ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ : ರೈಲಿಗೆ ಸಿಲುಕುವುದರಿಂದ ಪಾರಾದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು!

KannadaprabhaNewsNetwork |  
Published : Sep 07, 2024, 01:30 AM ISTUpdated : Sep 07, 2024, 04:39 AM IST
ಚಂದ್ರಬಾಬು ನಾಯ್ಡು  | Kannada Prabha

ಸಾರಾಂಶ

ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತಿರುವಾಗ ರೈಲಿಗೆ ಸಿಲುಕುವುದರಿಂದ ಬಚಾವ್‌ ಆಗಿದ್ದಾರೆ. ಘಟನೆ ಮಧುರಾನಗರದ ರೈಲ್ವೆ ಸೇತುವೆ ಮೇಲೆ ನಡೆದಿದ್ದು, ಭದ್ರತಾ ಸಿಬ್ಬಂದಿ ಸಿಎಂ ಅವರನ್ನು ಸುರಕ್ಷಿತ ಸ್ಥಳಕ್ಕೆ ಕರೆದೊಯ್ದರು.

ವಿಜಯವಾಡ: ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು ಗುರುವಾರ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತಿರುವಾಗ ರೈಲಿಗೆ ಸಿಲುಕುವುದರಿಂದ ಬಚಾವ್‌ ಆಗಿದ್ದಾರೆ. ಮಧುರಾನಗರದ ರೈಲ್ವೆ ಸೇತುವೆ ಮೇಲೆ ಈ ಘಟನೆ ನಡೆದಿದೆ.

ಪ್ರವಾಹ ಪರಿಸ್ಥಿತಿ ಬಗ್ಗೆ ಸಿಎಂ ರೈಲ್ವೆ ಸೇತುವೆ ಮೇಲೆ ಅಧಿಕಾರಿಗಳ ಜತೆ ಮಾತುಕತೆ ನಡೆಸಿದ್ದರು. ನಾಯ್ಡು ಹಳಿ ಮಧ್ಯದಲ್ಲೇ ನಡೆದು ಹೋಗುತ್ತಿದ್ದಾಗ, ಅದೇ ಹಳಿಯಲ್ಲಿ ಇದ್ದಕ್ಕಿದ್ದಂತೆ ರೈಲು ಬಂದಿದೆ. ತ್ವರಿತವಾಗಿ ಯೋಚಿಸಿದ ಭದ್ರತಾ ಸಿಬ್ಬಂದಿ ತಕ್ಷಣವೇ ನಾಯ್ಡು ಅವರನ್ನು ಹಳಿಯ ಪಕ್ಕದ ಪಾದಚಾರಿ ಮಾರ್ಗಕ್ಕೆ ಕರೆತಂದರು. ಕೆಲವೇ ಇಂಚಿನಲ್ಲಿ ನಾಯ್ಡು ಪಾರಾದರು.

ನಾಯ್ಡು ಕಳೆದ 5 ದಿನಗಳಿಂದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪ್ರವಾಸ ಮಾಡುತ್ತಿದ್ದಾರೆ, ಆಗಾಗ್ಗೆ ಭದ್ರತಾ ಪ್ರೋಟೋಕಾಲ್‌ಗಳನ್ನು ನಿರ್ಲಕ್ಷಿಸಿದ್ದಾರೆ. ಅವರು ಮೊಣಕಾಲು ಆಳದ ನೀರಿನಲ್ಲಿ ನಡೆದುಕೊಂಡು ಎನ್‌ಡಿಅರ್‌ಎಫ್‌ ಬೋಟ್‌ಗಳಿಗೆ ಜಿಗಿದ ಪ್ರಸಂಗಗಳೂ ನಡೆದಿವೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಅಮೆರಿಕ- ಇರಾನ್‌ ಯುದ್ಧ! ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಅಟ್ಯಾಕ್‌!
ಅಕ್ಕಪಕ್ಕದ ದೇಶಗಳಿಗೂ ಯುದ್ಧದ ಕೊಳ್ಳಿ