡಿದ ವಿಡಿಯೋಗಳನ್ನು ತನಿಖಾಧಿಕಾರಿಗಳು ವಿಶ್ಲೇಷಿಸಿದ್ದಾರೆ.

 ಸುಮಾರು 100 ಜನರ ಮೇಲೆ ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ವಿವಿಧ ಜೈಲುಗಳಿಗೆ ಕಳುಹಿಸಲಾಗಿದೆ. ಈಗಾಗಲೇ ಶಿಕ್ಷೆ ಅನುಭವಿಸಿದ ಉಗ್ರಗಾಮಿಗಳನ್ನು ಸಹ ಭದ್ರತಾ ಪಡೆಗಳು ವಶಕ್ಕೆ ಪಡೆದಿವೆ. ಆದರೂ ಯಾವುದೇ ಪ್ರಯತ್ನ ಫಲ ನೀಡಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಹಂತಕರು ಇಲ್ಲಿಯವರೆಗೆ ಭದ್ರತಾ ಪಡೆಗಳಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ನಾವು ಅವರನ್ನು ಹಿಡಿಯಲು ಹೆಚ್ಚು ಸಮಯ ತೆಗೆದುಕೊಳ್ಳುವುದಿಲ್ಲ ಎಂದು ಅಧಿಕಾರಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.
Read more Articles on

Recommended Stories

ಸಿದ್ದು ಆಪ್ತ 20 ಶಾಸಕರಿಗೆಜಾರಕಿಹೊಳಿ ಔತಣಕೂಟ : ಬೆಳಗಾವೀಲೂ ಗರಿಗೆದರಿದ ಬಣ ರಾಜಕೀಯ
ದಿಲ್ಲಿಯಲ್ಲಿ ಜ.1ರಿಂದ ಕೇಂದ್ರದ ಭಾರತ್‌ ಟ್ಯಾಕ್ಸಿ ಸಂಚಾರ