ಕನ್ನಡಪ್ರಭ ವಾರ್ತೆ ಹುಬ್ಬಳ್ಳಿ
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದ ಕಾರಾಗೃಹಗಳಲ್ಲಿ ತೀವ್ರ ತಪಾಸಣೆ ನಂತರವೂ ಕದ್ದು ಮುಚ್ಚಿ ಮಾದಕ ದ್ರವ್ಯ ಬಳಕೆ ನಡೆಯುತ್ತಿರುವ ಬಗ್ಗೆ ಮಾಹಿತಿ ಬಂದಿದೆ. ಇದಕ್ಕೆ ಕಡಿವಾಣ ಹಾಕಲು ಕಠಿಣ ಕ್ರಮ ಕೈಗೊಳ್ಳಲಾಗುವುದು. ಜೈಲಿಗೆ ಒಳಬರುವ ಮತ್ತು ಹೊರಗಡೆ ಹೋಗುವ ಕೈದಿಗಳಿಗೆ ಕಡ್ಡಾಯವಾಗಿ ಎನ್ಡಿಪಿಎಸ್ ತಪಾಸಣೆ ಮಾಡಲಾಗುವುದು. ಕಾರಾಗೃಹಕ್ಕೆ ಬರುವ ಕೈದಿ ಸೇರಿದಂತೆ ಪ್ರತಿಯೊಬ್ಬರನ್ನು ಭೌತಿಕ ತಪಾಸಣೆಗೆ ಒಳಪಡಿಸಲಾಗುವುದು. ಇನ್ನೊಂದು ವಾರದಲ್ಲಿ ಇದು ಜಾರಿಗೆ ಬರಲಿದೆ. ಜೊತೆಗೆ, ಕಾರಾಗೃಹಗಳಲ್ಲಿ ಯಾವುದೇ ಗದ್ದಲ-ಗೊಂದಲ ಆಗದಂತೆ ತಡೆಯಲು ಯುವ ಅಪರಾಧಿಗಳು, ಹೊಸ ಕೈದಿಗಳನ್ನು ಪ್ರತ್ಯೇಕ ಕೋಣೆಯಲ್ಲಿ ಇರಿಸಲಾಗುವುದು ಎಂದು ತಿಳಿಸಿದರು.
ಕಾರಾಗೃಹಗಳಲ್ಲಿ ಕೈದಿಗಳಿಗೆ ಮೊಟಕುಗೊಂಡ ಶಿಕ್ಷಣವನ್ನು ಮುಂದುವರಿಸಲು ಅವಕಾಶ ಕಲ್ಪಿಸಲಾಗುವುದು. ಮೆಕ್ಯಾನಿಕಲ್, ಎಲೆಕ್ಟ್ರಾನಿಕ್ ಸೇರಿದಂತೆ ವಿವಿಧ ವಿಷಯಗಳಲ್ಲಿ ಕೌಶಲ್ಯಾಧಾರಿತ ತರಬೇತಿ ನೀಡಲಾಗುವುದು. ಜೈಲಿನಿಂದ ಬಿಡುಗಡೆಯಾದ ಬಳಿಕ ಅವರ ಜೀವನಕ್ಕೆ ಇದು ಸಹಕಾರಿಯಾಗಲಿದೆ. ಅಲ್ಲದೆ, ಕೈದಿಗಳು ಮಾನಸಿಕ ಒತ್ತಡದಿಂದ ಹೊರಬರಲು ಸಹಾಯವಾಗುವಂತೆ ಕೈದಿಗಳಿಗೆ ಯೋಗ, ಧ್ಯಾನ ಕಡ್ಡಾಯ ಮಾಡಲಾಗುವುದು ಎಂದು ಅವರು ತಿಳಿಸಿದರು.