ಅಜಿತ್‌ ಪವಾರ್‌ ಪಕ್ಷದಿಂದ 11 ಗ್ಯಾರಂಟಿ

KannadaprabhaNewsNetwork |  
Published : Nov 06, 2024, 11:53 PM IST
ಡಿಸಿಎಂ ಅಜಿತ್‌ ಪವಾರ್‌  | Kannada Prabha

ಸಾರಾಂಶ

ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಡಿಸಿಎಂ ಅಜಿತ್‌ ಪವಾರ್‌ ಬಣದ ಎನ್‌ಸಿಪಿ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, 11 ಗ್ಯಾರಂಟಿಗಳನ್ನು ಘೋಷಿಸಿದೆ.

ಮುಂಬೈ: ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಡಿಸಿಎಂ ಅಜಿತ್‌ ಪವಾರ್‌ ಬಣದ ಎನ್‌ಸಿಪಿ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, 11 ಗ್ಯಾರಂಟಿಗಳನ್ನು ಘೋಷಿಸಿದೆ.

ಈ ಪ್ರಣಾಳಿಕೆಯನ್ನು ಬಾರಾಮತಿಯಲ್ಲಿ ಅಜಿತ್‌ ಪವಾರ್‌, ಮುಂಬೈನಲ್ಲಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸುನಿಲ್‌ ತತ್ಕರೆ, ಗೊಂಡಿಯಾದಲ್ಲಿ ಕಾರ್ಯಾಧ್ಯಕ್ಷ ಪ್ರಫುಲ್‌ ಪಟೇಲ್‌ ಪ್ರತ್ಯೇಕವಾಗಿ ಬಿಡುಗಡೆ ಮಾಡಿದರು. - ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್‌ ಯೋಜನೆಯಡಿ ರಾಜ್ಯದ 2.3 ಕೋಟಿ ಮಹಿಳೆಯರಿಗೆ ಮಾಸಾಶನ ಹಾಲಿ 1500 ರು.ನಿಂದ 2100 ರು.ಗೆ ಏರಿಕೆ

-ಕೇಂದ್ರ ಹಾಗೂ ರಾಜ್ಯದ ನಿಧಿಯನ್ನು ಸಂಯೋಜಿಸಿ, ರೈತ ಸಮ್ಮಾನ್‌ ನಿಧಿಯ ಮೊತ್ತ 12,000 ರು.ನಿಂದ 15,000 ರು.ಗೆ ಹೆಚ್ಚಳ- ಅರ್ಹ ರೈತರ ಸಾಲ ಮನ್ನಾ: ಭತ್ತ ಬೆಳೆಗಾರರಿಗೆ ಪ್ರತಿ ಎಕರೆಗೆ 25,000 ರು. ಬೋನಸ್‌

- ಕನಿಷ್ಠ ಬೆಂಬಲ ಬೆಲೆಯ ಅಡಿ ಮಾರಾಟವಾಗುವ ಬೆಳೆಗಳಿಗೆ ಶೇ.20ರಷ್ಟು ಹೆಚ್ಚುವರಿ ಸಬ್ಸಿಡಿ- ಗ್ರಾಮೀಣ ಕೃಷಿ ಮೂಲಸೌಕರ್ಯ ಬಲವರ್ಧನೆಗೆ 45,000 ಪಕ್ಕಾ ರಸ್ತೆಗಳ ಅಭಿವೃದ್ಧಿ - ರಾಜ್ಯಾದ್ಯಂತ 25 ಲಕ್ಷ ಉದ್ಯೋಗ ಸೃಷ್ಟಿ - ವೃತ್ತಿಪರ ತರಬೇತಿ ಮೂಲಕ 10 ಲಕ್ಷ ವಿದ್ಯಾರ್ಥಿಗಳಿಗೆ 10,000 ರು. ಸ್ಟೈಫಂಡ್ - ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರಿಗೆ ಮಾಸಿಕ 15,000 ರು. ವೇತನ- ವಿದ್ಯುತ್‌ ಬಿಲ್‌ಗಳನ್ನು ಶೇ.30ರಷ್ಟು ಕಡಿಮೆ ಮಾಡಿ, ವಿದ್ಯುತ್‌ ಹಾಗೂ ನವೀಕರಿಸಬಹುದಾದ ಶಕ್ತಿ ಮೂಲಗಳಿಗೆ ಆದ್ಯತೆ- ಅಗತ್ಯ ವಸ್ತುಗಳ ಬೆಲೆ ಇಳಿಕೆಗೆ ಕ್ರಮ

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಈಗ ಖರ್ಗೆ ಹೆಗಲಿಗೆ ನಿರ್ಧಾರ ಯಾರು ಆಗ್ತಾರೆ ಕೇರಳಂ ಸಿಎಂ?
ಪಶ್ಚಿಮ ಬಂಗಾಳ ವಿಧಾನಸಭೆ ವಿರ್ಸಜನೆ ಗೌರ್‍ನರ್‌ ಗೇಟ್‌ ಪಾಸ್‌ : ದೀದಿ ಈಗ ಬೀದಿಗೆ!