ಆಂಧ್ರಪ್ರದೇಶದಲ್ಲೂ ಜಾತಿಗಣತಿ ನಡೆಸಲು ಸಚಿವಸಂಪುಟ ಅನುಮೋದನೆ

KannadaprabhaNewsNetwork |  
Published : Nov 04, 2023, 12:31 AM IST

ಸಾರಾಂಶ

ಜಾತಿ ಗಣತಿ, ರಾಜ್ಯ ಸರ್ಕಾರದಿಂದಲೇ ಹೂಡಿಕೆ ಬೆಂಬಲ ಬೋರ್ಡ್‌ ಸೇರಿದಂತೆ ಹಲವು ನಿರ್ಧಾರಗಳಿಗೆ ಆಂಧ್ರಪ್ರದೇಶ ಸಚಿವ ಸಂಪುಟ ಶುಕ್ರವಾರ ಅನುಮೋದನೆ ನೀಡಿದೆ.

ಅಮರಾವತಿ: ಜಾತಿ ಗಣತಿ, ರಾಜ್ಯ ಸರ್ಕಾರದಿಂದಲೇ ಹೂಡಿಕೆ ಬೆಂಬಲ ಬೋರ್ಡ್‌ ಸೇರಿದಂತೆ ಹಲವು ನಿರ್ಧಾರಗಳಿಗೆ ಆಂಧ್ರಪ್ರದೇಶ ಸಚಿವ ಸಂಪುಟ ಶುಕ್ರವಾರ ಅನುಮೋದನೆ ನೀಡಿದೆ. ಮುಖ್ಯಮಂತ್ರಿ ವೈ.ಎಸ್.ಜಗನ್‌ಮೋಹನ್‌ ರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಕೈಗಾರಿಕೆಗಳನ್ನು ಉತ್ತೇಜಿಸಲು ಸರ್ಕಾರದಿಂದಲೇ ಹೂಡಿಕೆ ಬೆಂಬಲ ಘಟಕ ಸ್ಥಾಪನೆ ಮಾಡಲು ಹಾಗೂ ಈ ಪ್ಯಾಕೇಜನ್ನು 2 ಆಹಾರ ಉತ್ಪಾದನಾ ಘಟಕ್ಕೆ ವರ್ಗಾಯಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಅಲ್ಲದೇ ಜಾತಿ ಗಣತಿ, ಶಾಲೆಗಳಲ್ಲಿ ಕೌಶಲ್ಯ ತಜ್ಞರ ನೇಮಕ, ಪೋಲಾವರಂ ಯೋಜನೆಯಿಂದ ಭೂಮಿ ಕಳೆದುಕೊಂಡ 12,984 ಕುಟುಂಬಗಳಿಗೆ ಉಚಿತ ಭೂಮಿ ನೀಡಿಕೆ, ಹಿಂಗಾರು ಬೆಳೆಗೆ 5000 ಕೋಟಿ ರು. ಸಾಲ ನೀಡಲು ಸಂಪುಟ ಒಪ್ಪಿಗೆ ಸೂಚಿಸಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಅಮೆರಿಕಕ್ಕೆ ತಲೆನೋವಾದ ಇರಾನ್‌ ಅಗ್ಗದ ಅಸ್ತ್ರಗಳು
ನಾಯಕನಿಲ್ಲದ ಇರಾನ್‌ಗೆ ನೇತೃತ್ವ ಯಾರದ್ದು?