ರಾಹುಲ್‌ ಭಾರತ್‌ ಜೋಡೋ ನ್ಯಾಯ ಯಾತ್ರೆ ವೇಳೆ ಕಾರಿಗೆ ಕಲ್ಲೆಸೆತ

KannadaprabhaNewsNetwork |  
Published : Feb 01, 2024, 02:00 AM ISTUpdated : Feb 01, 2024, 11:30 AM IST
ಕಲ್ಲೆಸೆತ | Kannada Prabha

ಸಾರಾಂಶ

ರಾಹುಲ್‌ ಕಾರಿನ ಮೇಲೆ ಬಂಗಾಳದಲ್ಲಿ ಕಲ್ಲು ತೂರಾಟ ನಡೆದಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಆದರೆ ಘಟನೆ ನಡೆದಿದ್ದು ಬಂಗಾಳದಲ್ಲಲ್ಲ, ಬಿಹಾರದಲ್ಲಿ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

ಮಾಲ್ಡಾ (ಪ.ಬಂಗಾಳ): ಭಾರತ್‌ ಜೋಡೋ ನ್ಯಾಯ ಯಾತ್ರೆ ವೇಳೆ, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಪ್ರಯಾಣಿಸುತ್ತಿದ್ದ ವಾಹನದ ಮೇಲೆ ಕೆಲ ಅಪರಿಚಿತ ವ್ಯಕ್ತಿಗಳು ಕಲ್ಲು ತೂರಾಟ ನಡೆಸಿರುವ ಘಟನೆ ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ನಡೆದಿದೆ ಎಂದು ಬಂಗಾಳದ ಕಾಂಗ್ರೆಸ್‌ ಅಧ್ಯಕ್ಷ ಅಧೀರ್‌ ರಂಜನ್‌ ಚೌಧರಿ ಆರೋಪಿಸಿದ್ದಾರೆ.

ಯಾತ್ರೆಯು ಬಿಹಾರದಿಂದ ಬಂಗಾಳಕ್ಕೆ ಪ್ರವೇಶಿಸುತ್ತಿದ್ದ ವೇಳೆ ಘಟನೆ ನಡೆದಿದ್ದು, ವಾಹನದ ಹಿಂಬದಿ ಕಿಟಕಿ ಗಾಜು ಜಖಂಗೊಂಡಿದೆ. ಈ ವೇಳೆ ರಾಹುಲ್‌ ಅವರಿಗೆ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ಅವರು ತಿಳಿಸಿದ್ದಾರೆ. 

ಆದರೆ ಕೆಲ ಕಾಂಗ್ರೆಸ್‌ ಕಾರ್ಯಕರ್ತರು ಯಾತ್ರೆಯ ವೇಳೆ ಉತ್ಸಾಹದಿಂದ ಕಾರಿನ ಮೇಲೆ ಜೋರಾಗಿ ಹತ್ತಿ ಸಂಭ್ರಮಿಸಲು ಯತ್ನಿಸಿದ ವೇಳೆ ಕಾರಿಗೆ ಬ್ರೇಕ್‌ ಹಾಕಲಾಯಿತು. 

ಆಗ ಕಾರಿನ ಗಾಜು ಪುಡಿಯಾಗಿದೆ ಎಂಬ ಇನ್ನೊಂದು ವಾದವೂ ಕೇಳಿಬಂದಿದೆ.ರಾಹುಲ್‌ ಕಾರಿಗೆ ಹಾನಿಯಾಗಿರುವ ವಿಡಿಯೋ ಜಾಲತಾಣಗಳಲ್ಲಿ ವೈರಲ್‌ ಆಗಿದೆ. 

ಇದರ ಬೆನ್ನಲ್ಲೇ ಘಟನೆ ಕುರಿತು ಸ್ಪಷ್ಟನೆ ನೀಡಿರುವ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ‘ರಾಹುಲ್‌ ಕಾರಿನ ಮೇಲೆ ದಾಳಿ ನಡೆದಿದ್ದು ಪಶ್ಚಿಮ ಬಂಗಾಳದಲ್ಲಿ ಅಲ್ಲ. ಬಿಹಾರದ ಕಟಿಹಾರ್‌ನಲ್ಲಿ ಘಟನೆ ನಡೆದಿದೆ’ ಎಂದಿದ್ದಾರೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಕ್ಯಾನ್ಸರ್‌ ಅಂಶದ ಆತಂಕ: ದೇಶವ್ಯಾಪಿ ಮೊಟ್ಟೆ ಟೆಸ್ಟ್‌
ವೈದ್ಯೆಯ ಹಿಜಾಬ್‌ ಎಳೆದ ಸಿಎಂ ನಿತೀಶ್‌: ವಿವಾದ