ಹಿಂದು, ಸಿಖ್‌ ಅರ್ಚಕರಿಗೆ 18 ಸಾವಿರ ರು. ವೇತನ : ಆಪ್‌ ನೇತಾರ ಅರವಿಂದ್‌ ಕೇಜ್ರಿವಾಲ್ ಘೋಷಣೆ

KannadaprabhaNewsNetwork |  
Published : Dec 31, 2024, 01:00 AM ISTUpdated : Dec 31, 2024, 04:30 AM IST
ಕೇಜ್ರಿವಾಲ್‌ | Kannada Prabha

ಸಾರಾಂಶ

ಮುಂದಿನ ವರ್ಷದ ದೆಹಲಿಯಲ್ಲಿ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಆಪ್‌ ನೇತಾರ ಅರವಿಂದ್‌ ಕೇಜ್ರಿವಾಲ್ ಮತ್ತೊಂದು ಭರ್ಜರಿ ಕೊಡುಗೆ ಪ್ರಕಟಿಸಿದ್ದು, ಆಪ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದರೆ ಹಿಂದೂ ಹಾಗೂ ಸಿಖ್‌ ಅರ್ಚಕರಿಗೆ ಮಾಸಿಕ 18 ಸಾವಿರ ರು. ಸಹಾಯಧನ ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ.

  ನವದೆಹಲಿ : ಮುಂದಿನ ವರ್ಷದ ದೆಹಲಿಯಲ್ಲಿ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಆಪ್‌ ನೇತಾರ ಅರವಿಂದ್‌ ಕೇಜ್ರಿವಾಲ್ ಮತ್ತೊಂದು ಭರ್ಜರಿ ಕೊಡುಗೆ ಪ್ರಕಟಿಸಿದ್ದು, ಆಪ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದರೆ ಹಿಂದೂ ಹಾಗೂ ಸಿಖ್‌ ಅರ್ಚಕರಿಗೆ ಮಾಸಿಕ 18 ಸಾವಿರ ರು. ಸಹಾಯಧನ ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ.

ಸೋಮವಾರ ಮಾತನಾಡಿದ ಕೇಜ್ರಿವಾಲ್, ಒಂದು ವೇಳೆ ಆಪ್‌ ಮರು ಆಯ್ಕೆಯಾದರೆ ‘ಪೂಜಾರಿ ಗ್ರಂಥಿ ಸಮ್ಮಾನ್‌ ಯೋಜನೆ’ ಜಾರಿಗೆ ತರಲಿದ್ದೇವೆ. ಅರ್ಚಕರು ಮತ್ತು ಗ್ರಂಥಿಗಳು (ಸಿಖ್‌ ಅರ್ಚಕರು) ನಮ್ಮ ಸಮಾಜದ ಮುಖ್ಯ ಭಾಗ. ಆದರೆ ಅವರು ಸಾಮಾನ್ಯವಾಗಿ ನಿರ್ಲಕ್ಷಿಸಲ್ಪಟ್ಟ ವರ್ಗವಾಗಿದ್ದಾರೆ. ದೇಶದಲ್ಲಿ ಮೊದಲ ಬಾರಿಗೆ ನಾವು ಅವರನ್ನು ಬೆಂಬಲಿಸುವ ಯೋಜನೆ ಪರಿಚಯಿಸುತ್ತಿದ್ದೇವೆ. ಅದರ ಅಡಿಯಲ್ಲಿ ಮಾಸಿಕ 18 ಸಾವಿರ ರು.ಗಳನ್ನು ಅವರು ಪಡೆಯಲಿದ್ದಾರೆ. ಮಂಗಳವಾರದಿಂದಲೇ ನೋಂದಣಿ ಆರಂಭವಾಗಲಿದೆ’ ಎಂದರು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಮನೆಮನೆಗೆ ಆಯುರ್ವೇದ ಅಗತ್ಯ : ಸಚ್ಚಿದಾನಂದ ಶ್ರೀ
ಆಪರೇಷನ್‌ ಸಿಂದೂರ ವೇಳೆ ಸೈನಿಕರಿಗೆ ಚಹಾ ಕೊಟ್ಟಿದ್ದ ಬಾಲಕಗೆ ಬಾಲ ಪುರಸ್ಕಾರ