ವಯನಾಡ್‌ ಸಂತ್ರಸ್ತರಿಗೆ 3 ಕೋಟಿ : ಪ್ರಾದೇಶಿಕ ಸೇನೆಯ ಲೆಫ್ಟಿನೆಂಟ್‌ ಕರ್ನಲ್ ಮೋಹನ್‌ಲಾಲ್‌ ಘೋಷಣೆ

KannadaprabhaNewsNetwork |  
Published : Aug 04, 2024, 01:16 AM ISTUpdated : Aug 04, 2024, 05:03 AM IST
ಮೋಹನ್ ಲಾಲ್‌ | Kannada Prabha

ಸಾರಾಂಶ

ಭಾರತೀಯ ಪ್ರಾದೇಶಿಕ ಸೇನೆಯ ಲೆಫ್ಟಿನೆಂಟ್‌ ಕರ್ನಲ್ ಆಗಿರುವ ನಟ ಮೋಹನ್‌ ಲಾಲ್ ಭೂಕುಸಿತದಿಂದ ನಲುಗಿರುವ ವಯನಾಡಿಗೆ ಸೇನಾ ಸಮವಸ್ತ್ರದಲ್ಲಿ ಭೇಟಿ ನೀಡಿದ್ದಾರೆ,

ವಯನಾಡು: ಭಾರತೀಯ ಪ್ರಾದೇಶಿಕ ಸೇನೆಯ ಲೆಫ್ಟಿನೆಂಟ್‌ ಕರ್ನಲ್ ಆಗಿರುವ ನಟ ಮೋಹನ್‌ ಲಾಲ್ ಭೂಕುಸಿತದಿಂದ ನಲುಗಿರುವ ವಯನಾಡಿಗೆ ಸೇನಾ ಸಮವಸ್ತ್ರದಲ್ಲಿ ಭೇಟಿ ನೀಡಿದ್ದಾರೆ, ಈ ವೇಳೆಯಲ್ಲಿ ರಕ್ಷಣಾ ಕಾರ್ಯದ ಬಗ್ಗೆ ಅಧಿಕಾರಿಗಳ ಜೊತೆಗೆ ಚರ್ಚಿಸಿದ ನಟ, ವಿಪತ್ತು ಪೀಡಿತ ಪ್ರದೇಶದ ದುರಸ್ತಿ ಕಾರ್ಯಕ್ಕೆ 3 ಕೋಟಿ ರು. ಪರಿಹಾರ ಘೋಷಿಸಿದ್ದಾರೆ.

 ಮೆಪ್ಪಾಡಿಯಲ್ಲಿರುವ ಸೇನಾ ಶಿಬಿರಕ್ಕೆ ಭೇಟಿ ನೀಡಿದ ಮೋಹನ್ ಲಾಲ್‌ ರಕ್ಷಣಾ ಕಾರ್ಯಾಚರಣೆಯ ಕುರಿತು ಅಧಿಕಾರಿಗಳ ಜೊತೆಗೆ ಕೆಲ ಕಾಲ ಚರ್ಚಿಸಿದರು. ಬಳಿಕ ಚೂರಲ್‌ಮಲ, ಮುಂಡಕ್ಕೈ, ಪುಂಚಿರಿಮಟ್ಟಂ ಸೇರಿದಂತೆ ಭೂಕುಸಿತ ಸಂಭವಿಸಿದ ಪ್ರದೇಶಗಳಿಗೆ ಭೇಟಿ ನೀಡಿದರು. ಈ ವೇಳೆಯಲ್ಲಿ ರಕ್ಷಣಾ ಪಡೆಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತ ಪಡಿಸಿದರು. ಮೋಹನ್ ಲಾಲ್ ಚಿತ್ರರಂಗಕ್ಕೆ ಸಲ್ಲಿಸಿದ ಸೇವೆ ಗುರುತಿಸಿ, ಸರ್ಕಾರ 2009ರಲ್ಲಿ ಸೇನೆಯ ಲೆಫ್ಟಿನೆಂಟ್‌ ಕರ್ನಲ್ ಆಗಿ ನೇಮಿಸಿತ್ತು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಅಮೆರಿಕ ಆರ್ಥಿಕತೆಗೆ ಏಟು ನೀಡಲು ದುಬೈಗೆ ಇರಾನ್‌ ಭಾರಿ ದಾಳಿ
ಭಾರತಕ್ಕೆ ಬೇಕಿದ್ದ ಪಾಕ್‌ ಉಗ್ರ ಅನಾಮಿಕ ವ್ಯಕ್ತಿ ಗುಂಡಿಗೆ ಬಲಿ