ಮಮತಾ ರೇಟ್‌ ಎಷ್ಟು ಎಂದಿದ್ದ ಅಭಿಜಿತ್‌ಗೆ ಆಯೋಗ ಚಾಟಿ

KannadaprabhaNewsNetwork |  
Published : May 22, 2024, 12:46 AM IST
ಅಭಿಜಿತ್‌-ಮಮತಾ | Kannada Prabha

ಸಾರಾಂಶ

24 ಗಂಟೆ ಚುನಾವಣಾ ಪ್ರಚಾರಕ್ಕೆ ನಿಷೇಧ ಹೇರಿ ಇನ್ನು ಮುಂದೆ ಕೀಳುಮಟ್ಟದ ರಾಜಕೀಯ ಮಾಡುವುದನ್ನು ಬಿಡುವಂತೆ ಚುನಾವಣಾ ಆಯೋಗ ಬಿಜೆಪಿ ತಮ್ಲುಕ್‌ ಅಭ್ಯರ್ಥಿ ಅಭಿಜಿತ್‌ ಗಂಗೂಲಿಗೆ ಕಿಡಿಕಾರಿದೆ.

ಕೋಲ್ಕತಾ: ‘ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎಷ್ಟು ಹಣಕ್ಕೆ ತಮ್ಮನ್ನು ಮಾರಿಕೊಂಡಿದ್ದಾರೆ. ಅವರ ಏಟ್‌ 10 ಲಕ್ಷ ರುಪಾಯಿಯೇ?’ ಎಂದು ಪ್ರಶ್ನಿಸಿದ್ದ ಬಿಜೆಪಿ ಲೋಕಸಭಾ ಅಭ್ಯರ್ಥಿಯೂ ಆಗಿರುವ ಮಾಜಿ ನ್ಯಾಯಮೂರ್ತಿ ಅಭಿಜಿತ್‌ ಗಂಗೂಲಿಗೆ ಚುನಾವಣಾ ಆಯೋಗವು 24 ಗಂಟೆಗಳ ಕಾಲ ಚುನಾವಣಾ ಪ್ರಚಾರಕ್ಕೆ ನಿಷೇಧ ಹೇರಿದೆ.

ಅಭಿಜಿತ್‌ ಅವರ ಹೇಳಿಕೆ ಕೀಳು ಮಟ್ಟದ ರಾಜಕೀಯ ಎಂಬುದಾಗಿ ಬಣ್ಣಿಸಿರುವ ಚುನಾವಣಾ ಆಯೋಗ, ಮಂಗಳವಾರ ಸಂಜೆ 5 ಗಂಟೆಯಿಂದ 24 ಗಂಟೆಗಳ ಕಾಲ ಚುನಾವಣಾ ಪ್ರಚಾರ ನಡೆಸದಂತೆ ಆದೇಶಿಸಿದೆ. ಜೊತೆಗೆ ಇನ್ನು ಮುಂದೆ ಈ ರೀತಿಯ ವಿಚ್ಛಿದ್ರಕಾರಿ ಹೇಳಿಕೆಗಳನ್ನು ನೀಡದಂತೆ ಎಚ್ಚರಿಕೆ ನೀಡಿದೆ.

ಅಭಿಜಿತ್‌ ಗಂಗೂಲಿ ತಮ್ಲುಕ್‌ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದು, ಟಿಎಂಸಿ ಸತತವಾಗಿ ಅವರ ಮೇಲೆ ಸವಾಲು ಎಸೆದ ಹಿನ್ನೆಲೆಯಲ್ಲಿ ತಮ್ಮ ಸರ್ಕಾರಿ ಹುದ್ದೆಗೆ ರಾಜೀನಾಮೆ ನೀಡಿ ರಾಜಕೀಯ ಪ್ರವೇಶಿಸಿದ್ದರು.

24 ಗಂಟೆ ಚುನಾವಣಾ ಪ್ರಚಾರಕ್ಕೆ ನಿಷೇಧ ಹೇರಿ ಇನ್ನು ಮುಂದೆ ಕೀಳುಮಟ್ಟದ ರಾಜಕೀಯ ಮಾಡುವುದನ್ನು ಬಿಡುವಂತೆ ಚುನಾವಣಾ ಆಯೋಗ ಬಿಜೆಪಿ ತಮ್ಲುಕ್‌ ಅಭ್ಯರ್ಥಿ ಅಭಿಜಿತ್‌ ಗಂಗೂಲಿಗೆ ಕಿಡಿಕಾರಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಸ್ವಾತಂತ್ರ್ಯ ಬಳಿಕ ಮೊದಲ ಬಾರಿಪಾಕ್‌ ವಿವಿಯಲ್ಲಿ ಸಂಸ್ಕೃತ ಕಲಿಕೆ!
ಅಂಡಮಾನ್‌ ದ್ವೀಪದಲ್ಲಿ ಸಾವರ್ಕರ್ ಪ್ರತಿಮೆ ಅನಾವರಣ