ಕುಡಿದ ಮತ್ತಿನಲ್ಲಿ ಹೆಬ್ಬಾವನ್ನು ಕೊರಳಿಗೆ ಸುತ್ತಿಕೊಂಡ ಭೂಪ!

KannadaprabhaNewsNetwork |  
Published : May 21, 2024, 01:51 AM ISTUpdated : May 21, 2024, 05:19 AM IST
ಹೆಬ್ಬಾವು ಸುತ್ತಿಕೊಂಡ ವ್ಯಕ್ತಿ | Kannada Prabha

ಸಾರಾಂಶ

ಕುಡಿದ ಮತ್ತಿನಲ್ಲಿ ಹೆಬ್ಬಾವನ್ನು ಕೊರಳಿಗೆ ಸುತ್ತಿಕೊಂಡ ಭೂಪನ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ ಘಟನೆ ಕೇರಳದ ಪಟ್ಟಣಂತಿಟ್ಟದಲ್ಲಿ ನಡೆದಿದೆ.

ಪಟ್ಟಣಂತಿಟ್ಟ (ಕೇರಳ): ವ್ಯಕ್ತಿಯೊಬ್ಬನು ಕುಡಿದ ಅಮಲಿನಲ್ಲಿ ಇಲ್ಲಿನ ರಸ್ತೆ ಬದಿಯ ಕಾಲುವೆಯಲ್ಲಿ ಸಾಗುತ್ತಿದ್ದ ಹೆಬ್ಬಾವನ್ನು ಹಿಡಿದು ಕೊರಳಿಗೆ ಸುತ್ತಿಕೊಂಡಿದ್ದಾನೆ.

ಈತನ ವಿರುದ್ಧ ಅರಣ್ಯಾಧಿಕಾರಿಗಳು ಸೋಮವಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕುಡಿತದ ಅಮಲಿನಲ್ಲಿ ವ್ಯಕ್ತಿಯೊಬ್ಬನು ಭಾನುವಾರ ಆಡೂರು ಬಳಿಯ ಬಾರ್‌ ಮುಂದೆ ಮಳೆ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಹೆಬ್ಬಾವನ್ನು ಹಿಡಿದು ತನ್ನ ಕೊರಳಿ ಹಾಕಿಕೊಂಡಿದ್ದಾನೆ.

ಇದರಿಂದ ಸ್ಥಳೀಯರು ಭಯಭೀತರಾಗಿ ಪೊಲೀಸರಿಗೆ ತಿಳಿಸಿದ್ದಾರೆ.

ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿ ಪೊಲೀಸರು ಆತನನ್ನು ವಶಕ್ಕೆ ಪಡೆದು, ಹೆಬ್ಬಾವನ್ನು ರಕ್ಷಿಸಿ ಕೊನ್ನಿಯ ಪ್ರಾಣಿ ರಕ್ಷಣಾ ಕೇಂದ್ರಕ್ಕೆ ಸ್ಥಳಾಂತರಿಸಿದ್ದಾರೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ನಾನು ಸ್ಮಾರ್ಟ್‌ಫೋನ್‌, ಇಂಟರ್ನೆಟ್‌ ಬಳಸಲ್ಲ: ದೋವಲ್‌
ಅಮೆರಿಕ ನಿಗೂಢ ಅಸ್ತ್ರದಿಂದ ವೆನಿಜುವೆಲನ್ನರಿಗೆ ರಕ್ತ ವಾಂತಿ!