ಸಿಎಎ ಜಾರಿಗೆ ತಡೆ ಕೋರಿ ಸುಪ್ರೀಂಗೆ ಒವೈಸಿ ಅರ್ಜಿ

KannadaprabhaNewsNetwork |  
Published : Mar 17, 2024, 01:51 AM ISTUpdated : Mar 17, 2024, 12:03 PM IST
ಓವೈಸಿ | Kannada Prabha

ಸಾರಾಂಶ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿಗೆ ತಡೆ ಕೋರಿ ಎಂಐಎಂ ಮುಖಂಡ ಅಸಾದುದ್ದೀನ್‌ ಒವೈಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ನವದೆಹಲಿ: ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ಧಾರ್ಮಿಕ ದೌರ್ಜನ್ಯಕ್ಕೊಳಗಾಗಿ ಬಂದಿರುವವರಿಗೆ ಪೌರತ್ವ ಕೊಡುವ ಸಲುವಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿಗೆ ತಡೆ ಕೋರಿ ಎಂಐಎಂ ಮುಖಂಡ ಅಸಾದುದ್ದೀನ್‌ ಒವೈಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಈ ಕುರಿತು ಸಲ್ಲಿಸಿರುವ ಅರ್ಜಿಯಲ್ಲಿ, ‘ಸಿಎಎ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ಇರುವ ಎಲ್ಲ ಅರ್ಜಿ ಇತ್ಯರ್ಥವಾಗುವವರೆಗೂ ಕಾನೂನು ಜಾರಿಗೆ ತಡೆ ನೀಡಬೇಕು. ಹಾಗೂ ಈಗಾಗಲೇ ಜಾರಿ ಮಾಡಿರುವ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನೂ ಸ್ಥಗಿತ ಮಾಡಲು ಸೂಚಿಸಬೇಕು’ ಎಂದು ಅರ್ಜಿ ಸಲ್ಲಿಸಿದ್ದಾರೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಕಾಂಚೀಪುರಂ: ಮಾನವರಿಲ್ಲ, ರೋಬೋಗಳೆ ಕೆಲ್ಸ ಮಾಡುವ 24/7 ಫ್ಯಾಕ್ಟ್ರಿ!
ಬೇಕೆಂದೇ ಜನಪ್ರಿಯ ಘೋಷಣೆಗಳ ಕೈ ಬಿಟ್ಟೆ : ಮೋದಿ ನೇರಮಾತು