ಅಧ್ಯಕ್ಷರ ಆಯ್ಕೆ ಮಾಡಲು ಆಗಿಲ್ಲ ಎಂದ ಅಖಿಲೇಶ್‌ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ತಿರುಗೇಟು

KannadaprabhaNewsNetwork |  
Published : Apr 03, 2025, 12:32 AM ISTUpdated : Apr 03, 2025, 07:03 AM IST
ಯಾದವ್ | Kannada Prabha

ಸಾರಾಂಶ

ವಕ್ಫ್‌ ತಿದ್ದುಪಡಿ ಮಸೂದೆ ಕುರಿತ ಚರ್ಚೆಯ ವೇಳೆ ಬಿಜೆಪಿ ಅಧ್ಯಕ್ಷರ ಆಯ್ಕೆಯ ವಿಚಾರವು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್‌ ಮತ್ತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ನಡುವೆ ವಾಗ್ವಾದಕ್ಕೆ ಕಾರಣವಾಗಿದೆ.

ನವದೆಹಲಿ: ವಕ್ಫ್‌ ತಿದ್ದುಪಡಿ ಮಸೂದೆ ಕುರಿತ ಚರ್ಚೆಯ ವೇಳೆ ಬಿಜೆಪಿ ಅಧ್ಯಕ್ಷರ ಆಯ್ಕೆಯ ವಿಚಾರವು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್‌ ಮತ್ತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ನಡುವೆ ವಾಗ್ವಾದಕ್ಕೆ ಕಾರಣವಾಗಿದೆ.

ಬುಧವಾರ ಲೋಕಸಭೆಯಲ್ಲಿ ಮಾತನಾಡಿದ ಅಖಿಲೇಶ್‌, ‘ವಿಶ್ವದಲ್ಲೇ ಅತಿ ದೊಡ್ಡ ರಾಜಕೀಯ ಪಕ್ಷವೆಂದು ಕರೆದುಕೊಳ್ಳುವ ಬಿಜೆಪಿಗೆ ರಾಷ್ಟ್ರಾಧ್ಯಕ್ಷರನ್ನು ಆಯ್ಕೆ ಮಾಡುವುದಕ್ಕೇ ಆಗುತ್ತಿಲ್ಲ’ ಎಂದರು.

ಇದಕ್ಕೆ ನಗುಮೊಗದಿಂದಲೇ ಉತ್ತರಿಸಿದ ಶಾ, ‘ಈ ಸದನದಲ್ಲಿರುವ ಪಕ್ಷಗಳ ರಾಷ್ಟ್ರಾಧ್ಯಕ್ಷರು ಕೇವಲ 5 ಪರಿವಾರಗಳಿಂದ ಆಯ್ಕೆಯಾದವರು. ನೀವೂ(ಅಖಿಲೇಶ್‌) ಸಹ ಇನ್ನು 25 ವರ್ಷ ಇದೇ ಹುದ್ದೆಯಲ್ಲಿರಲಿದ್ದೀರಿ. ಆದರೆ ನಾವು 12-13 ಕೋಟಿ ಸದಸ್ಯರನ್ನು ಪರಿಗಣಿಸಬೇಕಾಗಿರುವುದರಿಂದ ಸಹಜವಾಗಿ ಅಧಿಕ ಸಮಯ ತಗುಲುತ್ತದೆ’ ಎಂದರು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಫಾಸ್ಟ್ಯಾಗ್‌ ದಂಡದಲ್ಲಿ ಕರ್ನಾಟಕ ನಂ.1
ರೈಲ್ವೆ ಟಿಕೆಟ್‌ ದರ ಅಲ್ಪ ಹೆಚ್ಚಳ